ತಾಜಾ ಸುದ್ದಿ

ಮಂಗಳೂರು – ಎನ್ಐಎ ವಶಕ್ಕೆ ತೊಕ್ಕೊಟ್ಟುವಿನ ಮಝೀನ್ ಅಬ್ದುಲ್ ರೆಹಮಾನ್

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಬಳಿಯ ಪೆರ್ಮಣ್ಣೂರು ಗ್ರಾಮದ ಮಾಜೀಲ್ ಅಬ್ದುಲ್ ರೆಹಮಾನ್ ಮತ್ತು ದಾವಣಗೆರೆಯ ಹೊನ್ನಾಳಿ ಮೂಲದ ನದೀಂ ಅಹಮದ್ ಎಂದು ಗುರುತಿಸಲಾಗಿದೆ.   ಇಬ್ಬರೂ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ಹಾಗೂ ಆತನ ಜೊತೆಗಾರರಾದ ಮಾಜಿ ಮುನೀರ್ ಮತ್ತು ಸೈಯದ್ ಯಾಸಿನ್ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಶಾರಿಕ್, …

Read More »

ಹಸುವಿನ ಕರು ಮೇಲೆಯೇ ಅತ್ಯಾಚಾರ : ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ..!

ಕೋಲಾರ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ. ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿ ಷಫೀ ಉಲ್ಲಾ …

Read More »

ಮಂಗಳೂರಲ್ಲಿ ಬಾರಿ ಗಾಂಜಾ ದಂಧೆ ಬಯಲು: ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರ ಬಂಧನ..!

ಮಂಗಳೂರು:  ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಪೆಡ್ಲರ್‌ಗಳು, ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರ ಬಂಧನ ಮಾಡಲಾಗಿದೆ. …

Read More »

ಮಂಗಳೂರು: ಹಿಂದೂ ಯುವತಿಗೆ ಕಿರುಕುಳ ; ಪೊಲೀಸರಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ 4 ಮಕ್ಕಳ ತಂದೆ ಶರೀಫ್‌

ಮಂಗಳೂರು: ನಾಲ್ಕು ಮಕ್ಕಳ ತಂದೆ ಹಿಂದೂ ಯುವತಿಯ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಕಾಮುಕ ಮಳಲಿಯ ಶರೀಫ್ ಎಂಬಾತನು ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ಒಂದು ವಾರದಿಂದ ಯುವತಿಯ ಬೆನ್ನು ಬಿದಿದ್ದು, ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಯುವತಿ ಹೋಗುತ್ತಿದ್ದ ಫ್ಯಾಕ್ಟರಿಯ ಹತ್ತಿರ ರಸ್ತೆ ಬದಿ ನಿಂತು ಯುವತಿಯನ್ನು ಬೈಕ್‌ನಲ್ಲಿ ಬರುತ್ತೀಯ ಎಂದು ಪೀಡಿಸುತ್ತಿದ್ದ, ಶರೀಫ್ ನ ವರ್ತನೆಗೆ ಯುವತಿ ಡೋಂಟ್ ಕ್ಯಾರ್ ಎಂದಾಗ ತನ್ನ ಮೊಬೈಲ್ ನಂಬರ್ ಬರೆದ ಚೀಟಿಯನ್ನು ಯುವತಿಯತ್ತ ಎಸೆದಿದ್ದ. ಯುವತಿ ಈ …

Read More »

ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನ ಮಹಾದ್ವಾರ ದ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ:  ಕನ್ಯಾನ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಲರಾಯಿ ದೈವಸ್ಥಾನದ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು. ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಶ್ರೀ ಮಲರಾಯಿ ದೈವಸ್ಥಾನದ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಮುಖ್ಯಸ್ಥರಾದ ಜಗನ್ನಾಥ ಶೆಟ್ಟಿ, ಕ್ಷೇತ್ರದ ಪ್ರಮುಖ ಅರ್ಚಕರಾದ ಗಣೇಶ್ ಭಟ್, ಪಂಚಾಯತ್ ಸದಸ್ಯರಾದ ಅಬ್ದುಲ್ ಮಜೀದ್ ಕನ್ಯಾನ, ಗಂಗಾಧರ್ ಕನ್ಯಾನ, ಅಶ್ವಿನಿ ಕುಮಾರ್, ಗುತ್ತಿಗೆದಾರ ಕೌಶಿಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿಯ  ಜಯಾನಂದ ಪೂಜಾರಿ, ಕ್ಷೇತ್ರದ ಪ್ರಮುಖರಾದ ಕೃಷ್ಣಪ್ಪ ಸಪಲ್ಯ, ರಾಜಾರಾಂ …

Read More »

