ತಾಜಾ ಸುದ್ದಿ

BIGG NEWS : ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ : ಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆ!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದು, ಇದೀಗ ಮುರುಘಾ ಮಠದ ಹಾಸ್ಟೆಲ್​ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ಆರ್​ಟಿಐ ಕಾರ್ಯಕರ್ತ ಬಿ.ಎಚ್.ಗೌಡ್ರು ಗಂಭೀರ ಆರೋಪ ಮಾಡಿದ್ದು, ಮುರುಘಾಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ. ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ …

Read More »

ಮಂಗಳೂರು: ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಪುನೀತ್ ಅತ್ತಾವರ- ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್ ಬುಕ್ ಮತ್ತು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು ಭಾರಿ ವಿವಾದ ಸೃಷ್ಟಿಸಿದೆ. ‘ಪದೇ ಪದೇ ಹೇಳುತ್ತಿದ್ದೇವೆ, ಹಿಂದೂ ಹುಡುಗಿಯರ ಜೊತೆ ತಿರುಗಬೇಡಿ’ ‘ಲವ್ ಜಿಹಾದ್ ಮಾಡಿ ಹಿಂದೂ ಹುಡುಗಿಯರ ಬಾಳು ಹಾಳು ಮಾಡಬೇಡಿ’ ‘ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ’ ‘ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ನಿಮಗೆ ಮಯ್ಯತ್(ಮರಣ) …

Read More »

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್ಐಎಗೆ ಹಸ್ತಾಂತರ

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಎನ್ಐಎಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ತನಿಖೆಯನ್ನು ಕೈಗೆತ್ತಿಕೊಳ್ಳಲು ಎನ್ಐಎ ಮೂರು ತಂಡ ಮಂಗಳೂರಿಗೆ ಆಗಮಿಸಿದೆ. ಆದರೆ ಈ ಮೊದಲೇ ಎನ್ಐಎ ನ್ಯಾಯಾಲಯದಿಂದ ನವೆಂಬರ್19ರಂದು ನಗರದ ಗರೋಡಿ ಸಮೀಪ ಶಂಕಿತ ಭಯೋತ್ಪಾದಕ ಶಾರೀಕ್‌ನಲ್ಲಿದ್ದ ಕುಕ್ಕರ್ ಬಾಂಬ್ ರಿಕ್ಷಾದಲ್ಲಿ ಸಂಚಾರದಲ್ಲಿದ್ದಾಗಲೇ ಸ್ಫೋಟಗೊಂಡಿತ್ತು. ಪ್ರಕರಣ ನಡೆದ ಮರುದಿನದಿಂದಲೇ ಎನ್ಐಎ ತಂಡ ಮಂಗಳೂರು ಪೊಲೀಸರೊಂದಿಗೆ ತನಿಖೆಗೆ ಕೈಜೋಡಿಸಿತ್ತು. ಆ ಬಳಿಕ ಕೇಂದ್ರ ಸರಕಾರ ಈ ಪ್ರಕರಣವನ್ನು ಎನ್ಐಎಗೆ ವಹಿಸಿತ್ತು. ಇದೀಗ ಪ್ರಕರಣದ ವಿಚಾರಣೆಯನ್ನು ಮಂಗಳೂರು ನಗರ …

Read More »

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು

ಬ್ರಹ್ಮಾವರ: ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಅಸುನೀಗಿದ್ದು ದೇಹ ಛಿದ್ರ ಛದ್ರವಾಗಿ ಬಿದ್ದ ಘಟನೆ ಸಂಭವಿಸಿದೆ. ಶೇಖರ್ ಎಂಬವರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಎಕ್ಸ್ ಪ್ರೆಸ್ ಬಸ್ ಅವರಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರ ದೇಹ ಛಿದ್ರವಾಗಿ‌ ರಸ್ತೆಯಲ್ಲಿ ಬಿದ್ದಿದೆ. ಕುಂದಾಪುರದಿಂದ ಉಡುಪಿಗೆ ಕಡೆಗೆ ಬಸ್ ಅತಿವೇಗವಾಗಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿದೀಪ ಇಲ್ಲದೆ ಈ ಅಪಘಾತ ನಡೆದಿದೆ, ಈ ಭಾಗದ ಹೆದ್ದಾರಿಯಲ್ಲಿ ದಾರಿ …

Read More »

ಪ್ರೇಮಿಗಳ ನಡುವೆ ಜಗಳ; ಕೊಲೆಯಲ್ಲಿ  ಅಂತ್ಯ..!

