ತಾಜಾ ಸುದ್ದಿ

‘ಫೋನ್’ಲ್ಲಿ ಮಾತಾಡುವಾಗ ‘ಆ ಸೌಂಡ್’ ಬರ್ತಿದ್ಯಾ.? ಜಾಗರೂಕರಾಗಿರಿ.!

ಇತರ ಜನರ ಕರೆಗಳನ್ನ ರೆಕಾರ್ಡ್ ಮಾಡುವುದು ಹೆಚ್ಚಿನ ದೇಶಗಳಲ್ಲಿ ಕಾನೂನು ಬಾಹಿರವಾಗಿದೆ. ಈ ಕಾರಣಕ್ಕಾಗಿ, ಗೂಗಲ್ ಕೆಲವು ಸಮಯದ ಹಿಂದೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳನ್ನ ಸಹ ನಿಷೇಧಿಸಿದೆ. ಅಂದರೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳಿಂದ ಕರೆ ರೆಕಾರ್ಡಿಂಗ್ ಮಾಡಲಾಗುವುದಿಲ್ಲ. ಇದಕ್ಕಾಗಿ, ಫೋನ್ ಸ್ವತಃ ಅಂತರ್ಗತ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನ ಹೊಂದಿದೆ. ಆದ್ರೆ, ಇನ್ ಬಿಲ್ಟ್ ಕಾಲ್ ರೆಕಾರ್ಡಿಂಗ್ ಫೀಚರ್ ಆನ್ ಮಾಡಿದ್ರೆ, ಎದುರಿಗಿರುವ ವ್ಯಕ್ತಿಗೆ ಅದರ ಮಾಹಿತಿ ಸಿಗುತ್ತದೆ. ಹೆಚ್ಚಿನ ಬಾರಿ ಇನ್ನೊಂದು ತುದಿಯಲ್ಲಿರುವ ವ್ಯಕ್ತಿ ನಿಮ್ಮ ಕರೆಯನ್ನ ರೆಕಾರ್ಡ್ ಮಾಡುತ್ತಿದ್ದಾನೆ ಎಂಬುದು ನಿಮಗೆ ತಿಳಿದಿರುವುದಿಲ್ಲ. …

Read More »

ಬಂಟ್ವಾಳ: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿ – ಕಾರು ಸಹಿತ ಚಾಲಕ ವಶಕ್ಕೆ

ಬಂಟ್ವಾಳ: ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದು ಬಂಟ್ವಾಳ ಸಂಚಾರ ಪೊಲೀಸರು ಪತ್ತೆ ಹಚ್ಚಿದ್ದು ಕಾರು ಚಾಲಕ ಮೊಹಮ್ಮದ್ ಶೇಖ್ ಫೈಜಲ್ ನನ್ನು ವಶಕ್ಕೆ ಪಡೆದು ಮಾರುತಿ ಸ್ವಿಫ್ಟ್ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಫೈಝಲ್ ಡಿಸೆಂಬರ್ 5 ರಂದು ಬೆಳಗ್ಗೆ ಬಿ ಸಿ ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಹಿಂಬದಿಯಿಂದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ್ ಮತ್ತು ಪ್ರಯಾಣಿಕ ಹೃತಿಕ್ ಗಾಯಗೊಂಡಿದ್ದರು. ಆರಂಭದಲ್ಲಿ ಆಟೋರಿಕ್ಷಾ ತಾನಾಗಿಯೇ ಪಲ್ಟಿಯಾಗಿ ಹೇಳಲಾಗಿತ್ತದ್ದರೂ, ಬಳಿಕ …

Read More »

ಪ್ರಿಯತಮೆಯನ್ನು ಭೇಟಿಯಾಗಲು ಮಧ್ಯರಾತ್ರಿ ಮನೆಗೆ ಬಂದ ಯುವಕ,ಆದರೆ ಅಲ್ಲಿ ಆಗಿದ್ದೇ ಬೇರೆ..!

ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದು, ಈ ವೇಳೆ ಉಂಟಾದ ಸದ್ದಿನಿಂದಾಗಿ ಮನೆಯವರು ಎಚ್ಚೆತ್ತಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಪರದಾಡಿದ್ದಾನೆ. ಇಂತಹದೊಂದು ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿನ ಗ್ರಾಮವೊಂದರ ಯುವಕ ಅದೇ ಗ್ರಾಮದಲ್ಲಿ ತಾನು ಪ್ರೀತಿಸುತ್ತಿದ್ದ ಯುವತಿ ಮನೆಗೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಭೇಟಿ ನೀಡಿದ್ದಾನೆ. ಇವರಿಬ್ಬರೂ ಏಕಾಂತದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಯ ಕುಟುಂಬಸ್ಥರಿಗೆ ಎಚ್ಚರವಾಗಿದೆ. ಆಗ ಗಾಬರಿಗೊಂಡ ಆತ ತಪ್ಪಿಸಿಕೊಳ್ಳಲು ಓಡಿದ್ದು, ತೆರೆದ ಬಾವಿಗೆ ಬಿದ್ದಿದ್ದಾನೆ. ಈ ಗಲಾಟೆಯಿಂದ ಅಕ್ಕಪಕ್ಕದ ಮನೆಯವರು …

Read More »

ಸುಳ್ಯ: ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಪತಿಯನ್ನು ರಸ್ತೆಯಲ್ಲೇ ಎಳೆದಾಡಿದ ಪತ್ನಿ..!

ಸುಳ್ಯ: ಮಂಗಳೂರು ಮೂಲದ ವ್ಯಕ್ತಿಯೋರ್ವರು ಬೇರೆ ಒಂದು ಮಹಿಳೆಯೊಂದಿಗೆ ಸುಳ್ಯದ ಗಾಂಧಿನಗರ ಲಾಡ್ಜಿಗೆ ಬಂದು ತಂಗಿದ್ದರು ಎನ್ನುಲಾಗಿದ್ದು, ಈ ವಿಷಯ ಆತನ ಪತ್ನಿಗೆ ತಿಳಿದಿದ್ದು ಇಂದು ಸಂಜೆ ಸುಳ್ಯಕ್ಕೆ ಬಂದ ಆಕೆ ಅವರು ತಂಗಿದ್ದ ಲಾಡ್ಜ್ ಬಳಿ ಬಂದು ರಂಪಾಟ ಮಾಡಲು ಪ್ರಾರಂಭಿಸಿದರು. ಪ್ರೇಯಸಿಯೊಂದಿಗೆ ಪತಿ ಬರುವುದನ್ನು ರಸ್ತೆಯಲ್ಲಿ ನಿಂತು ಕಾಯುತ್ತಿದ್ದ ಆತನ ಹೆಂಡತಿ ರಸ್ತೆಯಲ್ಲಿ ಬೀದಿರಂಪಾಟ ಆರಂಭಿಸಿದ್ದು, ಘಟನೆಯನ್ನು ನೋಡಲು ನೂರಾರು ಜನ ಜಮಾಯಿಸಿದರು. ಕೋಪಗೊಂಡಿದ್ದ ಪತ್ನಿಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನ ಪಟ್ಟರು ಆತನಿಗೆ ಸಾಧ್ಯವಾಗಲಿಲ್ಲ. ಈ ವೇಳೆ ಲಾಡ್ಜ್ ನಲ್ಲಿದ್ದ ಆಕೆಯ …

Read More »

ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರಗೈದ ಕಾಮುಕರು..!

ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್​ ಬಳಿ ಇರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ …

Read More »

ಬೈಂದೂರು ಹುಡುಗರ ಬೇಕರಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್: ಹಲ್ಲೆ ನಡೆಸಲು ರೌಡಿಗಳನ್ನ ಕಳುಹಿಸಿದ್ದೆ ಪಕ್ಕದ ಅಂಗಡಿಯಾವ…..!

ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಉಡುಪಿಯ ಬೈಂದೂರಿನ ಯುವಕರ ಬೇಕರಿ ನುಗ್ಗಿ ಪುಡಿರೌಡಿಗಳು ದಾಂಧಲೆ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದ ಯುವಕರ ಅಂಗಡಿಯ ಪಕ್ಕದಲ್ಲೇ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ಎಂಬಾತ ಸುಪಾರಿ ಕೊಟ್ಟು ಕೃತ್ಯ ನಡೆಸಿರುವುದು ಬಹಿರಂಗವಾಗಿದೆ.ಮಂಜುನಾಥ್ ಸ್ಥಳೀಯ ಹುಡುಗರನ್ನು ಬಳಸಿಕೊಂಡು ಗಲಾಟೆ ಮಾಡಿಸಿದ್ದಾನೆ.ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾಗಿರುವ ಯುವಕರ ಅಂಗಡಿ ಪಕ್ಕದಲ್ಲಿ ಮಂಜುನಾಥ್ ನ ಟೀ-ಕಾಫಿ ಅಂಗಡಿ ಇತ್ತು.ತನ್ನ ಅಂಗಡಿಯ ವ್ಯಾಪಾರಕ್ಕೆ ಈ ಅಂಗಡಿಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಿ ಸುಪಾರಿ ಕೊಟ್ಟು ಸ್ಥಳೀಯ ಹುಡುಗರ ಬಳಿ ಕೃತ್ಯ ನಡೆಸಲು …

Read More »

ಉಡುಪಿ: ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣು ಬಿಗಿದು ಕೊಂಡು ಆತ್ಮಹತ್ಯೆ

ಉಡುಪಿ: ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸದಾನಂದ ಸೇರಿಗಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಪಂಚೆಯಿಂದ ನೇಣು ಬಿಗಿದು ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ಗಮನಿಸಿದ ಸಹ ಕೈದಿಗಳು ನೇಣಿನ ಕುಣಿಕೆಯಿಂದ ಬಿಡಿಸಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್, ಸರ್ವೇಯರ್ ಆಗಿದ್ದ. ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಎಂಬಲ್ಲಿ ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿದ್ದ ಆರೋಪಿ ಈತ.ಕುರುಪ್ …

Read More »

ಮಧ್ಯರಾತ್ರಿ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿಯರು: ಬಜರಂಗದಳ ದಾಳಿ

ಮಂಗಳೂರಿನಲ್ಲಿ  ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ಹಿಂದೂ ಕಾರ್ಯಕರ್ತರು ತಡೆದು ಹಲ್ಲೆಗೆ ಯತ್ನಿಸಿದ್ದಾರೆ. ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿಯರನ್ನು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗ ದಳದ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಜೋಡಿ ಹೊಟೇಲ್‌ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದಾರೆ.  ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ …

Read More »

SHOCKING NEWS: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಹತ್ತು ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು, ಆಕೆಯ ತಾಯಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ? ಮಹಿಳೆ ಮತ್ತು ಆಕೆಯ ಹತ್ತು ತಿಂಗಳ ಮಗಳು ಪೆಲ್ಹಾರ್‌ನಿಂದ ವಾಡಾ ತಹಸಿಲ್‌ನ ಪೊಶೆರೆಗೆ ಕ್ಯಾಬ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕ ಮತ್ತು ಕೆಲವು ಸಹ ಪ್ರಯಾಣಿಕರು ಮಹಿಳೆಗೆ ಕಿರುಕುಳ ನೀಡಲಾರಂಭಿಸಿದ್ದಾರೆ. ಇದನ್ನು ಮಹಿಳೆ ವಿರೋಧಿಸಿದಾಗ, ಸಹ ಪ್ರಯಾಣಿಕರು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆದ್ರೆ, ವೇಗವಾಗಿ …

Read More »

ಘೋರ ದುರಂತ : ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು 10 ತಿಂಗಳ ಮಗು ಸಾವು!

 ದಾವಣಗೆರೆ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ 10 ತಿಂಗಳ ಮಗಳು ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿದ್ದ ವೇಳೆ ನೀರು ತುಂಬಿದ ಬಕೆಟ್ ಗೆ ಬಿದ್ದು ಅನುಶ್ರಾವ್ಯ ಸಾವನ್ನಪ್ಪಿದ್ದಾಳೆ. ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಮಗು ಸಾವನ್ನಪ್ಪಿದೆ.

Read More »

You cannot copy content of this page.