ತಾಜಾ ಸುದ್ದಿ

ಬೆಳುವಾಯಿಯ ರೋಶನ್ ರಾಮಚಂದ್ರ ಹೆಗಡೆ ಕುವೈಟ್ ನಲ್ಲಿ ನಿಧನ; ಇಂದು ಮೃತದೇಹ ಮಂಗಳೂರಿಗೆ

ಮಂಗಳೂರು: ಕುವೈಟ್ ನಲ್ಲಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಬೆಳುವಾಯಿಯ ರೋಶನ್ ರಾಮಚಂದ್ರ ಹೆಗಡೆ ಎಂಬವರು ದಿನಾಂಕ 09-01-2023 ರಂದು ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿರುತ್ತಾರೆ. ಇವರ ಮೃತದೇಹವನ್ನು ಊರಿಗೆ ಕಳಿಸುವ ಪ್ರಯತ್ನವನ್ನು ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ನ ಮ್ಯಾಗ್ನೆಟ್ ತಂಡವು ಮಾಡುತಿದ್ದು ಅದಕ್ಕೆ ಬೇಕಾದ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿದ್ದು ದಿನಾಂಕ 11-01-2023 ಬುಧವಾರ ದಂದು ಮೃತದೇಹ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಮ್ಯಾಗ್ನೆಟ್ ಪದಾಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಭಾರತದ ಅನಿವಾಸಿ ಸಂಘಟನೆ ಕೆ.ಕೆ.ಎಂ.ಎ ಮ್ಯಾಗ್ನೆಟ್ ತಂಡವು ಜಾತಿ ಮತ ನೋಡದೆ ಈ …

Read More »

ಬೆಳ್ತಂಗಡಿ: ನದಿಯ ಅಣೆಕಟ್ಟಿನ ಬದಿಯಲ್ಲಿ ಯುವಕನ ಮೃತದೇಹ ಪತ್ತೆ..!

ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಶವ ಪತ್ತೆಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಉಡುಪಿ: ಜ.20ರಿಂದ 22ರವರೆಗೆ ಮಲ್ಪೆಯಲ್ಲಿ ಬೀಚ್‌ ಉತ್ಸವ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಜಿಲ್ಲಾ ರಜತ ಮಹೋತ್ಸವದ ಸಮಾರೋಪದ ಪ್ರಯುಕ್ತ ಇದೇ ಬರುವ ಜ.20ರಿಂದ 22ರವರೆಗೆ ಮಲ್ಪೆಯಲ್ಲಿ ಬೀಚ್‌ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು. ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಂಟ್‌ ಮೇರೀಸ್‌ ದ್ವೀಪದಲ್ಲಿ ಕ್ಲಿಫ್ ಡೈವ್‌ ಹಾಗೂ ಕಾಪುವಿನಲ್ಲಿ ಸ್ಕೂಬಾ ಡೈವ್‌ ಹಮ್ಮಿಕೊಂಡಿದ್ದೇವೆ ಎಂದರು. ಶಾಸಕ ಕೆ. ರಘುಪತಿ ಭಟ್ ಮಾತನಾಡಿದ ಅವರು, ವ್ಯಯಜ. 21ರಂದು ಸ್ವಿಮ್ಮಿಂಗ್‌ ಫೆಡರೇಶನ್‌ ಆಫ್ ಇಂಡಿಯಾ, ಕರ್ನಾಟಕ ಸ್ಮಿಮ್ಮಿಂಗ್‌ ಅಸೋಸಿಯೇಶನ್‌ ಜತೆ ಸೇರಿ ಸಮುದ್ರದಲ್ಲಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ ನಡೆಯಲಿದೆ. 5ಕಿ.ಮೀ, 7.5 …

Read More »

ಮುದ್ದಿನ ಶ್ವಾನ ಹುಡುಕಿಕೊಡಿ- 10 ಸಾವಿರ ಬಹುಮಾನ ಘೋಷಿಸಿದ ಕುಟುಂಬ!

