ತಾಜಾ ಸುದ್ದಿ

ಕಾರ್ಕಳ: ಮಗುವಿನೊಂದಿಗೆ ತಾಯಿ ನಾಪತ್ತೆ

ಕಾರ್ಕಳ:  ಈದು ಗ್ರಾಮದ ವರಿಮಾರು ದರ್ಖಾಸು ಮನೆಯಲ್ಲಿ ವಾಸವಿದ್ದ ತಾಯಿ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಶಿವಾನಂದ ಎಂಬವರ ಹೆಂಡತಿ ಅಶ್ವಿನಿ ಎಸ್‌. (28) ಹಾಗೂ ಅವರ ಏಳೂವರೆ ವರ್ಷದ ಮಗು ಆಶಿಕ್‌ ಎಂದು ಗುರುತಿಸಲಾಗಿದೆ.     ಹೊಸ್ಮಾರು ಅಡಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅಶ್ವಿನಿ ಜೂ.11ರಂದು ಮಧ್ಯಾಹ್ನ 2.50ಕ್ಕೆ ಚಿಕ್ಕಮನ ಮಗಳು ರಶ್ಮಿತಾರಲ್ಲಿ ಮಂಗಳೂರಿನಲ್ಲಿರುವ ತಂಗಿ ಮೈನಾಳ ಮಗುವಿಗೆ ಹುಷಾರಿಲ್ಲದೆ ಇದ್ದು, ಮಂಗಳೂರಿಗೆ ಹೋಗಿ ಬರುವುದಾಗಿ ತಿಳಿಸಿ ಮಗುವಿನೊಂದಿಗೆ ಹೋದವರು  ತಂಗಿಯ ಮನೆಗೂ ಹೋಗದೆ ವಾಪಸ್ಸು ತನ್ನ ಮನೆಗೂ …

Read More »

ಸ್ನೇಹಲ್ ಸಾಮಂತ್ ಅವರಿಗೆ PHD

ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಾಹೆ ವಿ. ವಿ ಪಿ.ಎಚ್.ಡಿ ನೀಡಿದೆ. ಎಂ. ಐ. ಟಿ ಬೆಂಗಳೂರು ಸಿ. ಎಸ್. ಇ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ!! ಪ್ರೇಮಾ ಕೆ. ವಿ ಅವರ ಮಾರ್ಗದರ್ಶನದಲ್ಲಿ ಹಾಗೂ ಎಂ. ಐ. ಟಿ ಮಣಿಪಾಲದ ಸಿ.ಎಸ್.ಇ ವಿಭಾಗದ ಪ್ರಾಧ್ಯಾಪಕಿ …

Read More »

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಗಡುವು ಅಂತ್ಯ

ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು ಹೈಕೋರ್ಟ್‌ ನೀಡುವ ನಿರ್ದೇಶನ ಧರಿಸಿ HSRP  ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ. 2019ರ ಏಪ್ರಿಲ್‌ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈವರೆಗೆ 35-40ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. ಹೈಕೋರ್ಟ್‌ ನೀಡುವ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Read More »

ಉಡುಪಿ: ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ..!

ಉಡುಪಿ: ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವ ಕಾರಣ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ದವಾಗಿರುವ ಸಾಧ್ಯತೆ ಇದ್ದು ಪ್ರವಾಸಿಗರು ಸಮುದ್ರಕ್ಕೆ ಇಳಿದರೆ ಅನಾಹುತವಾಗುವ ಸಾಧ್ಯತೆ ಇದೆ.ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಮಲ್ಪೆ ಬೀಚ್​ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ. …

Read More »

ಕಾಪು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ- ಆರೋಪಿಯ ಬಂಧನ

ಉಡುಪಿ ಜಿಲ್ಲೆಯ ಕಾಪು ಸಮೀಪ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಕಳೆದ ವರ್ಷ ಅ.15ರಿಂದ 25ರ ನಡುವಿನ ಅವಧಿಯಲ್ಲಿ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದ. ಎರಡು ತಿಂಗಳ ಬಳಿಕ ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಾಲಕಿಯನ್ನು ಆಸ್ಪತ್ರೆಗೆ …

