ತಾಜಾ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, …

Read More »

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿಯ ಹೆಮ್ಮಾಡಿ ಸಮೀಪದ ರಾಜಾಡಿಯಲ್ಲಿ ನಡೆದಿದೆ. ಕನ್ಯಾನ ಗ್ರಾಮದ ನಿವಾಸಿ ದಿ. ಕುಪ್ಪಯ್ಯ ಶೆಟ್ಟಿ ಎಂಬುವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ರವಿರಾಜ್ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಶನಿವಾರ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಆದರೆ ತಾಯಿಗೆ ಏನೂ ಹೇಳದೆ ಹೆಮ್ಮಾಡಿ ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳ್ತಂಗಡಿ: ಶೌಚಾಲಕ್ಕೆ ತೆರಳಿದ ಬಾಲಕಿ ಅನುಮಾನಸ್ಪದ ಸಾವು..!

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕಳಿಯಾ ಗ್ರಾಮದಲ್ಲಿ ಜನವರಿ 28ರ ಶನಿವಾರ ನಡೆದಿದೆ. ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್‌ ರಜಾಕ್‌ ಅವರ ಪುತ್ರಿ ಆಫೀಫಾ (16) ಸಾವನ್ನಪ್ಪಿದ ಬಾಲಕಿ. ಕಳಿಯಾ ಗ್ರಾಮದ ಐಮನ್‌ ಆರ್ಕೆಡ್‌ನ‌ಲ್ಲಿರುವ ಹಸೈನಾರ್‌ ಅವರ ಮನೆಯ ಶೌಚಾಲಯದೊಳಗೆ ಬಾಲಕಿ ಮೃತಪಟ್ಟಿದ್ದಾಳೆ. ಶನಿವಾರ ಗೇರುಕಟ್ಟೆಯಲ್ಲಿರುವ ಶಾಲೆಗೆ ತಂದೆಯೊಂದಿಗೆ ಈಕೆ ಬಂದಿದ್ದಳು. ತಂದೆಗೆ ಬೇರೆ ಕೆಲಸವಿದ್ದ ಕಾರಣ ಬಾಲಕಿಯನ್ನು ಕುಪ್ಪೆಟ್ಟಿಯಲ್ಲಿ ಬಿಟ್ಟು ಮಂಗಳೂರಿಗೆ ತೆರಳಿದ್ದರು. ಈ ವೇಳೆ ಬಾಲಕಿ ಆಫೀಫಾ ಶಾಲೆಯ ಸನಿಹದಲ್ಲಿರುವ ಐಮನ್ ಆರ್ಕೇಡ್‌ನ ಹಸೈನಾರ್‍ ಅವರ …

Read More »

ಮಂಗಳೂರು: ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ..!

ಮಂಗಳೂರು: ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು.ಇನ್ನು ಶನಿವಾರ ಬೆಳಗ್ಗೆ ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Read More »

ಆಧಾರ್ ಬಗ್ಗೆ ದೊಡ್ಡ ನವೀಕರಣ : ಸರ್ಕಾರ ನೀಡಿದ ಈ ಮಾಹಿತಿ ಕೇಳಿದ್ರೆ ಶಾಕ್ ಆಗ್ತೀರಾ!

ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ನಮಗೆಲ್ಲರಿಗೂ ಬಹಳ ಮುಖ್ಯವಾದ ದಾಖಲೆಯಾಗಿದೆ. ಈ ಕಾರ್ಡ್ ಇಲ್ಲದೆ ನಾವು ನಮ್ಮ ಮನೆಯಿಂದ ಬ್ಯಾಂಕಿನವರೆಗೆ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ. ಇಂದಿನ ದಿನಗಳಲ್ಲಿ ಎಲ್ಲ ಕೆಲಸಗಳಿಗೂ ಆಧಾರ್ ಅಗತ್ಯವಾಗಿದೆ. ಈ ಮಧ್ಯೆ ಆಧಾರ್‌ಗೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆಧಾರ್ ಮೂಲಕ ಇ-ಕೆವೈಸಿ ಸ್ಥಿರ ಬೆಳವಣಿಗೆಯನ್ನು ಕಾಣುತ್ತಿದೆ. ಆಧಾರ್​ ಇ-ಕೆವೈಸಿಯಲ್ಲಿ ವೇಗ ಆರ್ಥಿಕ ವರ್ಷ 2022-23 ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ 84.8 ಕೋಟಿಗೂ ಹೆಚ್ಚು ಇ-ಕೆವೈಸಿ ವಹಿವಾಟುಗಳನ್ನು ಆಧಾರ್ ಬಳಸಿಕೊಂಡು ಮಾಡಿದ್ದಾರೆ. ಇದು ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕಕ್ಕೆ …

Read More »

ಸನಾತನ ಧರ್ಮವೇ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್

ಜೈಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ “ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮ” ಎಂದು ಹೇಳಿದರು. ರಾಜಸ್ಥಾನದ ಭಿನ್ಮಾಲ್‌ ನ ನೀಲಕಂಠ ಮಹಾದೇವ ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಲ್ಲಾ ನಾಗರಿಕರು ಅದನ್ನು ಪಾಲಿಸಬೇಕೆಂದು ಒತ್ತಾಯಿಸಿದರು. ಅಯೋಧ್ಯೆಯ ರಾಮ ಮಂದಿರದ ಮಾದರಿಯಲ್ಲಿ ಹಾನಿಗೀಡಾದ ಪವಿತ್ರ ಸ್ಥಳಗಳನ್ನು ಪುನರ್‌ ನಿರ್ಮಾಣ ಮಾಡಲು ಅಭಿಯಾನವನ್ನು ಪ್ರಾರಂಭಿಸುವಂತೆ ಸಿಎಂ ಯೋಗಿ ಅವರು ಜನರನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಮತ್ತು ಕೇಂದ್ರ ಜಲವಿದ್ಯುತ್ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರುದ್ರಾಕ್ಷಿಯನ್ನು …

Read More »

ಉಡುಪಿಯಲ್ಲಿ ಅಮಾನವೀಯ ಕೃತ್ಯ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!

ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್. ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More »

ಮಂಗಳೂರಿನಲ್ಲಿ ಭೀಕರ ದುರಂತ: ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು. ವರುಣ್‌ ಅವರು ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ಸೂಕ್ತ ಸುರಕ್ಷತೆ ವಹಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ …

Read More »

ಬಸ್ ಚಕ್ರದಡಿಗೆ ಸಿಲುಕಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ. ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ …

Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರಿವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ …

Read More »

You cannot copy content of this page.