ತಾಜಾ ಸುದ್ದಿ

‘ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು’ ಎಂಬ ವಾಟ್ಸಾಪ್‌ ಸಂದೇಶದ ಕುರಿತು ನಟ ಕಿಶೋರ್‌ ಹೇಳಿದ್ದೇನು?

ಬೆಂಗಳೂರು: ‘ಕಾಂತಾರ’ ದೈವ ಅವಮಾನಿಸಿದ ಯುವಕನೋರ್ವ ರಕ್ತಕಾರಿ ಸಾವನ್ನಪ್ಪಿದ್ದಾನೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕಾಂತಾರ ಸಿನೆಮಾದ ನಟ ಕಿಶೋರ್ (actorkishore) ಪ್ರತಿಕ್ರಿಯಿಸಿದ್ದಾರೆ.   ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ”ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿಕೆ ಇರಲಿ, ಮೂಢನಂಬಿಕೆ ಬೇಡ” ಎಂದು ಹೇಳಿದ್ದಾರೆ. ”ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸ್​​ಆಯಪ್​​ನಲ್ಲಿ ವೈರಲ್ ಆಗಿದೆ. ಆ …

Read More »

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ..! ಮಂತ್ರವಾದಿಯ ಬಂಧನ

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಮಂತ್ರವಾದಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಕುಮಾರ್ ಬಂಧಿತ ಆರೋಪಿ. ಈ ಬಗ್ಗೆ ಕೌಶಾಂಬಿ ಜಿಲ್ಲೆಯ ಪಿಪ್ರಿ ಪೊಲೀಸರು ಬಂಧಿಸಿ ಪೋಕ್ಸೊ ಅಡಿ ಪ್ರಕರಣ ದಾಖಲಿಸಿದ್ದಾರೆ. ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮಗಳನ್ನು ಗುಣಮುಖ ಮಾಡುತ್ತಾರೆ ಎಂದು ಅಶೋಕ್ ಕುಮಾರ್ ಬಳಿ ಬಾಲಕಿಯ ತಂದೆ ಕರೆದುಕೊಂಡು ಹೋಗಿದ್ದರು. ಕೆಲ ದಿನಗಳ ನಂತರ ಬಾಲಕಿಯನ್ನು ಪರಿಚಯ ಮಾಡಿಕೊಂಡು ದೆವ್ವ ಬಿಡಿಸುತ್ತೇನೆಂದು ಅಶೋಕ್ ಕುಮಾರ್ ಅತ್ಯಾಚಾರ ಮಾಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. …

Read More »

BIGG NEWS : ರಾಜ್ಯದಲ್ಲಿ ಹೊಸವರ್ಷ ಸಂಭ್ರಮಾಚರಣೆ ವೇಳೆ 16 ಮಂದಿ ಬಲಿ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಡೆದ ಅಪಘಡಗಳಲ್ಲಿ 16 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಮಂಜುನಾಥ್ ಓಲೇಕಾರ್ ಎಂಬುವರ ಮನೆಯಲ್ಲಿ ಶನಿವಾರ ರಾತ್ರಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಮಿಸ್ ಫೈರ್ ಆಗಿ ಮಂಜುನಾಥ್ ಅವರ ಪುತ್ರ ಸ್ನೇಹಿತ ವಿನಯ್ ಎಂಬುವರಿಗೆ ಗುಂಡು ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ ವೇಳೆ ಮಂಜುನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ಪಕ್ಕದ ಕಟ್ಟಡಕ್ಕೆ ಜಿಗಿದು ಒಡಿಶಾದ ಬಾಪಿ, ಗುಡ್ಡದಹಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಯಾದಗಿರಿಯ …

Read More »

ಸುರತ್ಕಲ್: ಸಮುದ್ರದಲ್ಲಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ

ಸುರತ್ಕಲ್ : ಮಂಗಳೂರು ಹೊರ ವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ. ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತ ದುರ್ದೈವಿ. ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಇವನು ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ …

Read More »

