ಮಲ್ಪೆ: ಮಲ್ಪೆ ಆಳಸಮುದ್ರ ಮೀನುಗಾರರ ಬಲೆಗೆ ಸುಮಾರು 23 ಕಿಲೋ ತೂಕದ ಮೀನೊಂದು ಬಿದಿದ್ದು, ಇದು ಬರೋಬರಿ 2.44 ಲಕ್ಷ ರೂ.ಗಳಿಗೆ ಮಾರಾಟವಾಗಿದೆ ಎಂದು ತಿಳಿದು ಬಂದಿದೆ. ಈ ಮೀನನ್ನು ಸ್ಥಳೀಯವಾಗಿ ಗೋಲಿ ಮೀನು ಎಂದು ಕರೆಯಲಾಗುವ ಇದರ ವೈಜ್ಞಾನಿಕ ಹೆಸರು ಘೋಲ್ ಫಿಶ್. ಇದು ಮಹಾರಾಷ್ಟ್ರ ಮತ್ತು ಗುಜರಾತ್ ಸಮುದ್ರದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಮಲ್ಪೆಯ ಮೀನುಗಾರರ ಬಲೆಗೆ ಈ ಮೀನು ಹಲವು ಬಾರಿ ಬಿದ್ದಿದೆಯಾದರೂ ಇಷ್ಟು ದೊಡ್ಡ ಮೀನು ಸಿಕ್ಕಿರುವುದು ಪ್ರಥಮ. ಇದು ಕೆಜಿಗೆ 10,640 ರೂ.ಗಳಂತೆ ಮಾರಾಟವಾಗಿದೆ. ಇನ್ನು ಈ ಮೀನಿನ …
Read More »ತಾಜಾ ಸುದ್ದಿ
BIGG NEWS : ಜಲೀಲ್ ಕೊಲೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ : ಹಿಂದೂ ಮಹಿಳೆ ಜೊತೆ ಅನೈತಿಕ ಸಂಬಂಧವೇ ಕಾರಣ?
ದಕ್ಷಿಣಕನ್ನಡ : ಜಲೀಲ್ ಕೊಲೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ʻಹಿಂದೂ ಮಹಿಳೆ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಪ್ರಮುಖ ಕಾರಣʼ ಎಂಬ ಮಾಹಿತಿ ಹೊರ ಬಂದಿದ್ದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಡಿಸೆಂಬರ್ 24ರಂದು ಮಂಗಳೂರಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಜಲೀಲ್ ಎಂಬ ವ್ಯಾಪಾರಿಯನ್ನು ಚೂರಿ ಇರಿದು ಕೊಲೆಗೈದ ಘಟನೆ ಸಂಬಂಧಿಸಿ, ಈಗಾಗಲೆ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಈ ಕೊಲೆ ಬಗ್ಗೆ ಬೆಳಗಾವಿ ಅಧಿವೇಶನದಲ್ಲೂ ಮಹತ್ವದ ಚರ್ಚೆ ನಡೆಸಿದೆ. ಜಲೀಲ್ ಮತ್ತು ಸ್ಥಳೀಯ ಹಿಂದೂ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದನು. …
Read More »BREAKING NEWS : ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ
ಮೂಡಿಗೆರೆ : ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾದ ಘಟನೆ ಇಂದು ವರದಿಯಾಗಿದೆ. ಸೋಮಕಾಡು ಅರಣ್ಯಕ್ಕೆ ಬೆಂಕಿ ತಗುಲಿದ್ದು,ಕಿಡಿಗೇಡಿಗಳು ಬೆಂಕಿ ಹೊತ್ತಿಸಿ ದುಷ್ಕೃತ್ಯ ಎಸಗಿದ್ದಾರೆ ಎಂದುಶಂಕಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಚಿಕ್ಕಮಗಳೂರು- ಮೂಡಿಗೆರೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »ಸ್ಕ್ರೂಡ್ರೈವರ್ನಿಂದ 51 ಬಾರಿ ಬಾಲಕಿಗೆ ಇರಿದು ಹತ್ಯೆಗೈದ ಬಸ್ ಕಂಡಕ್ಟರ್ : ಕಾರಣವೇನು ಗೊತ್ತಾ? ಇಲ್ಲಿದೆ ಓದಿ
ಛತ್ತೀಸ್ ಗಢ: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಸ್ಕ್ರೂಡ್ರೈವರ್ ನಿಂದ 51 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (ಎಸ್ಇಸಿಎಲ್) ನ ಪಂಪ್ ಹೌಸ್ ಕಾಲೋನಿಯಲ್ಲಿ ಡಿಸೆಂಬರ್ 24 ರಂದು ಈ ಘಟನೆ ನಡೆದಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ (ಕೊರ್ಬಾ) ವಿಶ್ವದೀಪಕ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಆಕೆಯ …
Read More »ಜ್ಯೋತಿಷಿ ಮಾತು ಕೇಳಿ ಗಂಡನನ್ನೇ ಕೊಂದ ಲೇಡಿ ಎಸ್ಐ..!
