ತಾಜಾ ಸುದ್ದಿ

ಮದುವೆಯಾಗಿ 6 ವರ್ಷವಾದ್ರೂ ಮಕ್ಕಳಾಗಿಲ್ಲವೆಂದು ಪತ್ನಿಯ ಗುಪ್ತಾಂಗವನ್ನ ಬ್ಲೇಡ್ ನಿಂದ ಕೊಯ್ದು ವಿಕೃತಿ ಮೆರೆದ ಪತಿ..!

ಲಕ್ನೋ: ಮದುವೆಯಾಗಿ 6 ವರ್ಷ ಕಳೆದರೂ ಮಕ್ಕಳಾಗಿಲ್ಲ ಅಂತಾ ತನ್ನ ಪತ್ನಿಗೆ ಚಿತ್ರಹಿಂಸೆ ಕೊಟ್ಟು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಪತ್ನಿಯೊಂದಿಗೆ ಅಸಹಜವಾಗಿ ವರ್ತಿಸಿರುವ ಪತಿ ಆಕೆಯ ಗುಪ್ತಾಂಗವನ್ನು ಬ್ಲೇಡ್‌ನಿಂದ ಕೊಯ್ದು ವಿಕೃತಿ ಮೆರೆದಿದ್ದಾನೆ. ಪತ್ನಿ ತೀವ್ರ ಗಾಯಗೊಂಡ ಬಳಿಕ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆರೋಪಿ ಪತಿಯನ್ನು ಲಕ್ನೋದ ಮೋಹನ್‌ಲಾಲ್‌ಗಂಜ್ ಪೊಲೀಸರು ಬಂಧಿಸಿದ್ದಾರೆ. ಏನಿದುಘಟನೆ?: ದಂಪತಿಗೆ ಮದುವೆಯಾಗಿ 6 ವರ್ಷಗಳಾದರೂ ಮಕ್ಕಳಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಪತಿ, ಪತ್ನಿಗೆ ಚಿತ್ರಹಿಂಸೆ ನೀಡಲು ಪ್ರಾರಂಭಿಸಿದ್ದ. ನಿನ್ನೆ ಮದ್ಯದ ಅಮಲಿನಲ್ಲಿದ್ದ ಪತಿ, ಆಕೆಯ ಮೇಲೆ ಅಸ್ವಾಭಾವಿಕವಾಗಿ ವರ್ತಿಸಿದ್ದಾನೆ. ಆಕೆ …

Read More »

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಕರಾವಳಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ

ಬೆಂಗಳೂರು: ಕಲರ್ಸ್ ಕನ್ನಡದ ಈ ಬಾರಿಯ ಬಿಗ್ ಬಾಸ್ 9 ರ ವಿಜೇತರಾಗಿ ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ರಾಕೇಶ್ ಅಡಿಗಗೆ ಟಫ್ ಫೈಟ್ ಕೊಟ್ಟು, ಬಿಗ್ ಬಾಸ್ ವಿನ್ನರ್ ಟೈಟಲ್ ಅನ್ನ …

Read More »

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ ಚೌಕಿ ಪ್ರಭಾರಿಯಾಗಿ ನೇಮಕಗೊಂಡ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ನಂತರ ವಿಷಯ ಬೆಳಕಿಗೆ ಬಂದಿದೆ. ಮಗಳು ನಾಪತ್ತೆಯಾಗಿರುವ ಕುರಿತು ಬಾಲಕಿಯ ತಂದೆ ಲಖನೌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಯನ್ನು ಹೆಸರಿಸಿ ಅವರು ದೂರು ನೀಡಿದ್ದರು. ಮೂಲಗಳ ಪ್ರಕಾರ, ಸಿಂಗ್ ಹುಡುಗಿಯೊಂದಿಗೆ …

Read More »

ಉಡುಪಿ: ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023ರ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ತಿಳಿಸಿದ್ದಾರೆ. ಅದಾಲತ್ ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ …

Read More »

ಬೈಕ್ ಗೆ ಬಸ್ ಢಿಕ್ಕಿ; ಬಾಲಕಿ ಸ್ಥಳದಲ್ಲೇ ಮೃತ್ಯು..! ತಂದೆ ಗಂಭೀರ

ಕಾರವಾರ: ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯ ತಲೆ ರಸ್ತೆಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. …

Read More »

ಗರ್ಭಿಣಿ ಆಗಿದಕ್ಕೆ ಮಹಿಳೆ ಕೆಲಸದಿಂದ ವಜಾ-15 ಲಕ್ಷ ಪರಿಹಾರ ನೀಡುವಂತೆ ಕಂಪೆನಿಗೆ ಕೋರ್ಟ್ ಆದೇಶ

ಅಮೆರಿಕ: ಪ್ರೆಗ್ನೆಂಟ್ ಆದ ಕಾರಣಕ್ಕೆ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದದ್ದಕ್ಕೆ ಆಕೆಗೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಮೆರಿಕದ ಉದ್ಯೋಗ ನ್ಯಾಯಮಂಡಳಿಯು ಸಂಸ್ಥೆಗೆ ಆದೇಶಿಸಿದೆ. ಚಾರ್ಲೊಟ್ ಲೀಚ್ (34) ಎಂಬ ಮಹಿಳೆ ಸಂಸ್ಥೆಯೊಂದರ ಆಡಳಿತ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅವರು ಗರ್ಭಿಣಿಯಾಗಿದ್ದಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇದರಿಂದ ಆಕೆ ತುಂಬಾ ಬೇಸರಗೊಂಡಿದ್ದರು. ಹೆರಿಗೆಯ ನಂತರವೂ ಕಂಪೆನಿಯ ಕೆಲಸಕ್ಕೆ ಏನೂ ಲೋಪ ಬಾರದಂತೆ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಕೈ ಮುಗಿದರೂ ಕಂಪೆನಿ ಕೇಳಿರಲಿಲ್ಲ. ಹೀಗಾಗಿ …