ನೋಟು ಅಮಾನ್ಯೀಕರಣ: ಇಂದು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 1000 ಮತ್ತು 500 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 50ಕ್ಕೂ ಹೆಚ್ಚು ಅರ್ಜಿಗಳ ಕುರಿತಾದ ತೀರ್ಪು ಇಂದು ಪ್ರಕಟವಾಗುವ ನಿರೀಕ್ಷೆಯಿದೆ. ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡುವುದಾಗಿ ಪ್ರಕಟಿಸಿತ್ತು. ಮಹತ್ವದ ತೀರ್ಮಾನ ತೆೆಗೆದುಕೊಂಡ ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ 500 ಮತ್ತು 1000 ರೂಪಾಯಿ ಮೌಲ್ಯದ ನೋಟುಗಳನ್ನು ಅಮಾನ್ಯೀಕರಣ ಮಾಡಿತ್ತು. ಅಂದರೆ ಚಲಾವಣೆಯಿಂದ ಹಿಂತೆಗೆದುಕೊಂಡಿತ್ತು. ಚಲಾವಣೆಯಿಂದ ಹಿಂತೆಗೆದುಕೊಳ್ಳಲಾದ ನೋಟುಗಳನ್ನು ಬ್ಯಾಂಕ್ ಗಳಿಗೆ ಸಲ್ಲಿಸಿ …

Read More »

ಹೆಂಡ್ತಿ ಸಾಯಿಸಲು ಗೂಗಲ್‌ನಲ್ಲಿ ಸರ್ಚ್‌ ಮಾಡಿದ ಗಂಡ.! ಮುಂದೆನಾಯ್ತು ಗೊತ್ತಾ?

ನವದೆಹಲಿ: ಹೆಂಡ್ತಿಯನ್ನು ಕೊಲೆ ಮಾಡುವ ಸಲುವಾಗಿ ಗೂಗಲ್‌ ಮೊರೆ ಹೋದ ಗಂಡನ ಇತಿಹಾಸವನ್ನು ಕೆದಕುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ಘಾಜಿಯಾಬಾದ್ ನಿವಾಸಿ ವಿಕಾಸ್ ಎಂಬ ವ್ಯಕ್ತಿಯನ್ನು ಬಂಧಿಸಿರುವ ಉತ್ತರ ಪ್ರದೇಶ ಪೊಲೀಸರು ಗೂಗಲ್‌ ಸಹಾಯಿಂದ ಅವನ ಹೆಂಡತಿಯನ್ನು ಕೊಂದಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಈ ಹಿಂದೆ ತನ್ನ ಪತ್ನಿಯ ಕೊಲೆಗೆ ಸಂಬಂಧಿಸಿದಂತೆ ಯುಪಿ ಪೊಲೀಸರಿಗೆ ಕತೆ ಕಟ್ಟಿದ್ದಾನೆ , ಇದೇ ವೇಳೆ ಯುಪಿ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ, ವಿಚಾರಣೆಯ ಸಮಯದಲ್ಲಿ, ಯುಪಿ ಪೊಲೀಸರು ಅವನ ಫೋನ್ನಲ್ಲಿ ವ್ಯಕ್ತಿಯ ವಿರುದ್ಧ ಪ್ರಮುಖ …

Read More »

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪ್ರಯಾಣಿಕರಿಗೆ ಗಾಯ

ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ ಮೂಲಕ ಅಜೆಕಾರಿಗೆ ಬರುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಈ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Read More »

ಬಾಯಲ್ಲಿ ನೀರೂರಿಸುವ ‘ಕಾರ್ನ್ ಮ್ಯಾಗಿ’