ಬೆಂಗಳೂರು: ಸಿಲಿಕಾನ್ ಸಿಟಿ ಜನ ಮೊದಲೇ ಶ್ವಾನ ಪ್ರಿಯರು. ಸಾಕಿದ ನಾಯಿಗಳನ್ನ ಮನೆಯ ಸದಸ್ಯನಂತೆಯೇ ನೋಡಿಕೊಳ್ತಾರೆ. ಒಂದು ಕ್ಷಣವೂ ಅವುಗಳನ್ನ ಬಿಟ್ಟಿರಲಾರದಷ್ಟು ಪ್ರೀತಿ ತೋರಿಸ್ತಾರೆ. ಹಾಗಾಗಿಯೇ ಇಲ್ಲೊಂದು ಕುಟುಂಬ ತಮ್ಮ ಪ್ರೀತಿಯ ಶ್ವಾನವನ್ನು ಕಳೆದುಕೊಂಡು, ಹುಡುಕಿಕೊಡುವಂತೆ ಅಲವತ್ತುಕೊಂಡಿದ್ದಾರೆ. ಕಳೆದ ಡಿಸೆಂಬರ್ 7ರ ಬೆಳಗ್ಗಿನ ಜಾವ ಅರುಣ್ ಹಾಗೂ ಡೀನಾ ದಂಪತಿ `ಲುಕಾ’ ಹೆಸರಿನ ತಮ್ಮ ಮುದ್ದಿನ ಶ್ವಾನವನ್ನು ಕಳೆದುಕೊಂಡಿದ್ದಾರೆ. ಅಂದು ಬೆಳಗ್ಗೆ ವಾಕಿಂಗ್‌ಗೆ ಹೋಗಿದ್ದಾಗ ಬೀದಿಯಲ್ಲಿ ಓಡಿಹೋದ ಶ್ವಾನ ಮನೆಗೆ ಹಿಂದಿರುಗಲೇ ಇಲ್ಲ. ಶ್ವಾನ ಕಳೆದುಕೊಂಡು ಒಂದು ತಿಂಗಳಾದ್ರೂ ಸಿಕ್ಕಿಲ್ಲ. ಇಡೀ OMRB ಬಡಾವಣೆ …

Read More »

ಮದುವೆಗೆ ಮುಂಚೆ ಮಗುವಿಗೆ ಜನ್ಮ ; ಬಾತ್‌ರೂಂ ಕಿಟಕಿಯಿಂದ ನವಜಾತ ಶಿಶುವನ್ನು ಎಸೆದ ಯುವತಿ

ನವದೆಹಲಿ : ಮದುವೆಗೆ ಮುಂಚೆನೆ ಮಗುವಿಗೆ ಜನ್ಮ ನೀಡಿದ 20 ರ ಹರೆಯದ ಯುವತಿ ಮಗುವನ್ನು ಅಪಾರ್ಟ್ ಮೆಂಟ್ ನ ಬಾತ್ ರೂಮ್ ಕಿಟಕಿಯಿಂದ ಎಸೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಮಗು ಸಾವನಪ್ಪಿದೆ. ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮದುವೆಯಾಗದೇ ಮಗು ಹೆತ್ತ ಹಿನ್ನಲೆ ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ. ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ …

Read More »

BREAKING NEWS : ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ಬಿದ್ದು ಘೋರ ದುರಂತ : ತಾಯಿ, ಮಗು ದುರ್ಮರಣ

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ. …

Read More »

ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಬೆಂಕಿಗೆ ಬಿದ್ದ ಅರ್ಚಕ : ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ದೊಡ್ಡಬೆಳವಂಗಲದ ಅಜ್ಜನ ಕಟ್ಟೆ ಬಳಿ ಶಾಂತಿನಗರದಲ್ಲಿ ಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ. ಈ ವೇಳೆ ಭಾರಿ ದುರಂತ ನಡೆದಿದ್ದು, ಅಗ್ನಿಕೊಂಡ ಹಾಯುವಾಗ ಅರ್ಚಕಿಯೊಬ್ಬರು ಎಡವಿ ಬೆಂಕಿಗೆ ಬಿದ್ದು ಸ್ಥಿತಿ ಗಂಭೀರವಾಗಿದೆ. ಅರ್ಚಕಿ ಅನು ಜೋಗತಿ ಎಂಬುವರು ಕಳಸಾ ಹೊತ್ತು ಕೊಂಡದಲ್ಲಿ ಹೋಗುವಾಗ ಘಟನೆ ನಡೆದಿದೆ. ನಿನ್ನೆ ನಗರದಲ್ಲಿ ರೇಣುಕಾ ಯಲ್ಲಮ್ಮದೇವಿಯ ಅಗ್ನಿ ಕೊಂಡ ಹಾಯುವ ಜಾತ್ರೆ ಇತ್ತು. ಈ ವೇಳೆ ಅರ್ಚಕಿ ಕೊಂಡ ಹಾಯಲು ಮುಂದಾಗಿದ್ದು, ಭಾರಿ ಅವಘಡ ಸಂಭವಿಸಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

BREAKING NEWS : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಆರೋಪಿ ಸಮೀರ್ ಬಂಧನ

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ …

Read More »

BREAKING NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಆಕ್ರೋಶ; ಅಂಗಡಿ-ಮುಂಗಟ್ಟು ಬಂದ್‌ ಮಾಡಿಸ್ತಿರುವ ಸಂಘಟನೆಗಳು

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ ಇಂದು ಸಾಗರ ಪಟ್ಟಣ ಕಂಪ್ಲಿಟ್‌ ಬಂದ್‌ ಆಗಿದೆ. ಸಾಗರ ಬಂದ್‌ಗೆ ವಿವಿಧ ಹಿಂದೂ ಸಂಘಟನೆಗಳಿಂದ ಕರೆ ನೀಡಿದ್ದಾರೆ. ಅಂಗಡಿ-ಮುಂಗಟ್ಟು ಅನ್ನು ವಿವಿಧ ಹಿಂದೂ ಸಂಘಟನೆಗಳು ಬಂದ್‌ ಮಾಡಿಸಿದ್ದಾರೆ. ಸಾಗರ ನಗರದಾದ್ಯಂತ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಸುನೀಲ್‌ ಮೇಲಿನ ಮಚ್ಚಿನ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ …

Read More »

SHOCKING NEWS: ಕುರುಕ್ಷೇತ್ರದಲ್ಲಿ ಭಯಾನಕ ಕೃತ್ಯ: ವ್ಯಕ್ತಿಯ ಎರಡೂ ಕೈಗಳನ್ನು ಕತ್ತರಿಸಿ ಕೊಂಡೊಯ್ದ ದುಷ್ಕರ್ಮಿಗಳು

ಕುರುಕ್ಷೇತ್ರ (ಹರಿಯಾಣ): ವ್ಯಕ್ತಿಯೊಬ್ಬನ ಕೈಯನ್ನು ದುಷ್ಕರ್ಮಿಗಳು ಕತ್ತರಿಸಿ, ಅದನ್ನು ಕೊಂಡೊಯ್ದಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಕ್ಷೇತ್ರ ಹವೇಲಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಕುರಿತು ತನಿಖೆ ನಡೆಯುತ್ತಿದೆ.   ಜುಗ್ನು(30) ಎಂದು ಗುರುತಿಸಲಾದ ವ್ಯಕ್ತಿ ಕುರುಕ್ಷೇತ್ರ ಹವೇಲಿಯ ಹೊರಗೆ ಕುಳಿತಿದ್ದಾಗ 10-12 ಮಂದಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ನಂತ್ರ, ಆತನ ಕೈಯನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ. ಈ ಏಳೆ ರಕ್ತದ ಮಡುವುನಲ್ಲಿ ಬಿದ್ದಿದ್ದ ಜುಗ್ನುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜುಗ್ನುವನ್ನು ಲೋಕನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

You cannot copy content of this page.