ತಾಜಾ ಸುದ್ದಿ

ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​

ತುಮಕೂರು: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ ‘ಸಿದ್ಧಗಂಗಾ ಶ್ರೀ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್​, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ …

Read More »

ಹಣದ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನ; ಮೂವರು ಕ್ರೈಸ್ತ ಧರ್ಮದ ಪ್ರಚಾರಕರು ಅರೆಸ್ಟ್‌

ತುಮಕೂರು: ಜಿಲ್ಲೆಯ ಮರಳೂರು ದಿಣ್ಣೆಯಲ್ಲಿ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಮೂವರು ಕ್ರೈಸ್ತ ಧರ್ಮದ ಪ್ರಚಾರಕರನ್ನು ಬಂಧಿಸಲಾಗಿದೆ. ರವಿ ಎನ್ನುವರ ಕುಟುಂಬ ಹಾಗೂ ಸ್ನೇಹಿತರಿಗೆ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜಯನಗರ ಪೊಲೀಸರು ಜೆಸ್ಸಿ, ಸಾರಾ ಮತ್ತು ಚೇತನ್‌ ಬಂಧಿಸಿದ್ದಾರೆ.ಆರೋಪಿಗಳು ಕ್ರೈಸ್ತ ಧರ್ಮಕ್ಕೆ ಸೇರುವಂತೆ ಧಾರ್ಮಿಕ ಬೋಧನೆಗಳ ಮೂಲಕ ಮಾತ್ರವಲ್ಲ, ಹಣದ ಆಮಿಷ ಒಡ್ಡಿಯೂ ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

Read More »

BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ : ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ. ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಇಂದು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಅರ್. ಅಂಬೇಸ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ. ಸ್ಪೀಕರ್ ವಿಶ್ವೇಶರ ಹೆಗಡೆ, ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, …

Read More »

ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ

ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರನ್ನು ಬಂಧಿಸಿರುವ ಮುಲ್ಕಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲಾ ಮೂವರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ …

Read More »

ಬೆಳ್ತಂಗಡಿ: ತೋಟದ ಶೆಡ್‌ನಲ್ಲಿ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ..!

ಬೆಳ್ತಂಗಡಿ: ವ್ಯಕ್ತಿಯೋರ್ವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ. ರಾತ್ರಿ ಶೆಡ್‌ನಲ್ಲಿ ಮಲಗಿದ್ದ ಶ್ರೀದರ್ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಮೂವರು ಸ್ಥಳೀಯರು ಹಲ್ಲೆ ನಡೆಸಿರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ಬಳಿಕ ಶ್ರೀಧರ್ ತಾನು ಕೆಲಸ ಮಾಡುವ ಶೆಡ್‌ಗೆ ತೆರಳಿ ಮಲಗಿದ್ದು,ಆದರೆ ಬೆಳಗ್ಗೆ ಶ್ರೀಧರ ಶೆಡ್‌ನಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಶ್ರೀಧರನ ಮೃತದೇಹ ಪತ್ತೆಯಗಿತ್ತು. ತೋಟದ ಬೇಲಿ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು, …

Read More »

ಹುಷಾರ್​​.. ಬೆತ್ತಲೆ ಇಮೇಜ್ ಬಂದ್ರೆ…. ಸ್ವೀಟಿ ಅಂತಾ ಭೇಟಿ ಮಾಡಿದ್ರೆ ಇನ್ನೂ ಡೇಂಜರ್..!