ಬೆಂಗಳೂರು :  ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಪ್ರೇಮಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ  ಅಂತ್ಯವಾದ ಘಟನೆ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ (23) ಎಂಬ ಯುವತಿಯನ್ನು, ಸಂತೋಷ್ ದಾಮಿ (27) ಎಂಬಾತ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕೃಷ್ಣಕುಮಾರಿ ನಗರದ ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದಳು ಹಾಗೂ ಆರೋಪಿ ಸಂತೋಷ್ ದಾಮಿ ಟಿಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇನ್ನೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಇಬ್ಬರೂ ಒಂದೇ ರೂಂ ಬಾಡಿಗೆ ಪಡೆದು …

Read More »

ಬೆಳ್ತಂಗಡಿ: ಗುರುವಾಯನಕೆರೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಶಂಕೆ

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳೀಯ ರಿಕ್ಷಾ ಡ್ರೈವರ್ ಒಬ್ಬರ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಬೆಳಾಲು ವಿಪತ್ತು ನಿರ್ವಹಣಾ ತಂಡದವರು ಶೋಧ ಕಾರ್ಯ ನಡೆಸುತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Read More »

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಆಭರಣದ ಅಂಗಡಿಯಲ್ಲಿ ಚಿನ್ನದ ಸರ ಕಳವು..!

ಉಡುಪಿ:  ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು‌ ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ  ಬಿ.ಸತ್ಯನಾರಾಯಣ ಶೇಟ್‌ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಕನಕದಾಸ ರಸ್ತೆಯಲ್ಲಿ ಪಾಂಡುರಂಗ ಜುವೆಲ್ಲರ್ಸ್‌ ಎಂಬ ಆಭರಣದ ಅಂಗಡಿ ನಡೆಸುತ್ತಿದ್ದಾರೆ. ಇವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಪುರುಷ ಬಂದಿದ್ದು, ಮಾಲೀಕರ ಗಮನವನ್ನು ಬೇರೆಡೆಗೆ …

Read More »

ಲವ್‌ ಜಿಹಾದ್‌ ವಿರುದ್ಧ ʼಹಿಂದೂ ಸಂಘಟನೆಗಳಿಂದ ಪೋಸ್ಟರ್‌ ವಾರ್‌ ʼ

ಕರಾವಳಿಯಲ್ಲಿ ಲವ್‌ ಜಿಹಾದ್‌ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್‌ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್‌ ವಾರ್‌ ಮೂಲಕ ಕಿಚ್ಚು ಹಚ್ಚಿದ್ದಾರೆ. ಈ ಪೋಸ್ಟರ್‌ನಲ್ಲಿ ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್‌..! ಶವ ಯಾತ್ರೆ ಮಾಡಲಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್‌ ಅತ್ತಾವರ್‌ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇನ್ನೂ ಪದೇ ಪದೇ ಹೇಳುತ್ತಿದ್ದೆವೆ ಹಿಂದು ಹುಡುಗಿಯರ ಜೊತೆ ತಿರುಗೇಡಿ ಲವ್‌ ಜಿಹಾದ್‌ ಮಾಡಿ ಹಿಂದೂ ಹುಡಗಿಯರ ಬಾಳು …

Read More »

ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ಕಾಂಡೋಮ್, ನೀರಿನ ಬಾಟಲಿಯಲ್ಲಿ ಮದ್ಯ ಪತ್ತೆ

ಬೆಂಗಳೂರು: ನಗರದ ಕೆಲವು ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ವಸ್ತುಗಳನ್ನು ಕಂಡುಬಂದಿದ್ದು, ಸಿಬ್ಬಂದ್ದಿಗಳಿಗೆ ಶಾಕ್‌ ಆಗಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್​ನರ್​ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ. ಈ ಬೆಳವಣಿಗೆಯು …

Read More »

ಮಂಗಳೂರು: ಸ್ಫೋಟದ ಶಂಕಿತ ಉಗ್ರ ಶಾರೀಕ್‌ ಚೇತರಿಕೆ: ಆಸ್ಪತ್ರೆಗೆ ಬಿಗಿ ಭದ್ರತೆ..!

ಮಂಗಳೂರು : ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ವಿಚಾರಣೆ ತೀವ್ರಗೊಳಿಸಲು ಪೊಲೀಸರು ವೈದ್ಯರ ಅನುಮತಿಗಾಗಿ ಕಾಯುತ್ತಿದ್ದಾರೆ. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಇದೀಗ ಚಿಕಿತ್ಸೆಯಲ್ಲಿ ತುಸು ಚೇತರಿಸಿಕೊಂಡಿದ್ದು, ತನಿಖಾಧಿಕಾರಿಗಳು ತನಿಖೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಎನ್‌ಐಎ ತನಿಖೆ ಕೈಗೆತ್ತಿಕೊಳ್ಳಲಿದ್ದು ಇದರಿಂದ ಆತನ ಉದ್ದೇಶ, ಹಿಂದಿರುವ …

Read More »

You cannot copy content of this page.