ತಾಜಾ ಸುದ್ದಿ

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪರವರಿಗೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್

ಮಂಗಳೂರು: ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪ ರವರಿಗೆ ಲಯನ್ ಅನಿಲ್ ದಾಸ್ ಇವರು ಮೆಸ್ಕಾಂ ಕಚೇರಿಗೆ ಭೇಟಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕುಲಾಲರ ಮಾತೃ ಸಂಘದ ಸಂಘಟನೆ ಕಾರ್ಯದರ್ಶಿ ಹಾಗೂ ಕುಲಾಲ ಯುವ ವೇದಿಕೆ ಜಿಲ್ಲಾ ಸಂಚಾಲಕರಾದ ಧನುಷ್ ರಾಜ್ ಕುಲಾಲ್, ಉಪದಳಪತಿ ಸೇವಾದಳ ಜಿಲ್ಲಾ ಕುಲಾಲರ ಮಾತ್ರ ಸಂಘ, ಜಯಂತ್ ಸಂಕೋಳಿಗೆ, ಪದ್ಮನಾಭ ಮರ್ಕೆದು, ಲೋಹಿತಾಕ್ಷ ಉಚ್ಚಿಲ ಜೊತೆಗಿದ್ದರು.

Read More »

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ; ಸಂತ್ರಸ್ಥೆಯ ರಕ್ಷಣೆ, ಇಬ್ಬರ ಬಂಧನ

ಉಡುಪಿ : ಉಡುಪಿ ಹಳೆ KSRTC ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್‌ ಸಾಲಿಯಾನ್‌ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್‌ ಎಸ್‌ (42) ಬಂಧಿತರು‌. ಉಡುಪಿ ಹಳೆ ಕೆ ಎಸ್‌ ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ …

Read More »

BIG NEWS ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ- ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ, ಬೆಳ್ಳಾರೆ ನಿವಾಸಿ ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ನಗದು ಬಹುಮಾನ ಘೋಷಿಸಿದೆ. ಸುಳ್ಯ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌. ತೌಫಲ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌. ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ …

Read More »

ಮಂಗಳೂರು: ಮಾಣಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಏಳಿಗೆಗಾಗಿ ಸ್ಪಂಧಿಸೋಣ- ಲಯನ್‌ ಅನಿಲ್‌ ದಾಸ್

ಮಂಗಳೂರು: ಮಾಣಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ  ಮಾರ್ಗದರ್ಶನ ದಲ್ಲಿ ನಡೆಯುವ ಗೋ ಶಾಲೆ, ಗೋ ರಕ್ಷಾ ನಿಧಿ ಗೆ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ವತಿಯಿಂದ ಲಯನ್ಸ್ ಅಧ್ಯಕ್ಷ ರಾದ ಅನಿಲ್ ದಾಸ್ ಮನವಿ ಮೇರೆಗೆ ₹ 25000 ವನ್ನು ಶ್ರೀ ಶ್ರೀ ಮೋಹನ್ ದಾಸ್ ಸ್ವಾಮೀಜಿ ಮುಖಾಂತರ ಮಾಣಿಲ ಮಹಾಲಕ್ಷ್ಮಿ ಸೇವಾ ಪ್ರತಿಷ್ಟನಾ ಟ್ರಸ್ಟ್ ಗೆ ಅರ್ಪಿಸಲಾಯಿತು. ಕುಗ್ರಾಮ ವಾಗಿದ್ದ ಮಾಣಿಲ ದಲ್ಲಿ ಧಾರ್ಮಿಕ,ಸಾಮಾಜಿಕ ಹಾಗೂ ದಿನ ನಿತ್ಯ ಸೇವಾ ಚಟುವಟಿಕೆ ಗಳೊಂದಿಗೆ …

Read More »

ಬೆಳ್ಳಂ ಬೆಳಗ್ಗೆ ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ದುರ್ಮರಣ

ಬೆಳಗಾವಿಯ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಹನುಮವ್ವ, ದೀಪಾ, ಸುಪ್ರಿತಾ, ಮಾರುತಿ, ಇಂದಿರವ್ವ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಬಿಟ್ಟ ವೈದ್ಯರು..!

ಉತ್ತರಪ್ರದೇಶ: ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಟವೆಲ್ ನ್ನು ಆಕೆಯ ಹೊಟ್ಟೆಯೊಳಗೆ ಬಿಟ್ಟ ಬಗ್ಗೆ ವರದಿಯಾಗಿದೆ. ಅಮ್ರೋಹಾದ ಬನ್ಸ್ ಖೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಸಾದತ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಸೈಫೀ ನರ್ಸಿಂಗ್ ಹೋಮ್‌ನಲ್ಲಿ ನಜ್ರಾನಾ ಎಂಬ ಮಹಿಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಆಕೆಯ ಹೊಟ್ಟೆಯ ಒಳಗೆ ವೈದ್ಯರು ಟವೆಲ್ ಬಿಟ್ಟಿದ್ದಾರೆ. ಅಮ್ರೋಹಾದಲ್ಲಿರುವ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಮಹಿಳೆಯನ್ನು ಪರೀಕ್ಷಿಸಿದಾಗ ಆಕೆಯ ಹೊಟ್ಟೆಯಲ್ಲಿ ಟವೆಲ್ ಕಂಡು ಬಂದಿದೆ. ಈ ಕುರಿತು ತನಿಖೆಗೆ ಮುಖ್ಯ ವೈದ್ಯಾಧಿಕಾರಿ ಸಿಂಘಾಲ್ ಸೂಚಿಸಿದ್ದಾರೆ.

