ಬ್ರಹ್ಮಾವರ: ವಿವಾಹಿತ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿನ್ಸಿ ಶೈಜು ಥೋಮಸ್ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿವಾಹಿತರಾಗಿದ್ದು ಇವರ ಗಂಡ ಉದ್ಯೋಗದ ನಿಮಿತ್ತ ದುಬೈಯಲ್ಲಿದ್ದರು. ಇವರು ಮಗಳೊಂದಿಗೆ ಗಂಡನ ಮನೆಯಾದ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ವಾಸವಾಗಿದ್ದು, ಅತ್ತೆ, ಮಾವ ಅದೇ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು. ಬಿನ್ಸಿ ಶೈಜು ಥೋಮಸ್ ಅವರು ಅಕ್ಟೋಬರ್ 26ರಂದು ರಾತ್ರಿ ಇಲಿ ಪಾಷಾಣ ಸೇವಿಸಿ ಡೆತ್ ನೋಟ್ ಬರೆದಿಟ್ಟು ಯಾರಿಗೂ …
Read More »ತಾಜಾ ಸುದ್ದಿ
43 ಪ್ರಯಾಣಿಕರಿದ್ದ ವಿಮಾನ ಕೆರೆಗೆ ಪತನ, ಸಾವು ನೋವಿನ ಆತಂಕ
ತಾಂಜನಿಯಾ: 43 ಪ್ರಯಾಣಿಕರಿದ್ದ ವಿಮಾನವೊಂದು ತಾಂಜನಿಯಾದ ವಿಕ್ಟೋರಿಯಾ ಲೇಕ್ನಲ್ಲಿ ಪತನಗೊಂಡಿದೆ. ಕೆಟ್ಟ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಬುಕೊಬಾದಲ್ಲಿರುವ ಕೆರೆಗೆ ಬಿದ್ದಿದೆ. ಸದ್ಯ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದಿಂದ 100 ಮೀಟರ್ ಅಂತರದಲ್ಲಿ ಅಪಘಾತ ಸಂಭವಿಸಿದೆ. ಬುಕೊಬಾ ವಿಮಾನ ನಿಲ್ದಾಣದ ಬಳಿ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. 39 ಪ್ರಯಾಣಿಕರು ಸೇರಿ 43 ಮಂದಿ ವಿಮಾನದಲ್ಲಿ ಇದ್ದರು. ಅವರಲ್ಲಿ ಇಬ್ಬರು ಪೈಲಟ್ಗಳು ಹಾಗೂ ಇಬ್ಬರು ಕ್ಯಾಬಿನ್ ಸಿಬ್ಬಂದಿ ಇದ್ದರು. ವಿಮಾನವು ದಾರ್ …
Read More »