ಮೈಸೂರು : ಹುಷಾರ್​​.. ಬೆತ್ತಲೆ ಇಮೇಜ್ ಬಂದ್ರೆ ಡೇಂಜರ್​​​, ಹಾಯ್​​ ಅಂದ್ರೂ ಡೇಂಜರ್​​​, ಏಯ್​ ಅಂದ್ರೂ ಡೇಂಜರ್​​​. ಸ್ವೀಟಿ ಅಂತಾ ಭೇಟಿ ಮಾಡಿದ್ರೆ ಇನ್ನೂ ಡೇಂಜರ್​​​. ಹಣ ಕಿತ್ತು ಮಾನ ಹರಾಜಾಕ್ತಾರೆ ಈ ಖತರ್ನಾಕ್​ ಲೇಡಿ. ಮೈಸೂರು ಪೊಲೀಸರು ಕಿಲಾಡಿ ಲೇಡಿಯನ್ನು ಅರೆಸ್ಟ್ ಮಾಡಿದ್ದಾರೆ. ಈಕೆ ಹೆಸರು ಸವಿತಾ ಅಲಿಯಾಸ್ ಮಂಜುಳಾ ಯಾದವ್​​​. ಪಿರಿಯಾಪಟ್ಟಣದಿಂದ ಬಂದು ಮೈಸೂರಲ್ಲಿ ಸೆಟಲ್​ ಆಗಿದ್ದಾರೆ. ಕಷ್ಟಕ್ಕೆ ಅಂತಾ ಕೆಲ ದಂಪತಿ ಬಳಿ ಹಣ ಪಡೆದಿದ್ದು, ಆನಂತರ ದಂಪತಿ ನಡುವೆ ಕಲಹ ತಂದಿಡ್ತಿದ್ದರು. ಹಣ ಕೇಳಿದ್ರೆ ತನ್ನದೇ ನಗ್ನ ಪೋಟೋ ಕಳಿಸಿ …

Read More »

SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

ವಿಯೆಟ್ನಾಂ: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಕೃತ್ಯದಿಂದ ಬೇಸತ್ತ ಪತ್ನಿ ಆತನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ. ಹಾ ಥಿ ನ್ಗುಯೆನ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ 29 ವರ್ಷದ ಪತಿ ನ್ಗುಯೆನ್ ವ್ಯಾನ್ ಹೆಚ್ ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ.   ವ್ಯಾನ್ ಹೆಚ್ ತನ್ನ ಮೊದಲ ಪತ್ನಿಯ 15 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಾಲಕಿ ಹಲವು ಬಾರಿ ಹಾ ಥಿಗೆ ದೂರು ನೀಡಿದ್ದಳು. ಆದ್ರೆ, ಇದನ್ನು ಪತಿ ನಿರಾಕರಿಸಿದ್ದ. ಆದ್ರೆ, ಒಂದು ದಿನ …

Read More »

Interesting storie: ಅಪಘಾತದಿಂದ ಬಯಲಾಯ್ತು ಮೂಕ ಭಿಕ್ಷುಕನ ರಹಸ್ಯ, ಪೊಲೀಸರೇ ಕಂಗಾಲು

ಉತ್ತರ ಪ್ರದೇಶ: ಕೆಲವು ದಿನಗಳ ಹಿಂದೆ, ಒಡಿಶಾದ ದೇವಾಲಯದ ನವೀಕರಣಕ್ಕಾಗಿ 70 ವರ್ಷದ ಭಿಕ್ಷುಕಿ ಮಹಿಳೆ ತನ್ನ ಜೀವಮಾನದ ಉಳಿತಾಯದ ಒಂದು ಲಕ್ಷ ರೂಪಾಯಿಯನ್ನು ದೇಣಿಗೆ ನೀಡಿದ ಸುದ್ದಿ ವರದಿಯನ್ನು ನೀವು ನೋಡಿದ್ದೀರಿ. ಇದೀಗ ಉತ್ತರ ಪ್ರದೇಶದ ಭಿಕ್ಷುಕರೊಬ್ಬರು ಅಪಘಾತಕ್ಕೀಡಾಗಿ ಸುದ್ದಿಯಾಗಿದ್ದಾರೆ. ಅಪಘಾತದ ನಂತರ ಏನಾಯಿತು ಎಂಬುದು ಅನೇಕರನ್ನು ಬೆಚ್ಚಿಬೀಳಿಸಿದೆ. ನಿನ್ನೆ ಅಪಘಾತ ಸಂಭವಿಸದಿದ್ದರೆ ಭಿಕ್ಷುಕನ ರಹಸ್ಯ ಬಯಲಾಗುತ್ತಿರಲಿಲ್ಲ ಎನ್ನಲಾಗಿದೆ. ವರದಿಗಳ ಪ್ರಕಾರ, ಅಪಘಾತಕ್ಕೀಡಾದ 62 ವರ್ಷದ ಭಿಕ್ಷುಕ ಷರೀಫ್ ಬೌಂಕ್ ಪಿಪ್ರಾಯಿಚ್ ಪೊಲೀಸ್ ಠಾಣೆಯ ಸಮ್ದರ್ ಖುರ್ದ್ ನಿವಾಸಿ. ಅವರು ಕಿವುಡ ಮತ್ತು …

