ತಾಜಾ ಸುದ್ದಿ

ಯುವಕನ ಮೇಲೆ ನಾಲ್ವರು ಹುಡುಗಿಯರಿಂದ ಅತ್ಯಾಚಾರ?

ಜಲಂಧರ್: ಪಂಜಾಬ್‌ನ ಜಲಂಧರ್‍ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20ರ ಹರೆಯದ ನಾಲ್ವರು ಹುಡುಗಿಯರು ತನ್ನನ್ನು ಅಪಹರಿಸಿ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ವ್ಯಕ್ತಿಯೊಬ್ಬ ಆರೋಪಿಸಿದ್ದಾನೆ. ಇದು ಕೇಳಲು ವಿಚಿತ್ರ ಎನಿಸಿದರೂ ನಿಜವಾಗಿಯೂ ನಡೆದಿರುವ ಘಟನೆ. ನಾಲ್ವರು ಯುವತಿಯರು ನನ್ನ ಕಣ್ಣಿಗೆ ರಾಸಾಯನಿಕ ಸಿಂಪಡಿಸಿ, ನಂತರ ಕಿಡ್ನಾಪ್ ಮಾಡಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದರು. ಅರಣ್ಯ ಪ್ರದೇಶದಲ್ಲಿ ನನಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತ ವ್ಯಕ್ತಿ ಆರೋಪಿಸಿದ್ದಾನೆ. ನಂತರ ಆ ವ್ಯಕ್ತಿಯನ್ನು ಯುವತಿಯರು ನಗರ ಪ್ರದೇಶದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದರಂತೆ. …

Read More »

ಕುಲಾಲ ಕುಟುಂಬ ಸಂಗಮ,ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಕುಂಬಳೆ : ಕಾಸರಗೋಡು ಕುಲಾಲ ಸಂಘ ಕುಂಬಳೆ ಶಾಖೆಯಲ್ಲಿ ತಾ.15-01-2023 ರಂದು ಕುಲಾಲ ಕುಟುಂಬ ಸಂಗಮ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜರಗಿತು. ಶಾಖೆಯ ಅಧ್ಯಕ್ಷರಾದ ಶ್ರೀ ಗಂಗಾಧರ ಕೆ.ಟಿ ಯವರು ಅಧ್ಯಕ್ಷತೆ ವಹಿಸಿದ್ದು, ಶ್ರೀ ರವೀಂದ್ರ ಮುನ್ನಿಪ್ಪಾಡಿ, ಅಧ್ಯಕ್ಷರು ಜಿಲ್ಲಾ ಕುಲಾಲ ಸಂಘ ಕಾಸರಗೋಡು ಇವರು ದೀಪ ಬೆಳಗಿಸಿ ಕಾರ್ಯಕ್ರಮ ದ ಉದ್ಘಾಟನೆ ಗೈದರು, ಮುಖ್ಯ ಅತಿಥಿಗಾಳಾದ ಶ್ರೀ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್ ಪ್ರಧಾನ ಕರ್ಮಿ ಶ್ರೀ ಮಂತ್ರ ಮೂರ್ತಿ ಗುಳಿಗ ಸನ್ನಿಧಿ ಉಪ್ಲೇರಿ ಇವರು ಕುಟುಂಬ ಸಂಗಮದ ಮಹತ್ವ ಹಾಗೂ ಕುಲಾಲ …

Read More »

BREAKING NEWS : ಮಯೋನೈಸ್‌ ಜತೆ ಚಿಕನ್ ತಿಂದ, 7 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕಣ್ಣೂರು: ವಿಷಪೂರಿತ ಆಹಾರ ಸೇವಿಸಿ ಏಳು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಯೋನೈಸ್ ನೊಂದಿಗೆ ಚಿಕನ್ ತಿಂದ ಏಳು ವಿದ್ಯಾರ್ಥಿಗಳು ಆಹಾರ ವಿಷದಿಂದ ಸೋಂಕಿಗೆ ಒಳಗಾಗಿದ್ದರು. ಕಣ್ಣೂರಿನ ನಿತ್ಯಾನಂದ ಭವನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಫುಡ್ ಪಾಯ್ಸನ್ ನಿಂದ ಬಳಲುತ್ತಿದ್ದರು. ಹೊಟ್ಟೆ ನೋವು ಮತ್ತು ವಾಂತಿಯ ಬಗ್ಗೆ ದೂರು ನೀಡಿದ ನಂತರ ವಿದ್ಯಾರ್ಥಿಗಳನ್ನು ಪಪ್ಪಿನಿಸ್ಸೆರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಮಕ್ಕಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ, …

Read More »

ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. : ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡಲಾಗುವುದು, ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು …

Read More »

ಬೆಳ್ತಂಗಡಿ: ಉಜಿರೆಯ ‘ರುಡ್ ಸೆಟ್ ಸಂಸ್ಥೆ’ಯಿಂದ ಉಚಿತ ಎಸಿ, ರೆಫ್ರಿಜರೇಟರ್ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ಉಚಿತವಾಗಿ ಎಸಿ, ರೆಫ್ರಿಜರೇಟರ್ ದುರಸ್ತಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್ ಅವರು, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಪ್ರತಿಷ್ಠಾನ ಮತ್ತು ಕೆನರಾ ಬ್ಯಾಂಕ್ ಜೊತೆ ಯಾಗಿ 40 ವರ್ಷಗಳಿಂದ ಮುನ್ನಡೆಸುತ್ತಿರುವ ಉಜಿರೆಯ ರುಡ್ ಸೆಟ್ ಸಂಸ್ಥೆ ಯಲ್ಲಿ ಎಸಿ ಮತ್ತು ರೇಪ್ರಿಜರೇಟರ್ ದುರಸ್ತಿ ಉಚಿತ ತರಬೇತಿಯನ್ನು ದಿನಾಂಕ …

Read More »

ಬಂಟ್ವಾಳ: ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿ – ಸವಾರ ಮೃತ್ಯು

ಬಂಟ್ವಾಳ: ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ.ಬಂಟ್ವಾದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ.ಇನ್ನು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು …

Read More »

ನೇಪಾಳ ವಿಮಾನ ಪತನ: ಅಂದು ಸಹ ಪೈಲೆಟ್‌ ಆಗಿದ್ದ ಪತಿ ಸಾವು, ಇಂದು ಸಹ ಪೈಲೆಟ್‌ ಆಗಿ ಪತ್ನಿಯೂ ಸಾವು.!

