ತಾಜಾ ಸುದ್ದಿ

ಜನರಲ್ಲಿ ನಡುಕ ಹುಟ್ಟಿಸ್ತಿರುವ ‘ನಾಗಕನ್ಯೆ’, ಗ್ರಾಮಸ್ಥರಿಗೆ ದೇಗುಲ ಕಟ್ಟಿಸುವಂತೆ ಕಟ್ಟಪ್ಪಣೆ

ನಾಗರ ಹಾವನ್ನ ಕುಲ ದೇವತೆ ಎಂದು ಪರಿಗಣಿಸಿ, ಪೂಜಿಸುತ್ತಾರೆ. ಪ್ರತಿಯೊಂದು ದೇವಾಲಯವೂ ನಾಗದೇವತೆಯ ವಿಗ್ರಹಗಳನ್ನ ಹೊಂದಿರಬೇಕು ಎನ್ನುವ ನಿಯಮವಿದೆ. ಆದ್ರೆ, ಕರೀಂನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಚಿತ್ರ ಘಟನೆಯೊಂದು ಸ್ಥಳೀಯರಲ್ಲಿ ಭಯ ಹುಟ್ಟಿಸುತ್ತಿದೆ. ಕರೀಂನಗರ ಜಿಲ್ಲೆಯ ಸೈದಾಬಾದ್ ಮಂಡಲದ ಯುವತಿಯೊಬ್ಬಳು ನಾಗಕನ್ಯೆ ಎಂದು ಹೇಳಿಕೊಂಡಿದ್ದು ಸ್ಥಳೀಯವಾಗಿ ಮಾತ್ರವಲ್ಲದೇ, ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗುತ್ತಿದ್ದಾಳೆ. ಅಂದ್ಹಾಗೆ, ಎಗ್ಲಾಸ್ಪುರದ ಕೃಷ್ಣವೇಣಿ ಎಂಬ ಈ ಯುವತಿ, ಪದವಿ ಮುಗಿಸಿದ್ದು, ಕೆಲ ಕಾಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಪಾಠ ಮಾಡಿದ್ದಾಳೆ. ಇತ್ತೀಚೆಗಷ್ಟೇ ಕೃಷ್ಣವೇಣಿ ಅವರ ಪೋಷಕರು ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರಿಂದಾಗಿ …

Read More »

BIGG NEWS: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ- ವಿದ್ಯಾರ್ಥಿನಿಯರಿಂದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು

ಮಂಡ್ಯ: ಜಿಲ್ಲೆಯಲ್ಲಿ ಪಾಠ ಕಲಿಸುವ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯಾಕಂದರೆ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಕ್ಕೆ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಹೊಡೆದಿದ್ದಾರೆ. ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಸುಸ್ತಾಗಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ …

Read More »

ರಾಜ್ಯ IMA ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ ಕರಾವಳಿ ಮಲೆನಾಡು ಭಾಗದ ಕುಟುಂಬ ವೈದ್ಯರನ್ನ …

Read More »

ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ಸಾವು

ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ ರನ್ನು ಶಿರಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.   ಯಕ್ಷಗಾನ ಹಾಗೂ ಹಲವು ರಾಗಗಳಲ್ಲಿ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಸಾಕಷ್ಟು ಹೆಸರು ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಉಡುಪಿ:‌ ಹಠಾತ್ ಹೃದಯಾಘಾತದಿಂದ ಭವ್ಯ ಸಾವು

ಉಡುಪಿ:ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಇದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತ ಮಹಿಳೆ ಪತಿ, ಸಹೋದರ, ತಂದೆ ತಾಯಿಯನ್ನು ಅಗಲಿದ್ದಾರೆ.

Read More »

ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ

ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಆಸಿಡ್ ಎರಚಿದ್ದಾನೆ. ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸ್ ಅಧಿಕಾರಿಗಳು ಕೂಡ ಆಸ್ಪತ್ರೆಗೆ ತಲುಪುತ್ತಿದ್ದಾರೆ ಎನ್ನಲಾಗಿದೆ.  

Read More »

ಗಂಡನ ಬಿಟ್ಟು ಪ್ರಿಯಕರನ ಜೊತೆಗೆ ಹೋದವಳ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆ…!

ಹಾಸನ : ಮದುವೆಯಾಗಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿ ಕೊನೆಗೆ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕಾವ್ಯ(25) ಎಂದು ಗುರುತಿಸಲಾಗಿದೆ. ಪ್ರಿಯಕರ ಕಾವ್ಯಳ ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಬಿಬಿಎಂ ಓದಿದ್ದು, ಅಕ್ಷಯ್‌ ಎಂಬ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದಳು, ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ …

Read More »

ಫಿರೋಜಾಬಾದಿನಲ್ಲಿ ಬಸ್ ಟ್ರಕ್ ಗೆ ಡಿಕ್ಕಿ : 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ|

ಉತ್ತರಪ್ರದೇಶ : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಲುಧಿಯಾನ ಮತ್ತು ರಾಯ್ ಬರೇಲಿಯಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಅಪಘಾತಕ್ಕೀಡಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂಸಿ ವಾಹನ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದ ಪರಿಣಾಮ ಬಸ್ …

Read More »

BREAKING NEWS : ಅಕ್ರಮ ಎಸಗಿದ ‘ನ್ಯಾಯಬೆಲೆ ಅಂಗಡಿ’ ಲೈಸೆನ್ಸ್ ರದ್ದು ; ಸರ್ಕಾರದ ಕ್ರಮ ಎತ್ತಿ ಹಿಡಿದ ‘ಹೈಕೋರ್ಟ್’

ಬೆಂಗಳೂರು : ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದುಗೊಳಿಸಿ ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರದ ಕ್ರಮವನ್ನ ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಸಿಜೆ ಪಿ.ಬಿ ವರಾಳೆ, ನ್ಯಾ. ಅಶೋಕ್‌ಎಸ್ ಕಿಣಗಿರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದ್ದು, ರಾಮನಗರದ ಸಂಜೀವಯ್ಯ ಎಂಬುವವರ ನ್ಯಾಯಬೆಲೆ ಅಂಗಡಿ ಲೈಸನ್ಸ್ ರದ್ದುಗೊಳಿಸಿದೆ. ಈ ಮೂಲಕ ರಾಮನಗರ ಜಿಲ್ಲಾಡಳಿತದ ಕ್ರಮ ಹೈಕೋರ್ಟ್ ಎತ್ತಿ ಹಿಡಿದಿದೆ. ಪಡಿತರ ಧಾನ್ಯ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಪಡಿತರ ಕಾರ್ಡ್‍ದಾರರಿಗೆ ಧಾನ್ಯ ನೀಡದಿರುವಂತಹ ಎಲ್ಲ ಪ್ರಕರಣಗಳು ಲೈಸನ್ಸ್ ರದ್ದು ಮಾಡಲು …

Read More »

BREAKING NEWS: ಸ್ಯಾಂಡಲ್‌ವುಡ್ ನಟಿಗೆ ಎರಡು ವರ್ಷ ಜೈಲು ಶಿಕ್ಷೆ….ಯಾಕೆ ಗೊತ್ತಾ..?

ಬೆಂಗಳೂರು: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.   ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Read More »

You cannot copy content of this page.