Read More »

ಬೆತ್ತಲಾಗಿ ರೂಮಿನಿಂದ ಬಂದ ವಿದೇಶಿ ಮಹಿಳೆ: ಪಂಚತಾರಾ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ

ವಿಲಕ್ಷಣ ಘಟನೆಯೊಂದರಲ್ಲಿ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದ ವಿದೇಶಿ ಮಹಿಳೆಯೊಬ್ಬರು ಬೆತ್ತಲೆಯಾಗಿ ರೂಮಿನಿಂದ ಹೊರ ಬಂದಿದ್ದಲ್ಲದೆ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲಾ ಘಟನಾವಳಿಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿಕೊಳ್ಳಲಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಥದೊಂದು ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಭಾರತಕ್ಕೆ ಪ್ರವಾಸಕ್ಕಾಗಿ ಬಂದಿದ್ದ ವಿದೇಶಿ ಮಹಿಳೆ ಒಬ್ಬರು ಅಲ್ಲಿನ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದರು. ಏಕಾಏಕಿ ಬೆತ್ತಲೆಯಾಗಿ ಬಂದ ಅವರು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಗಲಾಟೆ ಬಿಡಿಸಲು …

Read More »

ಬೆಂಗಳೂರಿನಲ್ಲಿ ಪುಂಡರ ಹಾವಳಿ: ಕರಾವಳಿ ಮೂಲದ ಯುವಕರ ಫಿಶ್ ಅಂಗಡಿಯವರ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಹಫ್ತಾ ನೀಡಲಿಲ್ಲ ಎನ್ನುವ ಕಾರಣಕ್ಕೆ ರೌಡಿಯೊಬ್ಬ  ಮೀನಿನ ಅಂಗಡಿ  ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ  ಬಾಣಸವಾಡಿಯ ಜೈ ಭಾರತ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ ರೌಡಿ ಸುಜೀತ್ ಎಂಬಾತ ನಿನ್ನೆ ರಾತ್ರಿ ಬಾಣಸವಾಡಿಯ ಜೈ ಭಾರತ್ ನಗರದಲ್ಲಿರುವ ಮೀನಿನ ಅಂಗಡಿ ಬಳಿಬಂದು ಹಫ್ತಾ ಕೇಳಿದ್ದಾನೆ. ಈ ವೇಳೆ ಮೀನಿನ ಅಂಗಡಿ ಸಿಬ್ಬಂದಿ ಹಪ್ತಾ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸುಜೀತ್ ಲಾಂಗ್ ಬೀಸಿ ಪುಂಡಾಟ ಮೆರೆದಿದ್ದಾನೆ. ಘಟನೆಯ ಬಳಿಕ ಬಾಣಸವಾಡಿ ಪೊಲೀಸರು ಆರೋಪಿ ಫ್ರೇಜರ್ ಟೌನ್ ನಿವಾಸಿ ಸುಜೀತ್‍ನನ್ನು ಬಂಧಿಸಿದ್ದಾರೆ. …

Read More »

You cannot copy content of this page.