ತಾಜಾ ಸುದ್ದಿ

ಗಂಡ ಫ್ಲ್ಯಾಟ್ ನಲ್ಲಿ ಪ್ರಿಯತಮೆಯ ಜೊತೆ ಸರಸವಾಡುತ್ತಿದ್ದ ಸಮಯದಲ್ಲಿ ಎಂಟ್ರಿ ಕೊಟ್ಟ ಹೆಂಡತಿ ರೆಡ್ ಹ್ಯಾಂಡ್ ಆಗಿ ಹಿಡಿದು ಗಂಡ ಮತ್ತು ಪ್ರಿಯತಮೆಯನ್ನು ಮಾಡಿದ್ದೇನು ನೋಡಿ..!

ಇತ್ತೀಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತವೆ. ಇಲ್ಲಿ ನೋಡಿದರೂ ಗಂಡ ಬೇರೆಯೊಬ್ಬ ಹೆಂಡತಿಯ ಜೊತೆ ಓಡಿ ಹೋದ ಇಲ್ಲ ಹೆಂಡತಿ ಬೇರೊಬ್ಬ ಗಂಡ ಜೊತೆ ಓಡಿ ಹೋದ ಎಂಬ ಸುದ್ದಿಯೇ. ಇಂತಹ ಪ್ರಕರಣಗಳಿಗೆ ಯಾವಾಗ ಕಠಿಣ ಬೀಳುತ್ತೆ ಗೊತ್ತಿಲ್ಲ. ಅಥವಾ ಇಂಥ ಪ್ರಕರಣಗಳಿಗೆ ಅಂತ್ಯವೇ ಇಲ್ಲವೇ ಎಂಬುದು ಕೂಡ ತಿಳಿದಿಲ್ಲ.. ಹೈದರಾಬಾದ್ ನ ಪ್ರಗತಿ ನಗರದಲ್ಲಿ ಗಂಡ ಹೆಂಡತಿಯ ಮಧ್ಯ ನಡೆದ ಒಂದು ಪ್ರಕರಣ ಪ್ರತಿಯೊಬ್ಬರನ್ನು ಹುಬ್ಬೇರಿಸುವಂತೆ ಮಾಡಿದೆ.. ಹೈದ್ರಾಬಾದ್ ನ  ಪ್ರಗತಿ ನಗರದಲ್ಲಿ ಲಕ್ಷ್ಮಣ್ ನೇಮ ಪುರುಷ ಸೌಜನ್ಯ …

Read More »

ತಾಯಿ-ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವೀಸ್ಟ್- ಮಗಳನ್ನೇ ಹತ್ಯೆ ಮಾಡಿದ ತಾಯಿ

ರವಿವಾರ ರಾತ್ರಿ ತಾಯಿ ಹಾಗೂ ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಿಗೂಢ ಘಟನೆಯನ್ನು ಭಾಗಶ: ಬೇಧಿಸುವಲ್ಲಿ ಬೇಡಡ್ಕ ಪೊಲೀಸರು ಸಫಲರಾಗಿದ್ದು, ತಾಯಿ ಮಗಳನ್ನು ಹತ್ಯೆ ಮಾಡಿದ ಬಳಿಕ ಆಕೆ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸ್‌ ತನಿಖೆಯಲ್ಲಿ ಮೇಲ್ನೋಟಕ್ಕೆ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕಾಸರಗೋಡಿನ ಕುಂಡಂಕುಳಿ ನೀರ್ಕಯದ ಟೂರಿಸ್ಟ್ ಚಾಲಕ ಚಂದ್ರನ್‌ರ ಪತ್ನಿ ನಾರಾಯಣಿ (45) ಮತ್ತು ಅವರ ಪುತ್ರಿ ಏಳನೇ ತರಗತಿ ವಿದ್ಯಾರ್ಥಿನಿ ಶ್ರೀನಂದ (12)ಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶ್ರೀನಂದಳ ಮೃತದೇಹ ಮನೆಯೊಳಗೂ, ನಾರಾಯಣಿಯ ಮೃತದೇಹ …

Read More »

ಕೇರಳದ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ದೇವರ ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ: ಹಿಂದು ಸಂಘಟನೆ ಆಕ್ರೋಶ

ತ್ರಿಸ್ಸೂರ್:  ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ. ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು …

Read More »

ಫ್ಲೈಓವರ್ ಮೇಲಿಂದ ಹಣದ ರಾಶಿಯನ್ನು ಎಸೆದ ಯುವಕ-ನೋಟು ಸಂಗ್ರಹಿಸಲು ಮುಗಿಬಿದ್ದ ಜನ..!

ಬೆಂಗಳೂರು: ವ್ಯಕ್ತಿಯೋರ್ವ ಫ್ಲೈಓವರ್ ಮೇಲಿಂದ 10 ರೂ.ಮುಖಬೆಲೆಯ ನೋಟುಗಳ ರಾಶಿಯನ್ನು ಎಸೆದಿದ್ದು ನೋಟು ಹೆಕ್ಕಲು ಜನ ಮುಗಿಬಿದ್ದಿರುವ ಘಟನೆ ನಡೆದಿದೆ. ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲಿಂದ 10 ರೂ. ಮುಖಬೆಲೆಯ ನೋಟುಗಳನ್ನು ಶೂಟ್ ಧರಿಸಿ, ಕೊರಳಿಗೆ ಗಡಿಯಾರ ನೇತು ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿ ಎಸೆದಿದ್ದಾನೆ ಎನ್ನಲಾಗಿದೆ. ಫ್ಲೈಓವರ್ ಮೇಲಿಂದ ಹಣ ಬೀಳುತ್ತಿದ್ದಂತೆ ಅಲ್ಲಿದ್ದವರು ಅದನ್ನು ಎತ್ತಿಕೊಳ್ಳಲು ಮುಗಿಬಿದ್ದಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.