ಮ್ಯಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಮ್ಯಾಗಿ ಜೊತೆ ತರಕಾರಿ, ಕಾರ್ನ್ ಹಾಕಿದ್ರೆ ಅದ್ರ ರುಚಿ ದುಪ್ಪಟ್ಟಾಗುತ್ತದೆ. ತರಕಾರಿ, ಕಾರ್ನ್ ಹಾಕಿ ಮ್ಯಾಗಿ ಮಾಡೋದು ಹೇಗೆ ಅಂತಾ ನಾವು ಹೇಳ್ತೇವೆ ನೋಡಿ.ಕಾರ್ನ್ ಮ್ಯಾಗಿಗೆ ಬೇಕಾಗುವ ಪದಾರ್ಥ ಎರಡು ಪ್ಯಾಕೆಟ್ ಮ್ಯಾಗಿ ಒಂದು ಈರುಳ್ಳಿ (ಸಣ್ಣಗೆ ಕತ್ತರಿಸಿದ) ಕಾರ್ನ್ ಒಂದು ಸಣ್ಣ ಬೌಲ್ ಕ್ಯಾರೆಟ್ (ತೆಳುವಾದ ಉದ್ದಗೆ ಕಟ್ ಮಾಡಿದ್ದು) ಕ್ಯಾಪ್ಸಿಕಮ್ (ಸಣ್ಣಗೆ ಕತ್ತರಿಸಿದ್ದು) ಒಂದು ಟೊಮೆಟೊ (ಸಣ್ಣದಾಗಿ ಕತ್ತರಿಸಿದ) ಎರಡು ಹಸಿರು ಮೆಣಸಿನಕಾಯಿಗಳು (ಸಣ್ಣಗೆ ಕತ್ತರಿಸಿದ) ಉಪ್ಪು ರುಚಿಗೆ ತಕ್ಕಷ್ಟು ನೀರು ಅಗತ್ಯಕ್ಕೆ ತಕ್ಕಷ್ಟು ಕಾರ್ನ್ ಮ್ಯಾಗಿ …

Read More »

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ; ಆರೋಪಿ ಯುವಕನ ಬಂಧನ

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯನ್ನು ಪರಿಚಯದ ಯುವಕನೋರ್ವ ಮನೆಗೆ ಕರೆದೊಯ್ಯುವುದಾಗಿ ನಂಬಿಸಿ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಕ್ಸೊ ಪ್ರಕರಣದಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ. ಡಿಸೆಂಬರ್ 29ರಂದು ಸಂಜೆ ಸಮೀಪದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ 14ರ ಹರೆಯದ ಬಾಲಕಿಯು ಹೆತ್ತವರು, ತಂಗಿಯ ಜೊತೆಗೆ ತೆರಳಿದ್ದಳು. ಮನೆಮಂದಿ ಅರ್ಧದಲ್ಲೇ ಮನೆಗೆ ಮರಳಿದ್ದು, ಬಾಲಕಿ ವಾರ್ಷಿಕೋತ್ಸವ ಮುಗಿದ ಮೇಲೆ ಮನೆಗೆ ಬರುತ್ತೇನೆಂದು ತಿಳಿಸಿದ್ದಳು. ಕಾರ್ಯಕ್ರಮ ಮುಗಿದ ಸಂದರ್ಭ ಮನೆ …

Read More »

ಬಿಗ್‌ ಬಾಸ್‌ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ! ಯಾಕೆ ಗೊತ್ತಾ?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್ 9 ಗೆ ಇಂದು ತೆರೆ ಬೀಳುತ್ತಿದೆ. ರಿಯಾಲಿಟಿ ಶೋನ ಇತ್ತೀಚಿನ ಸೀಸನ್ ಈ ವರ್ಷ ಸೆಪ್ಟೆಂಬರ್ 24 ರಂದು ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ದಿವ್ಯಾ ಉರುಡುಗ, ರಾಕೇಶ್ ಅಡಿಗ, ಪ್ರಶಾಂತ್ ಸಂಬರ್ಗಿ, ಸಾನ್ಯಾ ಅಯ್ಯರ್, ಐಶ್ವರ್ಯ ಪಿಸ್ಸೆ, ಅರುಣ್ ಸಾಗರ್, ಕಾವ್ಯಶ್ರೀ ಗೌಡ, ದರ್ಶ್ ಚಂದ್ರಪ್ಪ ಅನುಪಮಾ ಗೌಡ, ರೂಪೇಶ್ ರಾಜಣ್ಣ, ಅಮೂಲ್ಯ ಗೌಡ, ವಿನೋದ್ ಗೋಬರಗಾಲ, ಮತ್ತು ನೇಹಾ ಗೌಡ ಸೇರಿದಂತೆ 15 ಸ್ಪರ್ಧಿಗಳೊಂದಿಗೆ ಪ್ರಾರಂಭವಾಯಿತು. ಬಿಗ್‌ ಬಾಸ್‌ ಕನ್ನಡ ಶೋ ಶುರುವಾದಾಗಿನಿಂದಲೂ …

Read More »

You cannot copy content of this page.