Read More »

ನಟ ದರ್ಶನ್ ಗೆಳತಿ ಪವಿತ್ರಾಗೌಡ ಅರೆಸ್ಟ್‌..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್. ಆರ್ ನಗರ ಠಾಣೆ ಪೊಲೀಸರು ದರ್ಶನ್‌ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.   ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 …

Read More »

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More »

ಬೆಳ್ತಂಗಡಿ: ವಿಚ್ಚೇದನಕ್ಕೂ ಮುನ್ನ ಎರಡನೇ ವಿವಾಹ- ಪತ್ನಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗೆ ಕೋರ್ಟ್ ಆದೇಶ

ಬೆಳ್ತಂಗಡಿ: ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯ ದಲ್ಲಿ ಇರುವಾಗಲೇ ಪತ್ನಿ 2ನೇ ವಿವಾಹ ವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದಗಳನ್ನು ಆಲಿಸಿದ ಬೆಳ್ತಂಗಡಿ ನ್ಯಾಯಾಲಯವು ಪತ್ನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪಣಕಜೆ ಮುಂಡಾಡಿ ನಿವಾಸಿ ಉದಯ ನಾಯಕ್ ಅವರು ಮುಂಬಯಿಯ ಅನಿತಾ ನಾಯಕ್ ಅವರನ್ನು 2018ರಲ್ಲಿ ವಿವಾಹವಾಗಿದ್ದರು. ಒಂದು ವರ್ಷದ ಬಳಿಕ ದಾಂಪತ್ಯ ದಲ್ಲಿ ಅಡೆತಡೆ ಬಂದ ಹಿನ್ನೆಲೆ ಮಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಮುಂದಾಗಿದ್ದರು. ಪ್ರತೀ ತಿಂಗಳು 30 ಸಾವಿರ ರೂ. ನೀಡುವಂತೆ ಪತ್ನಿ ಕೋರಿದ್ದರು. ಈಮಧ್ಯೆ ಪತ್ನಿ ಪತಿಗೆ …

Read More »

“ನಾವು ಆ ವಿಚಾರಕ್ಕೆ ವಿಚ್ಛೇದನ ಪಡೆದಿಲ್ಲ” – ಚಂದನ್‌-ನಿವೇದಿತಾ ಸ್ಪಷ್ಟನೆ

ಬೆಂಗಳೂರು : ನಾವಿಬ್ಬರೂ ಸ್ವಯಿಚ್ಛೆಯಿಂದ ವಿಚ್ಛೇದನ ಪಡೆಯುತ್ತಿದ್ದು, ನಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಸುಖಾಸುಮ್ಮನೆ ಹಬ್ಬಿಸಬೇಡಿ ಎಂದು ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ ವಿಚ್ಛೇದನ ಅರ್ಜಿ ಸಲ್ಲಿಸಿದ ನಂತರ ಇಂದು ಬಹಿರಂಗವಾಗಿ ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಚಂದನ್, ಜನ ಗಾಳಿ ಮಾತುಗಳಿಗೆ ಕಿವಿಗೊಡಬೇಡಿ ಎಂದ್ರು. ನಿವೇದಿತಾ ಯಾವುದೇ ರೀತಿಯ ಜೀವನಾಂಶ ಕೇಳಲಿಲ್ಲ, ನಾನು ಕೊಟ್ಟಿಲ್ಲ, ಮಕ್ಕಳಿಗೆ ಸಂಬಂಧ ಪಟ್ಟಂತೆ ಯಾವ ಕಾರಣಕ್ಕೂ ನಮ್ಮ ವಿಚ್ಛೇದನ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ರು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಎಲ್ಲೆಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. …

Read More »

ಪುತ್ತೂರು: ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆ..!

 ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ‌ ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ‌ಬೆಳ್ಳಾರೆ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »

You cannot copy content of this page.