ತಾಜಾ ಸುದ್ದಿ

ಹೊಸ ಪಯಣ ಆರಂಭ ; ಮೂರನೇ ಮದುವೆಗೆ ತಯಾರಾದ ಚಿರಂಜೀವಿ ಪುತ್ರಿ…!

ಹೈದರಬಾದ್ : ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಇದೀಗ ಮೂರನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಕುತೂಹಲ ಮೂಡಿಸಿದೆ. ಈವರೆಗೂ ತಮ್ಮ ಖಾಸಗಿ ಬದುಕಿನ ಬಗ್ಗೆ ಏನೂ ಹೇಳಿಕೊಳ್ಳದೇ ಶ್ರೀಜಾ ಇದೀಗ ಏಕಾಏಕಿಯಾಗಿ ಇನ್ಸ್ಟಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ಡಿಯರ್ 2022, ನೀನು ನನ್ನ ಜೀವನಕ್ಕೆ ಹೊಸ ವ್ಯಕ್ತಿಯನ್ನು ಪರಿಚಯ ಮಾಡಿಸಿದ್ದೀಯಾ. ಅವನ ಭೇಟಿ ನಿಜಕ್ಕೂ ಒಂದು ಅದ್ಭುತ ಪಯಣವನ್ನೇ ಆರಂಭಿಸಲಿದೆ’ ಎಂದು ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತೆಲುಗಿನ ಸೂಪರ್ ಸ್ಟಾರ್ …

Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ : ಮುಂದೇನಾಯ್ತು ನೋಡಿ…

ನವದೆಹಲಿ : ಅಮೆರಿಕ-ದೆಹಲಿ ಏರ್‌ ಇಂಡಿಯಾ ವಿಮಾನದ ಬಿಸಿನೆಸ್‌ ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸಂಬಂಧ ಏರ್ ಇಂಡಿಯಾ ಕ್ರಮ ಕೈಗೊಂಡಿದೆ. ಆಂತರಿಕ ಸಮಿತಿಯ ನಿರ್ಧಾರದವರೆಗೆ ತಪ್ಪಿತಸ್ಥ ಪ್ರಯಾಣಿಕನಿಗೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದಿದ್ದ …

Read More »

ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌ನಿಂದ ರಕ್ಷಿಸಿ- ನಳಿನ್ ಕುಮಾರ್‌ ಕಟೀಲ್‌ ಕರೆ

ಮಂಗಳೂರು : ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌ ಬಗ್ಗೆ ಯೋಜಿಸಿ, ಲವ್ ಜಿಹಾದ್‌ ತಡೆಯೋದಕ್ಕೆ ಮುಖ್ಯವಾಗಿ ಭಾರತಿಯ ಜನತಾ ಪಕ್ಷ ಬೇಕು ‘ ಎಂದು ನಳಿನ್ ಕುಮಾರ್‌ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌ನಿಂದ ರಕ್ಷಿಸಿ ಎಂದು ಕರೆ ನೀಡಿದ್ದಾರೆ. ಲವ್ ಜಿಹಾದ್ ನಿಲ್ಲಿಸಲು ‌ಭಾರತೀಯ ಜನತಾ ಪಾರ್ಟಿ ಬೇಕು. ಲವ್ ಜಿಹಾದ್ ವಿರುದ್ದ ಕಾನೂನನ್ನ …

Read More »

ಹೊಟೇಲ್ ನಿಂದ ತರಿಸಿ ‘ಅಲ್ ಫಹಮ್’ ತಿಂದ ನರ್ಸ್ ಸಾವು..!ಕಾರಣ..?

ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್‌ಯೊಬ್ಬರು ಚಿಕನ್ ಡಿಶ್ ‘ಅಲ್ ಫಹಮ್’ ನ್ನು ಸೇವಿಸಿದ ಬಳಿಕ‌ ಗಂಭೀರವಾಗಿ ಬಳಿಕ ಮೃತಪಟ್ಡಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಕೇರಳದ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಮಂಗಳವಾರ 40 ಹೋಟೆಲ್‌ಗಳನ್ನು ಬಂದ್ ಮಾಡಿ, 62 ಮಂದಿಗೆ ದಂಡ ವಿಧಿಸಿದ್ದಾರೆ. ರಾಜ್ಯಾದ್ಯಂತ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ 28 ಮಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 33 ವರ್ಷದ ನರ್ಸ್ ರೇಶ್ಮಿ ರಾಜ್ ಅರೇಬಿಯನ್ ಚಿಕನ್ ಡಿಶ್ ‘ಅಲ್ ಫಹಮ್’ನ್ನು …

Read More »

ಉಡುಪಿ: ಕಾಂಗ್ರೆಸ್‌ ಸರಕಾರ ಬಂದರೆ ಬಿಜೆಪಿಯ ಕಮಿಷನ್ ದಂಧೆ ತನಿಖೆ – ಸೊರಕೆ

ಉಡುಪಿ: ಈಗಿನ ಬಿಜೆಪಿ ಸರಕಾರ ಮಾಡಿರುವ ಕಾಮಗಾರಿಯ ಕಮಿಷನ್ ಅವ್ಯವಹಾರಗಳನ್ನು ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತತ್‌ಕ್ಷಣದಿಂದಲೇ ಸಮಗ್ರ ತನಿಖೆ ನಡೆಸಲಿದ್ದೇವೆ ಎಂದು ಮಾಜಿ ಸಚಿವ ವಿನಯ್‌ ಕುಮಾರ್ ಸೊರಕೆ ತಿಳಿಸಿದರು. ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿನಯ್ ಕುಮಾರ್ ಸೊರಕೆ, ಬಿಜೆಪಿಯವರು ಬೆಲೆ ಏರಿಕೆ, ಭ್ರಷ್ಟಾಚಾರ, ಶೇ.40ರಷ್ಟು ಕಮಿಷನ್, ನೀರಾವರಿ ಸಮಸ್ಯೆ ಇದ್ಯಾವುದರ ಬಗ್ಗೆಯೂ ಮಾತನಾಡುತ್ತಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಸರಕಾರದ ಭ್ರಷ್ಟಾಚಾರ ಮತ್ತು ಶೇ.40ರಷ್ಟು ಕಮಿಷನ್ ಆರೋಪವನ್ನು ಜನರ ಮುಂದಿಡುವ ಎಲ್ಲ ಪ್ರಯತ್ನ ಮಾಡಲಿದ್ದೇವೆ …

