ತಾಜಾ ಸುದ್ದಿ

ಸುರತ್ಕಲ್:  ರೈಲು ಹಳಿ ಮೇಲೆ ಅಪರಿಚಿತ ಯುವಕನ ಶವ ಪತ್ತೆ..!

ಸುರತ್ಕಲ್: ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.

Read More »

ಬೆಳ್ತಂಗಡಿ: ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ: 3 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ  ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ  ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ  ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ. ಹಮೀದ್ , ಇಸ್ಮಾಯಿಲ್ ಮತ್ತು …

Read More »

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ-ಸಾರ್ವಜನಿಕರಿಂದ ಗೂಸಾ

ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

Read More »

ಮಂಗಳೂರು ನಗರ ಪೋಲೀಸ್ ಕಮಿಷನರ್ ಶಶಿಕುಮಾರ್ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಹೆಣ್ಣಿನ ಸ್ವಾತಂತ್ರ್ಯ್, ಮಾರಕ ವಸ್ತುಗಳಿಂದ ಆಗುವ ಕೆಡುಕು ಹಾಗೂ ಅದನ್ನು ತಡೆಗಟ್ಟುವ ರೀತಿ ಹಾಗೂ ಪೊಲೀಸರು ತೆಗೆದುಕೊಳ್ಳುತ್ತಿರುವ ಕ್ರಮ, ಹೆಚ್ಚುತ್ತಿರುವ ಟ್ರಾಫಿಕ್ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ವಿದ್ಯಾಥಿಗಳೊಂದಿಗೆ ಪೋಲಿಸ್ ಕಮಿಷನರ್ ಎನ್. ಶಶಿಕುಮಾರ್ ಚರ್ಚಿಸಿದರು. ಐ.ಪಿ.ಎಸ್ ಆಗುವುದರ ಹಿಂದಿರುವ ಪರಿಶ್ರಮ, ವಿದ್ಯಾಭ್ಯಾಸದ ಹಾದಿ ಹಾಗೂ ಜೀವನದ ಗುರಿಯನ್ನು ತಲುಪಲು ಗುರುವಿನ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮಣೆಲ್ ಅಣ್ಣಪ್ಪ ನಾಯಕ್, ಕಾರ್ಯದರ್ಶಿ ಜೀವನ್ ದಾಸ್ ನಾರಾಯಣ, ಉಪಾಧ್ಯಕ್ಷರು ಹಾಗೂ …

Read More »

ಉಡುಪಿ: ಬನ್ನಂಜೆಯಲ್ಲಿ ಹಳೇ ಅಪರೂಪದ ಉಬ್ಬುಶಿಲ್ಪದ ಶಾಸನ ಪತ್ತೆ..!

ಉಡುಪಿ: ಉಡುಪಿ ಜಿಲ್ಲೆಯ ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿ ಹಳೇ ಶಾಸನವೊಂದು ಪತ್ತೆಯಾಗಿದೆ. ಗ್ರಾಮದ ಶನೇಶ್ವರ ದೇವಸ್ಥಾನದ ಹಿಂಬದಿಯ ಪೊದೆಯಲ್ಲಿ ನಿರ್ಪುಗಲ್ಲು ಎಂದು ಹೇಳುವ ಈ ಶಾಸನ ಪತ್ತೆಯಾಗಿದೆ. ಸುಮಾರು 1.5 ಅಡಿ ಅಗಲ ನಾಲ್ಕು ಅಡಿ ಎತ್ತರ ಇರುವ ಈ ಶಾಸನದ ಬಲಭಾಗದಲ್ಲಿ ಚಂದ್ರ ಎಡ ಭಾಗದಲ್ಲಿ ಸೂರ್ಯ. ಮಧ್ಯಭಾಗದಲ್ಲಿ ಪೀಠ ಇರುವ ಶಿವಲಿಂಗದ ಕೆಳಗೆವೀರ ಪುರುಷನಂತೆ ಖಡ್ಗ ಮತ್ತು ಗುರಾಣಿ ಹಿಡಿದಿರುವಂತೆ ವಸ್ತ್ರ ಸಹಿತ ಕಂಡು ಬಂದಿದೆ. ಓರೆಮುಖ ಎತ್ತರಕ್ಕೆ ಮಾಡಿ ಎಡಗಾಲು ಎತ್ತಿಕೊಂಡು ವೀರ ಪುರುಷನಂತೆ ನಿಂತಿರುವ ಉಬ್ಬುಶಿಲ್ಪ ಈ ಶಾಸನದಲ್ಲಿ …

Read More »

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು.ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

Read More »

ಮಾನಸಿಕ ಅಸ್ವಸ್ಥೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೊ ಚಿತ್ರೀಕರಿಸಿದ ದುರುಳರು

