ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಜೈಲು ಕೈದಿ ಅನೂಪ್ ಕುಮಾರ್ ಶೆಟ್ಟಿ ಎಂದು ತಿಳಿದು ಬಂದಿದೆ. ಕುಂದಾಪುರದಲ್ಲಿ ಮೂರು ವರ್ಷದ ಹಿಂದೆ ನಡೆದ ಉದ್ಯಮಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಆರೋಪಿಯಾಗಿದ್ದ ಎಂದು ತಿಳಿಯಲಾಗಿದೆ. ವಿಚಾರಣಾ ಖೈದಿಯಾಗಿದ್ದ ಅನೂಪ್ ಕಾಯಿಲೆಯಿಂದ ಬಳಲುತ್ತಿದ್ದ.ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
Read More »ತಾಜಾ ಸುದ್ದಿ
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಸ್ವಿಫ್ಟ್ ಡಿಝರ್ ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಿಸಲಾಗುತ್ತಿದ್ದು, ಶಿರೂರು ಟೋಲ್ ಗೇಟ್ ಬಳಿ ಪತ್ತೆಯಾಗಿದೆ. ಮೊದಲು ಇದನ್ನು ಗಮನಿಸಿದ ಆಂಬುಲೆನ್ಸ್ ಡ್ರೈವರ್ ಒಬ್ಬರು ಈ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಿಚಾರಿಸಿದ್ದಕ್ಕೆ ಕಾರ್ನಲ್ಲಿದ್ದ ಮೃತದೇಹದ ವಾರಸುದಾರರು, ಆಂಬ್ಯುಲೆನ್ಸ್ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮೃತದೇಹವನ್ನು ಉಡುಪಿಯಿಂದ ಉತ್ತರ ಕನ್ನಡ …
Read More »ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹೋಮ ನಡೆಸುತ್ತಿರುವ ಘಟನೆ ಮಂಡೆ ಕೋಲಿನ ಮೂರೂರಿನಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಗಡಿ ಪ್ರದೇಶವಾದ ಮುರೂರು ಭಾಗದಲ್ಲಿ ಪಯಸ್ವಿನಿ ನದಿಯ ಹೊಂಡಗಳಲ್ಲಿರುವ ಮೀನುಗಳನ್ನು ಹಿಡಿಯಲು ಕಿಡಿಗೇಡಿ ಗಳು ನೀರಿಗೆ ವಿಷ ಬೆರೆಸುವ ಕೃತ್ಯ ನಡೆಸಿದ್ದಾರೆ. ಇದರಿಂದಾಗಿ ನೀರಿನ ಹೊಂಡಗಳಲ್ಲಿ ಮೀನುಗಳು ಸತ್ತು ತೇಲುತ್ತಿರುವುದು ಕಂಡು ಬಂದಿದೆ. ಅಲ್ಪ ಸ್ವಲ್ಪ ನೀರು ಇರುವ ಹೊಂಡದಲ್ಲಿ ವಿಷ ಬೆರೆಸಿ ಮೀನು ಹಿಡಿಯುವುದರಿಂದ ಈ ರೀತಿ ಮೀನುಗಳು ಸಾಯಲು ಕಾರಣ …
Read More »SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ
ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ ಧನ್ವಿ ಸಂಜೀವ ಪೂಜಾರಿ ಅವರು 448 ಅಂಕಗಳನ್ನು ಪಡೆಯುವುದರೊಂದಿಗೆ ಅದ್ವೀತಿಯ ಸಾಧನೆ ಮಾಡಿದ್ದಾರೆ. ಇವರು ನಾರಾವಿ ಚರ್ಚ್ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಇನ್ನು ಇವರು ಸಂವೀವ ಪೂಜಾರಿ ಹಾಗೂ ಪ್ರತೀಮಾ ದಂಪತಿಗಳ ಪ್ರೀತಿಯ ಎರಡನೇಯ ಪುತ್ರಿ ಆಗಿರುತ್ತಾರೆ.