Read More »

ಕಾರವಾರ: ಗೋವಾ ಪೊಲೀಸರ ಏಟಿಗೆ ಕೈಬೆರಳು ಮುರಿದುಕೊಂಡ ಯುವಕ ; ಶಸ್ತ್ರ ಚಿಕಿತ್ಸೆ

ಕಾರವಾರ: ಗೋವಾ ಪೊಲೀಸರ ಲಾಠಿ ಏಟಿಗೆ ಕಾರವಾರದ ಯುವಕನೊಬ್ಬನ ಕೈಬೆರಳುಗಳು ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಚಿತ್ತಾಕುಲದ ನಿವಾಸಿ ಕಿಶನ್ ಶೆಟ್ಟಿ(22) ಎನ್ನುವ ಯುವಕ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ಗೆಳೆಯರ ಜತೆಯಲ್ಲಿ ಹೊಸ ವರ್ಷಾಚರಣೆಯನ್ನು ಕಾಣಕೋಣ ಬೀಚ್‌ನಲ್ಲಿ ಆಚರಿಸಿದ್ದಾರೆ. ಬೀಚಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಪೊಲೀಸ್‌ ಸಿಬ್ಬಂದಿಯೊಬ್ಬರು ಧಾವಿಸಿ ಬಂದು ಲಾಠಿ ಬೀಸಿದ್ದು, ಈ ಏಟಿಗೆ ಇವರ ಬೆರಳು ಮೂಳೆಗಳು ಮುರಿದು ಹೋಗಿದೆ. ಇವರಿಗೆ ಸೋಮವಾರ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಅಮಾನವೀಯ …

Read More »

ಸಿಲಿಂಡರ್ ಸ್ಪೋಟ; 10ಕ್ಕೂ ಅಧಿಕ ಮಂದಿಗೆ ಗಾಯ

ಮೈಸೂರು; ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಒಂದೇ ಮನೆಯ ನಾಲ್ವರು ಮತ್ತು ಪಕ್ಕದ ಮನೆಯ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಯುವಕನ ಕಿಡ್ನಾಪ್, ಕೊಲೆ ಪ್ರಕರಣ ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ

ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಘಟನೆಯ ಹಿನ್ನೆಲೆ …

Read More »

ಉತ್ತರಪ್ರದೇಶ: ಮದರಸಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ…!

ಉತ್ತರಪ್ರದೇಶ: ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಕೆ ಮಾಡುವುದಾಗಿ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಇಫ್ತೀಕರ್‌ ಅಹ್ಮದ್‌ ಜಾವೇದ್‌ ಅವರು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣವನ್ನೂ ಒದಗಿಸಲಾಗುವುದು ಎಂದು ಹೇಳಿದ ಅವರು ಈಗ ಮದರಸಾ ಮಕ್ಕಳು ಕೂಡ ಕಂಪ್ಯೂಟರ್‌, ಗಣಿತ, ವಿಜ್ಞಾನ ಶಿಕ್ಷಣ ಪಡೆಯಬಹುದು ಎಂದು ಹೇಳಿದ್ದಾರೆ. ಇದಕ್ಕೆ ಮೊದಲು ಉತ್ತರಾಖಂಡ ರಾಜ್ಯದಲ್ಲಿ ವಕ್ಫ್‌ ಮಂಡಳಿಯು 103 ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮ ಪರಿಚಯಿಸಿತ್ತು.

Read More »

ನಡು ರಸ್ತೆಯಲ್ಲೇ ರೋಮಿಯೋಗಳ ಮತ್ತೊಂದು ಬೈಕ್ ರೊಮ್ಯಾನ್ಸ್’ ವೈರಲ್

ಬೆಂಗಳೂರು : ಇತ್ತೀಚೆಗಂತೂ ರಸ್ತೆಗಳಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚಾಗಿದೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ರೀತಿಯಲ್ಲಿ ಸರ್ಕಸ್ ಮಾಡುತ್ತಲೇ ಇರುತ್ತಾರೆ , ಇತ್ತೀಚೆಗಷ್ಟೇ ಆಂದ್ರಪ್ರದೇಶದ ವಿಶಾಖಪಟ್ಟಣಂನಳ್ಳೀ ಹಾಡಹಗಲೇ ಕಾಲೇಜು ಹುಡುಗಿಯನ್ನು ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ಕಿಸ್ ಮಾಡಿದ ಘಟನೆ ನಡೆದಿತ್ತು.   ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಂತಹದ್ದೇ ಒಂದು ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಟೀಕೆಗೆ ವ್ಯಕ್ತವಾಗಿದೆ. ಹೆಲ್ಮೆಟೂ ಹಾಕದೆ ಪ್ರೇಮಿಗಳು ಹುಚ್ಚಾಟ ನಡೆಸಿದ್ದಾರೆ. ಹಿಂಬದಿ ಕಾರ್ ಪ್ರಯಾಣಿಕರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದೆ. …

Read More »

You cannot copy content of this page.