Read More »

ಮಹಿಳಾ ಎಸ್ಐ, ಸರ್ಕಲ್​ ಇನ್ಸ್​ಪೆಕ್ಟರ್ ನಡುವೆ ಪ್ರೇಮ್‌ ಕಹಾನಿ ; ಮುಂದೆನಾಯ್ತು…

ಮಹಿಳಾ ಸಬ್​ ಇನ್ಸ್​ಪೆಕ್ಟರ್ ಹಾಗೂ ಸರ್ಕಲ್​ ಇನ್ಸ್​ಪೆಕ್ಟರ್ ನಡುವಿನ ಪ್ರೇಮ್‌ ಕಹಾನಿ ಪ್ರಕರಣ ತೆಲಂಗಾಣದ ವಾರಂಗಲ್​ನಲ್ಲಿ (Warangal) ಭಾರಿ ಚರ್ಚೆ ಹುಟ್ಟುಹಾಕಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಇಬ್ಬರನ್ನೂ ವಾರಂಗಲ್​ ಪೊಲೀಸ್​ ಕಮಿಷನರ್​ ರಂಗನಾಥ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತಾದ ಅಧಿಕಾರಿಗಳು ಗೆಸಿಗೊಂಡ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ ರಾಯಲ ವೆಂಕಟೇಶ್ವರಲು ಮತ್ತು ದಮೇರಾ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಹರಿಪ್ರಿಯಾ ಎಂದು ವರದಿಯಾಗಿದೆ. ಎಸ್​ಐ ಹರಿಪ್ರಿಯಾ ಅವರ ಮದುವೆ ಇತ್ತೀಚೆಗಷ್ಟೇ ಆಗಿದೆ. ಆದರೂ ಮೊದಲಿನಿಂದಲೂ ಪರಿಚಯವಿದ್ದ ಸಿಐ ವೆಂಕಟೇಶ್ವರಲು ಜೊತೆ ತಮ್ಮ ರೊಮ್ಯಾನ್ಸ್​ …

Read More »

ಅಪರಿಚಿತ ಯುವತಿ ಶವಪತ್ತೆ : ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌…!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಯಶವಂತ ಪುರ ರೈಲ್ವೆ ಸ್ಟೇಷನ್‌ ಬಳಿ ಅಪರಿಚಿತ ಯುವತಿಯ ಶವಪತ್ತೆವೊಂದು ಪತ್ತೆಯಾಗಿದ್ದು, ಭಾರೀ ಆತಂಕ , ಅನುಮಾನಕ್ಕೆ ಕಾರಣವಾಗಿದೆ. 23 ವರ್ಷದ ಮಹಿಳೆಯ ಶವ ಎಂದು ಗುರುತಿಸಲಾಗಿದೆ. ಯಶವಂತ ಪುರ ರೈಲ್ವೆ ನಿಲ್ಞಾಣ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಮಹಿಳೆಯ ಶವವೂ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌ ಮಾಡಿದಂತೆ ಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಇಡಲಾಗಿತ್ತು. ಇಂದು ವಾಸನೆ ಬಂದ ಕಾರಣ ತೆಗೆದು ನೋಡಿದಾಗ ಮಹಿಳೆ ಶವವೊಂದು ಪತ್ತೆಯಾಗಿದೆ ಎಂದು …

Read More »

ಹೊಸ ಪಯಣ ಆರಂಭ ; ಮೂರನೇ ಮದುವೆಗೆ ತಯಾರಾದ ಚಿರಂಜೀವಿ ಪುತ್ರಿ…!

ಹೈದರಬಾದ್ : ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಇದೀಗ ಮೂರನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಕುತೂಹಲ ಮೂಡಿಸಿದೆ. ಈವರೆಗೂ ತಮ್ಮ ಖಾಸಗಿ ಬದುಕಿನ ಬಗ್ಗೆ ಏನೂ ಹೇಳಿಕೊಳ್ಳದೇ ಶ್ರೀಜಾ ಇದೀಗ ಏಕಾಏಕಿಯಾಗಿ ಇನ್ಸ್ಟಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ಡಿಯರ್ 2022, ನೀನು ನನ್ನ ಜೀವನಕ್ಕೆ ಹೊಸ ವ್ಯಕ್ತಿಯನ್ನು ಪರಿಚಯ ಮಾಡಿಸಿದ್ದೀಯಾ. ಅವನ ಭೇಟಿ ನಿಜಕ್ಕೂ ಒಂದು ಅದ್ಭುತ ಪಯಣವನ್ನೇ ಆರಂಭಿಸಲಿದೆ’ ಎಂದು ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತೆಲುಗಿನ ಸೂಪರ್ ಸ್ಟಾರ್ …

Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ : ಮುಂದೇನಾಯ್ತು ನೋಡಿ…

ನವದೆಹಲಿ : ಅಮೆರಿಕ-ದೆಹಲಿ ಏರ್‌ ಇಂಡಿಯಾ ವಿಮಾನದ ಬಿಸಿನೆಸ್‌ ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸಂಬಂಧ ಏರ್ ಇಂಡಿಯಾ ಕ್ರಮ ಕೈಗೊಂಡಿದೆ. ಆಂತರಿಕ ಸಮಿತಿಯ ನಿರ್ಧಾರದವರೆಗೆ ತಪ್ಪಿತಸ್ಥ ಪ್ರಯಾಣಿಕನಿಗೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದಿದ್ದ …

Read More »

You cannot copy content of this page.