ತಾಜಾ ಸುದ್ದಿ

ಧರ್ಮಸ್ಥಳ: ಭಕ್ತಾದಿಗಳ ಪ್ರೀತಿಯ ‘ಗಿರೀಶ’ ಇನ್ನಿಲ್ಲ- ಕಣ್ಣೀರು ಮಿಡಿದ ಖಾವಂದರು

ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಕುಲ ಗೋಶಾಲೆಯಲ್ಲಿದ್ದ, ಹೆಗ್ಗಡೆಯವರ‌ ಪ್ರೀತಿಯ ಗೀರ್ ತಳಿಯ ಎತ್ತು ಗಿರೀಶ ಜ.18 ರಂದು ರಾತ್ರಿ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ಬಹಳ ವರ್ಷಗಳಿಂದ ಈ ಗೋಶಾಲೆಯಲ್ಲಿದ್ದ ಗಿರೀಶನಿಗೆ 18 ವರ್ಷ ವಯಸ್ಸು. ಕ್ಷೇತ್ರದ ಯಾವುದೇ ಉತ್ಸವಗಳಿಗೂ ಬಸವನಾಗಿ ಗಿರೀಶನೇ ಮುಂಚೂಣಿಯಲ್ಲಿತ್ತು. ಉತ್ಸವಗಳಿಗೆ ಹೋಗುವುದರಲ್ಲೇ ಸಂತೋಷ ಪಡುತ್ತಿದ್ದ ಈ ಬಸವ ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ.ಎಲ್ಲರೊಂದಿಗೆ ಸಕ್ರೀಯವಾಗಿದ್ದ ಗಿರೀಶನಿಗೆ ದಿಢೀರ್ ಹೃದಯಾಘಾತ ಸಂಭವಿಸಿ ಉಸಿರುಚೆಲ್ಲಿದೆ. ಜ.19 ರಂದು ಬೆಳಗ್ಗೆ 11 ಗಂಟೆ ವೇಳೆ ಗೌರವಯುತವಾಗಿ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಗಿರೀಶ ಶ್ರೀ ಕ್ಷೇತ್ರ ಧರ್ಮಸ್ಥಳದ …

Read More »

ವಿಟ್ಲ ಜಾತ್ರೆಯ ಸಂತೆಯಲ್ಲಿ ವ್ಯಾಪಾರಿಗೆ ಹಲ್ಲೆ-ಆರು ಮಂದಿ ಆರೋಪಿಗಳು ಅಂದರ್

ವಿಟ್ಲ: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ. ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ. ಸುರೇಶ್‌ ದಾಸ್‌ ಎಂಬವರು ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ …

Read More »

ಮಂಗಳೂರು: ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ – 3 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮಂಗಳೂರು: ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪುಂಜಾಲಕಟ್ಟೆ ಪೊಲೀಸರಿಗೆ ಹೈಕೋರ್ಟ್‌ ಆದೇಶಿಸಿದೆ. ಡಿ.3 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಯುವ ವಕೀಲ ಕುಲದೀಪ್ ಶಟ್ಟಿ ಅವರ ಮೇಲೆ ಅಮಾನುಷವಾಗಿ ವರ್ತಿಸಿ ಹಲ್ಲೆ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು. ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್‌ ಇನ್ಸ್‌ಪೆಕ್ಟರ್‌ ಕೆ.ಪಿ ಸುತೇಶ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ಪರಿಹಾರ ಒದಗಿಸಬೇಕು ಎಂದು ಕೋರಿ ಯುವ ವಕೀಲ ಕುಲದೀಪ್‌ ಶೆಟ್ಟಿ ನ್ಯಾಯಲಯದಲ್ಲಿ …

Read More »

ಒಂಟಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು

ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ. ಈ ವಿಷಯ ಗುರುವಾರ (ಜ.19) ಬೆಳಕಿಗೆ ಬಂದಿದೆ. ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು. ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಇವರು ಒಳಗಾಗಿದ್ದರು ಎನ್ನಲಾಗಿದೆ. …

Read More »

ಉಡುಪಿ: ಮಣಿಪಾಲ ಇನ್ ಹೊಟೇಲ್ ಬಳಿ ಸ್ಕೂಟರ್ ಗೆ ಲಾರಿ ಡಿಕ್ಕಿ: ಸಮೋಸ ಮಾರಾಟಗಾರ ಸಾವು

ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಸ್ಕೂಟರ್ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಮೃತ ಅಬ್ದುಲ್ ರಶೀದ್ ಸಮೋಸ ಮಾರಾಟದ ವೃತ್ತಿ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ …

Read More »

ಕಾರ್ಕಳ : ಸರಕಾರಿ ಆಸ್ಪತ್ರೆಯಲ್ಲಿ 1,30 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಕಳವು

ಕಾರ್ಕಳ : ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳುವಾಗಿರುವ ಘಟನೆ ನಡೆದಿದೆ. ಶಿರ್ಲಾಲಿನ ಸಂಕೇತ್ ಎಂಬವರ ಪತ್ನಿ ಉಷಾ ಹೆರಿಗೆಗೆಂದು ಜ.15 ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 16ರಂದು ಹೆರಿಗೆಯಾದ ಬಳಿಕ ಹೆರಿಗೆ ವಾರ್ಡ್ನಲ್ಲಿ ದಾಖಲಾಗಿದ್ದು ಜ.17ರಂದು ಮಧ್ಯಾಹ್ನದ ವೇಳೆ ಸ್ನಾನಕ್ಕೆಂದು ಹೋದವರು ಅಲ್ಲಿಯೇ ತನ್ನ ಚಿನ್ನದ ಕರಿಮಣಿ ಸರವನ್ನು ಇರಿಸಿದ್ದರು. ಆದರೆ ಸ್ನಾನ ಮಾಡುವ ಸಂದರ್ಭದಲ್ಲಿ ತಲೆ ಸುತ್ತು ಬಂದು ಬಿದ್ದ ಅವರನ್ನು ಅವರ ತಾಯಿ ಕರೆತಂದು ಮಲಗಿಸಿದ್ದರು. ಸುಮಾರು ಒಂದು ಗಂಟೆಯ ಬಳಿಕ …