BIGG NEWS: ಫೇಸ್‌ ಬುಕ್‌ ಗೆಳತಿಗಾಗಿ ಪತ್ನಿಗೆ ವಿಷವಿಟ್ಟ ಭೂಪ ಪತಿರಾಯ

ಕೋಲಾರ: ಇತ್ತೀಚೆಗೆ ಅದೆಷ್ಟೋ ಮಂದಿ ಸೋಶಿಯಲ್‌ ಮೀಡಿಯಾದಲ್ಲಿ ಹುಡುಗಿಯರನ್ನ ನೋಡಿ ಮರುಳಾಗುತ್ತಿದ್ದಾರೆ. ಹಾಗೇ ಅವರಿಂದ ಬೇಗನೆ ಮೋಸಕ್ಕೆ ಒಳಗಾಗುತ್ತಾರೆ. ಇದೀಗ ಇಲೊಂದು ಜಿಲ್ಲೆಯಲ್ಲಿ ಪತಿರಾಯನೊಬ್ಬ ಫೇಸ್‌ ಬುಕ್‌ ಸುಂದರಿಗಾಗಿ ತನ್ನ ಪತ್ನಿಗೆ ವಿಷವಿಟ್ಟ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಕಾನಗಮಾಕಲಹಳ್ಳಿ ಗ್ರಾಮದಲ್ಲಿ ಪತಿರಾಯ ತನ್ನ ಹೆಂಡತಿಗೆ ವಿಷ ಹಾಕಿದ್ದಾನೆ. ಇದೀಗ ವಿಷ ಸೇವಿಸಿದ ಪತ್ನಿ ಸಾವು- ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.9 ವರ್ಷಗಳ ಹಿಂದೆ ಮದುವೆಯಾಗಿದ್ದ ಭೂಪನಿಗೆ ಫೇಸ್‍ಬುಕ್‍ನಲ್ಲಿ ಯುವತಿಯೊಬ್ಬಳ ಪರಿಚಯವಾಗಿದೆ. ಈ ಪರಿಚಯವು ಇದೀಗ ತನ್ನ ಪತ್ನಿಯನ್ನೇ ಮರೆಯುವಂತೆ ಮಾಡಿದೆ.ತವರು …

Read More »

ಮುಲ್ಕಿ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮುಲ್ಕಿ: ಇಲ್ಲಿನ ವಿಜಯ ಕಾಲೇಜು ಪಿಯುಸಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಸಮೀಪದ ಕಕ್ವ ಪಲ್ಕೆ ನಿವಾಸಿ ಕಿಶನ್ ಆಚಾರ್ಯ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ಮಂಗಳವಾರ ಕಕ್ವದಲ್ಲಿರುವ ಪಕ್ಕದ ದೊಡ್ಡಪ್ಪನ ಮನೆಯ ಕೋಣೆಯಲ್ಲಿ ಕಿಟಿಕಿ ಗೆ ಸೀರೆಯ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಬಲವಾದ ಕಾರಣ ತಿಳಿದು ಬಂದಿಲ್ಲ. ಈತ ಕಾಲೇಜಿನಲ್ಲಿ ಎಲ್ಲರ ಜೊತೆ ಒಡನಾಡಿಯಾಗಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಪ್ರಕರಣದ ಬಗ್ಗೆ ದೂರು …

Read More »

BREAKING NEWS : ಬಾಡಿಬಿಲ್ಡರ್‌ ನೇಣು ಬಿಗಿದ ಸ್ಥಿತಿಯಲ್ಲಿ ಶವಪತ್ತೆ

ಬೆಂಗಳೂರು: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌ ಎಂದು ಗುರುತಿಸಲಾಗಿದೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ. ಈ ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ …

Read More »

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಬಹುಮಹಡಿ ಕಟ್ಟಡದವೊಂದರ ಫ್ಲ್ಯಾಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಉಂಟಾಗಿದೆ. ಆದರೆ ಅದೃಷ್ಟವಶಾತ್‌ ಅನಾಹುತ ಸಂಭವಿಸಿಲ್ಲ. ಜೈಲ್‌ರೋಡ್‌-ಕದ್ರಿ ಕಂಬಳ ರಸ್ತೆಯ 5 ಮಹಡಿಯ ಕಟ್ಟಡವೊಂದರ 2ನೇ ಮಹಡಿಯ ಫ್ಲ್ಯಾಟ್‌ನ ಬೆಡ್‌ರೂಮ್‌ನಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಹೊಗೆ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸಿದರು. ಹಾಸಿಗೆ ಮತ್ತಿತರ ಪರಿಕರಗಳು ಬೆಂಕಿಗಾಹುತಿಯಾಗಿವೆ. ನಿವಾಸಿಗಳು ಸುರಕ್ಷಿತ ಘಟನೆ ಸಂಭವಿಸಿದ ಫ್ಲ್ಯಾಟ್‌ನಲ್ಲಿ ಯಾರೂ ಇರಲಿಲ್ಲ. ಪಕ್ಕದ ಫ್ಲ್ಯಾಟ್‌ಗಳ ನಿವಾಸಿಗಳು ಹೊರಗೆ ಬಂದಿದ್ದರು. ಬೆಂಕಿ ಬೆಡ್‌ರೂಮ್‌ನಿಂದ ಬೇರೆ ಕಡೆಗೆ ಹಬ್ಬಿಲ್ಲ. ಇಸ್ತ್ರಿ ಪೆಟ್ಟಿಗೆಯಲ್ಲಿ …

Read More »

`ಕುಮ್ಕಿ ಜಮೀನು’ ಗುತ್ತಿಗೆ ನೀಡಲು ಸರಕಾರ ನಿರ್ಧಾರ!ಸಚಿವ ಸುನೀಲ್ ಕುಮಾರ್

ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್‌ ಫಾರೆಸ್ಟ್‌ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್‌ ಬೇಡಿಕೆ …

Read More »

You cannot copy content of this page.