ಮುಂಬೈ: ಬಹಿರ್ದೆಸೆಗೆ ತೆರಳಿದ್ದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್ಕೊಪರ್‌ನಲ್ಲಿ ನಡೆದಿದೆ. ಆರೋಪಿಗಳು ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಶೌಚಾಲಯದ ಒಳಗೆ ಕರೆದೊಯ್ದು ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿದ್ದಾರೆ. ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಗೂ ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದ ವಿಡಿಯೊವನ್ನು ಗಮನಿಸಿದ ಬಾಲಕಿಯ ಸಹೋದರ, ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376, 376(ಜೆ), 323, 500 ಮತ್ತು ಪೊಕ್ಸೊ ಸೆಕ್ಷನ್ 4 ಹಾಗೂ ಐಟಿ …

Read More »

ಇನ್ಮುಂದೆ ಈ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸಿಗಲಿದೆ 60 ದಿನಗಳ ಮುಟ್ಟಿನ ರಜೆ

ಕೊಚ್ಚಿ: ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ ನೀಡಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಘೋಷಿಸಿದ್ದಾರೆ. ಈಗ ಋತುಸ್ರಾವ ರಜೆ ಸೇರಿದಂತೆ ವಿದ್ಯಾರ್ಥಿನಿಯರ ಹಾಜರಾತಿ ಶೇ.73ರಷ್ಟಿ ಇರಬೇಕು . ಅದು ಈ ಹಿಂದೆ ಶೇ.75ರಷ್ಟಿತ್ತು. ಕೊಚ್ಚಿನ್ ಯುನಿವರ್ಸಿಟಿ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ (ಕುಸಾಟ್) ಅನ್ನು ಅನುಸರಿಸಿ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಗಳನ್ನು ನೀಡಲು ಪರಿಗಣಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಈ ಹಿಂದೆ ಘೋಷಿಸಿತ್ತು. ಕುಸಾಟ್ ಶನಿವಾರ (ಜನವರಿ 14) ತನ್ನ ವಿದ್ಯಾರ್ಥಿನಿಯರಿಗೆ …

Read More »

BIGG NEWS : “ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು” ; ಜೈಲಿಂದ್ಲೇ ವಿಡಿಯೋ ಹರಿಬಿಟ್ಟ ಉಗ್ರ ‘ಮಕ್ಕಿ

ಜೈಲಿನಲ್ಲಿರುವ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿ ಮತ್ತೊಂದು ವಿಡಿಯೋ ಹರಿ ಬಿಟ್ಟಿದ್ದು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಹೇಳಿದ್ದಾರೆ. ಅಂದ್ಹಾಗೆ, ಮಕ್ಕಿಯನ್ನ ಇತ್ತೀಚೆಗೆ ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಲಾಗಿದ್ದು, ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ ನಂತ್ರ ಕಾಶ್ಮೀರದ ಬಗ್ಗೆ ಮಾತನಾಡುವ ವೀಡಿಯೊವನ್ನ ಮಕ್ಕಿ ಬಿಡುಗಡೆ ಮಾಡಿದ್ದಾನೆ.   ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿ ತನ್ನ ವೀಡಿಯೊದಲ್ಲಿ ಕಾಶ್ಮೀರವನ್ನ ‘ಪಾಕಿಸ್ತಾನದ ರಾಷ್ಟ್ರೀಯ ಸಮಸ್ಯೆ’ ಎಂದು ಹೇಳಿದ್ದು, ಲಾಹೋರ್’ನ ಕೋಟ್ ಲಖ್ಪತ್ ಜೈಲಿನಿಂದ ವೀಡಿಯೊವನ್ನ ಬಿಡುಗಡೆ ಮಾಡಿದ್ದಾನೆ. ಇನ್ನು ಅಲ್-ಖೈದಾ ಅಥವಾ ಇಸ್ಲಾಮಿಕ್ ಸ್ಟೇಟ್ನೊಂದಿಗೆ ಯಾವುದೇ ಸಂಬಂಧವನ್ನ …

Read More »

BREAKING NEWS : ಗಣರಾಜ್ಯೋತ್ಸವದ ಬಗ್ಗೆ ವಿವಾದಾತ್ಮಕ ಹೇಳಿಕೆ : ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲು

ಬೆಂಗಳೂರು : ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ. ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ’ ಎಂದು ನಟಿ ರಚಿತಾ ರಾಮ್ ಹೇಳಿಕೆ ನೀಡಿದ್ದರು. ರಚಿತಾ ರಾಮ್ ಹೇಳಿಕೆ ಸಖತ್ ವೈರಲ್ ಆಗಿ ವ್ಯಾಪಕ ಟೀಕೆ, ಟ್ರೋಲ್ ಗೆ ಕಾರಣವಾಗಿತ್ತು, ಇದೇ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ. …

Read More »

You cannot copy content of this page.