Read More »

ಬೆಡ್ ರೂಮ್ ಫೋಟೋಶೂಟ್ : ಟ್ರೋಲಿಗರ ಬಾಯಿಗೆ ಆಹಾರವಾದ ನಟಿ ಅಂಕಿತಾ ಲೋಖಂಡೆ

ಜನ ತಮ್ಮ ಫೋಟೋ ಶೂಟ್ ಇತರರಿಗಿಂತ ವಿಭಿನ್ನವಾಗಿರಲೆಂದು ಸಾಕಷ್ಟು ಬೇರೆ ಬೇರೆ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಸದ್ಯ ಹಿಂದಿ ಕಿರುತೆರೆ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ ಜೋಡಿ ತಮ್ಮ ಬೆಡ್ ರೂಮ್ ಫೋಟೋಶೂಟ್ ಮಾಡಿಸಿ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. ಫೋಟೋಶೂಟ್ ನಲ್ಲಿ ಅಂಕಿತಾ ಕಪ್ಪು ಪೈಟಿನಿ ಸೀರೆಯಲ್ಲಿ ಪರಿಪೂರ್ಣ ಮರಾಠಿ ವಧುವಿನಂತೆ ಕಾಣುತ್ತಿದ್ದಾರೆ. ಅದೇ ಸಮಯದಲ್ಲಿ, ಅವರ ಪತಿ ವಿಕ್ಕಿ ಜೈನ್ ಕೂಡ ಕಪ್ಪು ಕುರ್ತಾದಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ. ಆದರೆ, ಬೆಡ್ ರೂಮ್ ನಲ್ಲಿರುವ ಆಕೆಯ ರೋಮ್ಯಾಂಟಿಕ್ ಫೋಟೋಗಳಿಂದಾಗಿ ಜನರು …

Read More »

ಮುರುಡೇಶ್ವರ ಬೀಚ್ ನಲ್ಲಿ ಇಬ್ಬರು ಯುವಕರು ಸಮುದ್ರಪಾಲು

ಶಿವಮೊಗ್ಗ: ಮುರುಡೇಶ್ವರ ಬೀಚ್ ನಲ್ಲಿ ಸಮುದ್ರಪಾಲಾಗಿದ್ದ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಸಾಗರ ತಾಲೂಕಿನ ಪುನೀತ್(30) ಹಾಗೂ ರಾಘವೇಂದ್ರ(17) ಮೃತಪಟ್ಟವರು.ಪುನೀತ್ ಮೃತದೇಹವು ಮಂಗಳವಾರ ಪತ್ತೆಯಾಗಿದ್ದರೆ, ರಾಘವೇಂದ್ರ ಮೃತದೇಹ ಇಂದು ಪತ್ತೆಯಾಗಿದೆ. ಸೋಮವಾರ ಸಂಜೆ ಮೂವರು ಗೆಳೆಯರು ಮುರುಡೇಶ್ವರಕ್ಕೆ ಪ್ರವಾಸಕ್ಕೆ ತೆರಳಿದ್ದರು.ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನೀರುಪಾಲಾಗಿದ್ದರು. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

2ನೇ ಮದುವೆಗಾಗಿ ಕೊರಗಜ್ಜನಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ

ಕೊಡಗಿನ ಬೆಡಗಿ ಪ್ರೇಮಾ ಕೊರಗಜ್ಜನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು ಕೊರಗಜ್ಜ ಸನ್ನಿಧಿಗೆ ಬಂದಿದ್ದ ಪ್ರೇಮಾ, ಭಕ್ತಿಯಿಂದ ಎರಡನೇ ಮದುವೆಗೆ ಕರುಣಿಸು ಎಂದು ಪಾರ್ಥಿಸಿದ್ದಾರಂತೆ. ಖಾಸಗಿ ಕಾರ್ಯಕ್ರಮಕ್ಕೆಂದು ಬಂದಿದ್ದ ಅವರು, ಇದೇ ಸಂದರ್ಭದಲ್ಲಿ ಕೊರಗಜ್ಜ ಸನ್ನಿಧಿಗೂ ಭೇಟಿ ನೀಡಿದ್ದಾರೆ. ಈಗಾಗಲೇ ಅವರು ವರ ನೋಡಿದ್ದು ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಲ್ಲಿ ಪ್ರೇಮಾ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಕಾಪುವಿನ ಕೊರಗಜ್ಜ ದೈವ ಸನ್ನಿಧಾನಕ್ಕೆ ಭೇಟಿ ಕೊಟ್ಟ ನಂತರ …

Read More »

ವಿಟ್ಲ; ಮನೆಗೆ ಆಕಸ್ಮಿಕವಾಗಿ ಬೆಂಕಿ, ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಬೆಚ್ಚಿಬಿದ್ದ ಜನ

ವಿಟ್ಲ: ಮನೆಯೊಂದಕ್ಕೆ ಬೆಂಕಿ ತಗುಲಿ‌ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ. ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ‌ ನಂದಿಸುವ ಕೆಲಸವನ್ನು ಮಾಡಿದ್ದಾರೆ.

Read More »

You cannot copy content of this page.