ಕಾಠ್ಮಂಡು: ನೇಪಾಳ ವಿಮಾನ ಪತನದಲ್ಲಿ 72 ಮಂದಿ ಅಸುನೀಗಿದ್ದಾರೆ. ಇನ್ನೇನು ವಿಮಾನದಿಂದ ಇಳಿದು ತಮ್ಮ ತಮ್ಮ ಕೆಲಸ – ಕಾರ್ಯದಲ್ಲಿ ನಿರತರಾಗಬೇಕಿದ್ದ ಜನ ಒಂದು ಕ್ಷಣದಲ್ಲೇ ಸಜೀವ ದಹನವಾಗಿದ್ದಾರೆ. ಐವರು ಭಾರತೀಯರು, 15 ಮಂದಿ ವಿದೇಶಿಗರು, ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು 72 ಮಂದಿ ದುರಂತ ಅಂತ್ಯ ಕಂಡಿದ್ದಾರೆ. 72 ಮಂದಿಯಲ್ಲಿ ಇನ್ನೇನು ಒಂದು ಯಶಸ್ವಿ ಲ್ಯಾಂಡಿಂಗ್‌ ನಿಂದ ವರ್ಷಗಟ್ಟಲೇ ಕ್ಯಾಪ್ಟನ್‌ ಆಗಬೇಕೆನ್ನುವ ಕನಸನ್ನು ನನಸಾಗಿಸಬೇಕಿದ್ದ ಅಂಜು ಖತಿವಾಡ ಬೆಂಕಿ ಕೆನ್ನಾಲೆಯಲ್ಲಿ ಸಜೀವ ದಹನವಾಗಿ ಹೋದರು. ಸಹ ಪೈಲಟ್ ಆಗಿದ್ದ ಪತಿ: ವಿಮಾನ ಅಪಘಾತದಲ್ಲೇ ಮೃತ್ಯು: …

Read More »

ಬಂಟ್ವಾಳ: ಬಿಜೆಪಿ ಪ್ರಚಾರದ ಜೀಪ್ ಬೈಕ್ ಗೆ ಢಿಕ್ಕಿ; ಯುವಕ ಮೃತ್ಯು

ಬಂಟ್ವಾಳ:ಜೀಪ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನಡೆದಿದೆ‌. ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ. ಬಂಟ್ವಾದಲ್ಲಿ ನಡೆಯುವ ಬಿಜೆಪಿಯ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Read More »

ಅಕ್ರಮ ಸಂಬಂಧ ಒಪ್ಪದಿದ್ದಕ್ಕೆ ‘ ಮಹಿಳೆಗೆ ಚಾಕು ಇರಿತ ‘

ಬೆಂಗಳೂರು : ಆರ್‌.ಟಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮಟದಹಳ್ಳಿಯಲ್ಲಿ ಅಕ್ರಮ ಸಂಬಂಧ ಒಪ್ಪದಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಗೆ ಚಾಕು ಇರಿತ ಘಟನೆ ಬೆಳಕಿಗೆ ನಡೆದಿದೆ. ಶೇಖ್‌ ಮೆಹಬೂದ್‌ ಎಂಬಾತನಿಂದ ಹಬೀಬಾತಾಜ್‌ ಎಂಬ ಮಹಿಳೆಗೆ (30)ಗೆ ಚಾಕು ಇರಿತ ಮಾಡಿದ್ದಾನೆ. ಆರು ವರ್ಷದ ಹಿಂದೆ ಹಬೀಬಾತಾಜ್‌ ಪತಿ ಮೃತಪಟ್ಟಿದ್ದರು. ಹಬೀಬಾತಾಜ್‌ ಇಬ್ಬರು ಮಕ್ಕಳ ಜೊತೆ ಜೀವನ ನಡೆಸುತ್ತಿದ್ದರು. ಹಬೀಬಾ ತಾಜ್‌, ಆಟೋ ಚಾಲಕ ಶೇಖ್‌ ಮೆಹಬೂದ್‌ ಸ್ನೇಹ ಬೆಳೆಸಿದ್ದರು. ಆಟೋ ಚಾಲಕ ಶೇಖ್‌ ಮೆಹಬೂದ್‌ ಮದುವೆಯಾಗಿ ಮಕ್ಕಳಿದ್ದರು. ಹೀಗಾಗಿ ಆಟೋ ಚಾಲಕ ಶೇಖ್‌ ಮೆಹಬೂದ್‌ನಿಂದ ದೂರವಾಗಲು …

Read More »

ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ : ಬೆಚ್ಚಿಬಿದ್ದ ಜನ

ಕೊಡಗು : ಕೊಡಗು ಜಿಲ್ಲೆಯಲ್ಲಿ ಯುವತಿಯ ಬರ್ಬರ ಕೊಲೆ ( Murder) ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Read More »

You cannot copy content of this page.