Read More »

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರು ಗಂಭೀರ

ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ …

Read More »

ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ‌ ಯುವಕರು..!

ಮಧ್ಯಪ್ರದೇಶ: ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ‌ ಯುವಕರಿಗೆ ಭಜರಂಗದಳದ ಕಾರ್ಯಕರ್ತರು ಥಳಿಸಿರುವ ಘಟನೆ ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ನಡೆದಿದೆ. ಹುಟ್ಟು ಹಬ್ಬ‌ ಕಾರ್ಯಕ್ರಮದ ವೇಳೆ  ನುಗ್ಗಿದ ಬಜರಂಗದಳ ಕಾರ್ಯಕರ್ತರ ಗುಂಪು ಯುವಕರನ್ನು ಥಳಿಸಿದೆ. ಬಳಿಕ ಯುವಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.

Read More »

ಕೇರಳದ ಇಬ್ಬರು ವಿದ್ಯಾರ್ಥಿಗಳಿಗೆ ʻನೊರೊವೈರಸ್ʼ ಸೋಂಕು, ಶಾಲೆಗೆ ಬೀಗ

ಕೇರಳ: ಕೇರಳದ ಇಬ್ಬರು ವಿದ್ಯಾರ್ಥಿಗಳಗೆ ನೊರೊವೈರಸ್‌(norovirus) ಪಾಸಿಟಿವ್ ಬಂದಿದ್ದು, 15 ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಾಂಕ್ರಾಮಿಕ ರೋಗದ ಲಕ್ಷಣಗಳು ಕಂಡುಬಂದಿದೆ. ಹೀಗಾಗಿ, ಕೊಚ್ಚಿಯ ಖಾಸಗಿ ಶಾಲೆಯನ್ನು ಸೋಮವಾರ ಮುಚ್ಚಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.   ನೊರೊವೈರಸ್‌ ಸೋಂಕು ತಡೆಗಟ್ಟಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸೋಂಕಿತ ಮಕ್ಕಳು 5 ರಿಂದ 10 ವರ್ಷ ವಯಸ್ಸಿನವರಾಗಿದ್ದಾರೆ. ಕೆಲವು ಪೋಷಕರಲ್ಲೂ ಕೂಡ ಇದರ ರೋಗಲಕ್ಷಣಗಳನ್ನು ಕಂಡುಬಂದಿದೆ. ಅಲಪ್ಪುಳದ ಪ್ರಾದೇಶಿಕ ವೈರಾಲಜಿ ಲ್ಯಾಬ್‌ನಲ್ಲಿ ಮಕ್ಕಳ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ …

Read More »

ಕತ್ತಿಯಿಂದ ಕೇಕ್ ಕತ್ತರಿಸಿದ ಅತ್ಯಾಚಾರ ಆರೋಪಿ ʻಗುರ್ಮೀತ್ ರಾಮ್ ರಹೀಮ್ʼ. ವಿಡಿಯೋ ವೈರಲ್

ನವದೆಹಲಿ: ಪ್ರಸ್ತುತ 40 ದಿನಗಳ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಅಪರಾಧಿ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವುದು ಕಂಡುಬಂದಿದೆ. ಅತ್ಯಾಚಾರ ಮತ್ತು ಕೊಲೆಗಾಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ ಮೇಲೆ ಹೊರ ಬಂದಿದ್ದಾನೆ.   ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದ ರಾಮ್ ರಹೀಮ್ ಕೇಕ್ ಅನ್ನು ಕತ್ತಿಯಿಂದ ಕತ್ತರಿಸುವ ಮೂಲಕ ಜೈಲಿನಿಂದ ಹೊರ …

Read More »

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ : ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್

ಬೆಂಗಳೂರು : ಫೆಬ್ರವರಿ 6ರಂದು ಬೆಂಗಳೂರಿಗೆ ಮತ್ತೆ ಪ್ರಧಾನಿ ಆಗಮನ ಹಿನ್ನೆಲೆ ಮೆಗಾ ರೋಡ್ ಶೋಗೆ ಭರ್ಜರಿ ಪ್ಲಾನ್ ಮಾಡಲಾಗುತ್ತಿದ್ದು, ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ. ಫೆಬ್ರವರಿ 6ರಂದು ಬೆಂಗಳೂರಿನ ಹೆಚ್‌ ಎ ಎಲ್‌ನಲ್ಲಿ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮನ ವೇಳೆ ಬೆಂಗಳೂರ ಪ್ರಮುಖ ನಗರಗಳಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ ಮನವಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಸಿದ ರೋಡ್‌ ಶೋ ಮಾದರಿಯಲ್ಲಿ ಮೂರು ಕ್ಷೇತ್ರಗಳ ಟಾರ್ಗೆಟ್ ಮಾಡಿ ರೋಡ್ ಶೋಗೆ ತಂತ್ರ ರೂಪಿಸಲಾಗಿದೆ. ಮಹದೇವಪುರ, ಕೆ.ಆರ್.ಪುರಂ, ಸಿ.ವಿ.ರಾಮನ್ …

Read More »

ಕೇಸರಿ ಶಾಲು, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬಲ್ಲ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಚಿಕ್ಕಮಗಳೂರು : ಹಿಂದೂಪರ ಸಂಘಟನೆಗಳ ವಿರುದ್ಧ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ, ಹಿಂದೂಪರ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಅಯೋಧ್ಯೆ ಹೋರಾಟದಲ್ಲಿ ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಹಿಂದೂಪರ ಸಂಘಟನೆಗಳು ಹೋರಾಟದಲ್ಲಿ ಲಕ್ಷಾಂತರ ಜನರನ್ನ …

Read More »

You cannot copy content of this page.