ಕೃಷ್ಣಗಿರಿ: ಸಹಚರರೊಂದಿಗೆ ಸೇರಿ ತನ್ನಿಂದ ಬೇರ್ಪಟ್ಟ ಪತಿಯನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿ ಶನಿವಾರ ರಾತ್ರಿ ನಡೆದಿದೆ. ಸೆಂಥಿಲ್ ಕುಮಾರ್ (48) ಮೃತ ದುರ್ದೈವಿ. ಉತ್ತಂಗರೈ ಮೂಲದ ಎಸ್. ಚಿತ್ರಾ (47), ಉತ್ತಂಗರೈನ ಭಾರತೀಪುರಂ ಮೂಲದ ಎಂ ಸರೋಜಾ (37) ಮತ್ತು ಎಸ್. ವಿಜಯ ಕುಮಾರ್ (33) ಹಾಗೂ ತೂತುಕುಡಿಯ ರಾಜ ಪಾಂಡಿಯನ್ ಬಂಧಿತ ಆರೋಪಿಗಳು. ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಿಂಗಾರಪೇಟೈ ಪೊಲೀಸ್ ಠಾಣೆಯಲ್ಲಿ ವಿಶೇಷ ಸಬ್ ಇನ್ಸ್ಪೆಕ್ಟರ್ ಆಗಿದ್ದ …
Read More »ಕಾರ್ಕಳ: ಬಸ್ಗೆ ಟಿಪ್ಪರ್ ಢಿಕ್ಕಿ-ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ
ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಗುದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Read More »ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್…!
ಹಾಸನ : ಹೊಸ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಬ್ಲಾಸ್ಟ್ ಆದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದ್ದು, ಕೊರಿಯರ್ ಅಂಗಡಿಯ ವ್ಯಕ್ತಿಯ ಕೈಗೆ ಗಂಭೀರ ಗಾಯಗಳಾಗಿದೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್ನಲ್ಲಿರುವ ಡಿಟಿಡಿಸಿ ಕೊರಿಯರ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ.ಕೊರಿಯರ್ ಮೂಲಕ ಮಿಕ್ಸಿ ಪಾರ್ಸೆಲ್ ಬಂದಿತ್ತು, ಆದರೆ ಅದನ್ನು ತೆಗೆದುಕೊಂಡ ಹೋದ ವ್ಯಕ್ತಿ ಮಿಕ್ಸಿ, ಜಾರ್ ನಮಗೆ ಬೇಡ ಎಂದು ಅಂಗಡಿ ಮಾಲೀಕನಿಗೆ ವಾಪಸ್ ನೀಡಿದ್ದ. ಅಂಗಡಿ ಮಾಲೀಕ ಶಶಿ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಕೊರಿಯರ್ ಅಂಗಡಿ ಮಾಲೀಕ ಶಶಿ …
Read More »BIG NEWS: ಇಂದಿನಿಂದ ರಾಜ್ಯಾಧ್ಯಂತ ‘ಮಾಸ್ಕ್ ಕಡ್ಡಾಯ’
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ನಿನ್ನೆ ಆರೋಗ್ಯ ಸಚಿವರು ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಹಲವು ಅಧಿಕಾರಿಗಳ ಸಭೆ ನಡೆಸಿ, ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ. ಅದರಂತೆ ಇಂದಿನಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಕೆಲ ಷರತ್ತುಗಳನ್ನು ವಿಧಿಸಿ, ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಮಾರ್ಗಸೂಚಿಯಂತೆ, ಇಂದಿನಿಂದ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು …
Read More »ಸುರತ್ಕಲ್ ಜಲೀಲ್ ಕೊಲೆ ಪ್ರಕರಣ 10-12 ಜನ ವಶಕ್ಕೆ-ಕಮಿಷನರ್ ಶಶಿಕುಮಾರ್
ಮಂಗಳೂರು; ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು. ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ …
Read More »ದುಬೈನಿಂದ ಒಳ ಉಡುಪಿನಲ್ಲಿ 1ಕೋಟಿ ಮೌಲ್ಯದ ಚಿನ್ನಾಭರಣ ಸಾಗಾಟದ ವೇಳೆ ಸಿಕ್ಕಿಬಿದ್ದ ಯುವತಿ
ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಶಹಲಾ (19) ಬಂಧಿತ ಯುವತಿ.ಈಕೆ 1 ಕೋಟಿ ಮೌಲ್ಯದ ಚಿನ್ನಾಭರಣವನ್ನು ಮೂರು ಪ್ಯಾಕೇಟ್ ಮಾಡಿ ಒಳ ಉಡುಪಿನಲ್ಲಿ ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದರು. ಪೊಲೀಸರು ಲಭಿಸಿದ ಖಚಿತ ಮಾಹಿತಿಯಂತೆ ಯುವತಿಯನ್ನು …
Read More »