Read More »

ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಸ್ಮಶಾನಕ್ಕೆ ಹೋಗಿ ಏನು ಮಾಡಿದ ಗೊತ್ತೇ..?

ಹುಬ್ಬಳ್ಳಿ:ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಯುವಕನೋರ್ವ ಸ್ಮಶಾನದಲ್ಲಿ ಬೆಂಕಿ ಹಚ್ಚಿಕೊಂಡ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ್​ ಕೊರಡಿ(30) ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದ್ದಾನೆ. ವಯಸ್ಸು ಕಳೆದರೂ  ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂದು ಹಲವು ದಿನಗಳಿಂದ ಮಾನಸಿಕವಾಗಿ  ಸಂತೋಷ್ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಇದರಿಂದಾಗಿ ಸ್ಮಶಾನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಿಂದ ಸಂತೋಷ್ ಗೆ ಶೇ. 50ರಷ್ಟು ಸುಟ್ಟ ಗಾಯಗಳಾಗಿದೆ ಎಂದು ವರದಿ ತಿಳಿಸಿದೆ.

Read More »

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವ ಹಿಂದೂ ಪರಿಷತ್!

ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು  ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್‌ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗೆ ಇಮೇಲ್ ಐಡಿಯನ್ನು ನೀಡಲಾಗಿದೆ‌. ಕರೆ ಮಾಡಿದವರ ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಹೇಳಿದ್ದಾರೆ. ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್‌ ಗೆ ಸಂಪರ್ಕಿಸಲು ತಿಳಿಸಲಾಗಿದೆ. ಪೋಷಕರು ಲವ್ ಜಿಹಾದ್ …

Read More »

‘ದೇವರೇ ನನ್ನ ಮೂರ್ತಿ ಬಿಟ್ಟು ಬೇರೆ ಯಾರೂ ನನ್ನ ಕುತ್ತಿಗೆಗೆ ತಾಳಿ ಕಟ್ಟಬಾರದು’; ದೇವರ ಹುಂಡಿಯಲ್ಲಿ ಪತ್ರ ಪತ್ತೆ

ಚಾಮರಾಜನಗರ: ದೇವರೇ ನನ್ನ “ಮೂರ್ತಿ” ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು ಎಂದು ಪತ್ರ ಬರೆದು ದೇವರ ಹುಂಡಿಗೆ ಹಾಕಿರುವ ಅಪರೂಪದ ಪತ್ರ ಸಖತ್​ ವೈರಲ್​ ಆಗುತ್ತಿದೆ. ಹೌದು, ‘ದೇವರೇ ನನ್ನ ಮೂರ್ತಿ ಬಿಟ್ಟು ಬೇರೆ ಯಾರು ನನ್ನ ಕುತ್ತಿಗೆಗೆ ತಾಳಿ ಕಟ್ಟಬಾರದು’ ಎಂದು ಪತ್ರದಲ್ಲಿ ಬರೆದು ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿಯ ಮಾಯಮ್ಮದೇವಮ್ಮ ದೇವಸ್ಥಾನದ ಹುಂಡಿಗೆ ಹಾಕಿ ದೇವರ ಮೊರೆ ಹೋಗಿದ್ದಾರೆ. ಹುಂಡಿ ಎಣಿಕೆ ಕಾರ್ಯ ಮಾಡುವ ಸಂದರ್ಭದಲ್ಲಿ ಪತ್ರ ಸಿಕ್ಕಿದ್ದು, ಯುವತಿ ತಾನು ಪ್ರೀತಿ ಮಾಡಿದ ಯುವಕನೊಂದಿಗೆ ಮದುವೆಯಾಗುವ ಆಸೆಯೊಂದಿಗೆ …

Read More »

ಗುಜರಾತ್: ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್: 9 ಮಂದಿ ದುರ್ಮರಣ

ಗುಜರಾತ್: ಬಸ್‌ ಹಾಗೂ ಕಾರಿನ ನಡುವಿನ ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನ ನವ್ಸಾರಿ ಜಿಲ್ಲೆಯ ಹೆದ್ದಾರಿಯಲ್ಲಿ ಶುಕ್ರವಾರ (ಡಿ.30) ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದವರು ಸೂರತ್‌ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್‌ ಆಗುತ್ತಿದ್ದರು. ಈ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಎಸ್‌ ಯುವಿ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣವಾಗಿ ರಭಸದಿಂದ ಮುನ್ನುಗಿದೆ. ಪರಿಣಾಮ ಕಾರಿನಲ್ಲಿದ್ದವರು ಎಲ್ಲರೂ ಸಾವನ್ನಪ್ಪಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ …

Read More »

You cannot copy content of this page.