ತಾಜಾ ಸುದ್ದಿ

ಮುಲ್ಕಿ: “ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ ದಾವೂದ್ -ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಒದೆ

ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ.   ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಶನಿವಾರ ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ …

Read More »

ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ – ಪ್ರಮೋದ್ ಮುತಾಲಿಕ್

ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಐದಾರು ಬಾರಿ ಪ್ರವಾಸ ಮಾಡಿದ್ದು ಉತ್ತಮ ಸ್ಪಂದನ ವ್ಯಕ್ತವಾಗಿದ್ದು ಇಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಹಿಂದುತ್ವದ ಆಧಾರದ ಗೆದ್ದ ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿದೆ. ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಅಕ್ರೋಷಿತ ಕಾರ್ಯಕರ್ತರೇ …

Read More »

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ಯುವಕ, ಯುವತಿಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್‌ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿನ ಬೆಳ್ತಂಗಡಿ ನಿವಾಸಿಯಾಗಿರುವ ಗ್ರಾಮದ ಜೀವನ್ ಎಂಬ ವಿದ್ಯಾರ್ಥಿ ಧರ್ಮಸ್ಥಳ ದ್ವಾರದ ಬಳಿ ಬೈಕ್ ಪಾರ್ಕ್ ಮಾಡಿ ಹೋದ ವೇಳೆ ಓರ್ವ ಯುವಕ, ಯುವತಿಯನ್ನು ಕರೆದುಕೊಂಡು ಆ ಬೈಕ್ ಮೂಲಕ ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಾಗಿ ಸಾಗಿರುವಂತಹ ದೃಶ್ಯ ಸ್ಥಳೀಯ ಕಟ್ಟಡದ ಸಿಸಿ ಕ್ಯಾಮೆರಾದಲ್ಲಿ …

Read More »

ಎಚ್ಚರ..! ಸ್ವಿಗ್ಗಿ, ಝೊಮ್ಯಾಟೋ ಡೆಲಿವರಿ ಬ್ಯಾಗ್‍ಗಳಲ್ಲೂ ಗಾಂಜಾ ಸಾಗಾಟ-ಇಬ್ಬರು ಅರೆಸ್ಟ್

ಬೆಂಗಳೂರು: ಸ್ವಿಗ್ಗಿ ಮತ್ತು ಝೊಮ್ಯಾಟೋ ಡೆಲಿವರಿ ಬ್ಯಾಗ್‍ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಿಗ್ಗಿ ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟ ಮಾಡುವ ಕುರಿತು ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ನಗರದ ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುವ ವಿಚಾರ ಬಯಲಾಗಿದೆ. ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ …

Read More »

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ ಗಿರಿ ಮತ್ತೆ ಮುಂದುವರೆದಿದೆ. ಜಿಲ್ಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿಗೆ ತಡೆ ಹಿಡಿದಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಭಾತರ್‌ ಚಿತ್ರಮಂದಿರದ ಬಳಿ ಘಟನೆ ನಡೆದಿದೆ. ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಉರ್ವಾ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.ಈ ವೇಳೆ ಮಂಗಳೂರಿನ ಉರ್ವಾ ಠಾಣೆ ಪೊಲೀಸರಿಂದ ಆ ಜೋಡಿಯ ರಕ್ಷಣೆ ಮಾಡಿದ್ದಾರೆ. ಕೂಡಲೇ ಆ ಜೋಡಿಯನ್ನು ಉರ್ವಾ ಪೊಲೀಸರು ಠಾಣೆಗೆ ಕರೆತಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Read More »

ತಾಯಿಯ ಸಾವಿನ ನಂತರ ಭಿಕ್ಷೆ ಬೇಡುತ್ತಿದ್ದ ಬಾಲಕ..! ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಥೆ

ಉತ್ತರ ಪ್ರದೇಶ: ಕೋವಿಡ್ -19 ನಿಂದಾಗಿ ತಾಯಿಯ ಸಾವಿನ ನಂತರ, ಜೀವನಕ್ಕಾಗಿ ಭಿಕ್ಷೆ ಬೇಡುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಬಾಲಕನ ಅಜ್ಜ ಸಾಯುವ ಮೊದಲು ತನ್ನ ಅರ್ಧದಷ್ಟು ಆಸ್ತಿಯನ್ನು ಬಾಲಕನಿಗೆ ಬಿಟ್ಟುಕೊಟ್ಟಿದ್ದನು. ಉಯಿಲು ಬರೆದಾಗಿನಿಂದಲೂ ಬಾಲಕನ ಸಂಬಂಧಿಕರು ಆತನಿಗಾಗಿ ಹುಡುಕಾಟ ನಡೆಸಿದ್ದರು. ಮೋಬಿನ್ ಎಂಬ ಹಳ್ಳಿಯ ಯುವಕ ಕಲಿಯಾರ್ ಬೀದಿಯಲ್ಲಿ ತಿರುಗಾಡುತ್ತಿರುವುದನ್ನು ಗುರುತಿಸಿದ ಸಂಬಂಧಿಕರು ಬಾಲಕನ ಕಿರಿಯ ಅಜ್ಜನ ಮನೆಯವರಿಗೆ ಮಾಹಿತಿ ನೀಡಿ, ಅವರು ಗುರುವಾರ ಸಹರಾನ್‌ಪುರಕ್ಕೆ ಬಾಲಕನನ್ನು ಕರೆದೊಯ್ದರು. ಮಗುವಿಗೆ ತನ್ನ ಗ್ರಾಮದಲ್ಲಿ ಪೂರ್ವಜರ ಮನೆ ಮತ್ತು ಭೂಮಿ ಇದೆ. …

Read More »

ಮಂಗಳೂರು: ಕುಕ್ಕರ್‌ ಬಾಂಬ್‌ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ …

Read More »

ಖಾಸಗಿ ಬಸ್‌ಗಳ ಮುಖಾಮುಖಿ ಡಿಕ್ಕಿ-ಚಾಲಕನ ಸಹಿತ ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ …

Read More »

ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪತ್ನಿ

ಬೆಂಗಳೂರು: ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ಮಹಿಳೆಯನ್ನು ಸ್ವಾತಿ ಅಂತ ತಿಳಿದು ಬಂದಿದ್ದು, ಸ್ವಾತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆ ತನ್ನ ಬಾಲ್ಯದ ಗೆಳೆಯನ ಜೊತೆಗೆ ಕಳೆದೆರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಅವರ ಮದುವೆಗೆ ಇಬ್ಬರ ಮನೆಯವರು ಕೂಡ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ.   ಈ ನಡುವೆ ಎರಡು ದಿ‌ನದ ಹಿಂದೆ ಮನೆಯಲ್ಲಿ ಸ್ವಾತಿಗೆ ಇಶ್ಟವಿರದ ಅಡುಗೆ ಮಾಡಿದ್ದರಂತೆ. ಇದರಿಂದ ಬೇಸರಗೊಂಡಿದ್ದ ಸ್ವಾತಿ ಊಟ ಮಾಡದೇ ಮಲಗಿಕೊಂಡಿದ್ದರಂಂತೆ. ಮರು …

Read More »

ಮದ್ಯ ಸೇವಿಸುವಾಗ ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ತಿಂದ ಕುಡುಕ!

ಲಕ್ನೋ : ಕುಡುಕನೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ ಬಾಲ ಮತ್ತು ಕಿವಿಗೆ ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಬರೇಲಿ ಜಿಲ್ಲೆಯ ಫರೀದ್ಪುರ ಪ್ರದೇಶದ ಎಸ್ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ. ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ …

Read More »

You cannot copy content of this page.