Read More »ಕೊಲ್ಲೂರು: ಯುವತಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಉಡುಪಿ ಸಮೀಪದ ನಿವಾಸಿ ಮಂಜುನಾಥ (24) ಬಂಧಿತ ಆರೋಪಿ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ 24 ವರ್ಷದ ಯುವತಿ ನೀಡಿದ ದೂರಿನಡಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯು ಯುವತಿಯೊಂದಿಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಣಾದಲ್ಲಿ ಹರಿ ಬಿಟ್ಟ ಬಗ್ಗೆಯೂ ನೊಂದ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
Read More »ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಇದೀಗ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ. ಪೊಲೀಸರು …
Read More »ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿಕೊಂಡ ಘಟನೆ ಸಂಭವಿಸಿದೆ. ಸಂತೆಕಟ್ಟೆಯ ಅಸ್ಟರ್ ಅವರಿಗೆ ಡೇಟಿಂಗ್ ಆ್ಯಪ್ ಮೂಲಕ ಸಾಚಿ ಜೈನ್ ಎಂಬ ಯುವತಿಯ ಪರಿಚಯವಾಗಿತ್ತು. ಆ ಬಳಿಕ ಆಕೆಯು ವಾಟ್ಸಾಪ್ನಲ್ಲಿ ಅಸ್ಟರ್ ಅವರೊಂದಿಗೆ ಚಾಟಿಂಗ್ ಮತ್ತು ವಿಡಿಯೋ ಕಾಲ್ ನಡೆಸುತ್ತಿದ್ದರು. ಈ ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಕೆಲವು ದಿನಗಳ ಬಳಿಕ ಅಸ್ಟರ್ ಅವರಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಸ್ಟರ್ ಅವರು ಆಕೆ ತಿಳಿಸಿದ ಬ್ಯಾಂಕ್ ಖಾತೆ …
Read More »ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ ಬಿದ್ದಿರುವುದು ಸಂತೋಷ ತಂದಿದೆ. ಪ್ರಕರಣದ ಹಿಂದಿರುವ ಎಲ್ಲಾ ಆರೋಪಿಗಳ ಬಂಧನವಾಗಬೇಕು. ಎಲ್ಲರಿಗೂ ಮರಣದಂಡನೆ ಆಗಬೇಕು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನ್ ಆಗ್ರಹಿಸಿದ್ದಾರೆ. ಪ್ರಕರಣದ ಆರೋಪಿಗಳ ಬಂಧನಕ್ಕೆ ಎನ್ಐಎ ಸಂಸ್ಥೆ ಬಹಳಷ್ಟು ಶ್ರಮಪಟ್ಟಿದೆ. ಮುಸ್ತಫಾ ಪೈಚಾರು ಬಂಧನದ ಬೆನ್ನಲ್ಲೇ ಆತನ ಹಿಂದಿರುವ ಎಲ್ಲರ ಬಂಧನವಾಗಲಿದೆ ಎಂಬ ನಂಬಿಕೆ ಇದೆ. ಮತ್ತೆಂದೂ ಇಂತಹ ಪ್ರಕರಣ ನಡೆಯಬಾರದು. ಆ ರೀತಿಯ ಶಿಕ್ಷೆ ದೊರಕಬೇಕು. ಇಂತಹ ಪ್ರಕರಣ …
Read More »ಮಂಗಳೂರು ಕಾಲೇಜಿನ ಟಾಯ್ಲೆಟ್ನಲ್ಲಿ ಚಿತ್ರೀಕರಣ ಪ್ರಕರಣ: 6 ನಿಮಿಷದ ವಿಡಿಯೋ ಸೆರೆ
ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ಈ ಪ್ರಕರಣದ ಆರೋಪಿ ಅಪ್ರಾಪ್ತ ವಯಸ್ಕನಾಗಿರುವುದರಿಂದ ಪೊಲೀಸರಿಗೆ ತನಿಖೆ ನಡೆಸುವುದು ಸವಾಲಾಗಿದೆ. ನಗರದ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗಕ್ಕೆ ಚಿಕಿತ್ಸೆಗೆಂದು 17 ವರ್ಷದ ಬಾಲಕ ಬರುತ್ತಿದ್ದ. ಈ ಹಿಂದೆ ಎರಡು ಬಾರಿ ತಾಯಿ ಜತೆ ಬಂದಿದ್ದ ಈತ, ಮಂಗಳವಾರ ತಾಯಿಗೆ ಅಸೌಖ್ಯವಿದ್ದ ಕಾರಣ ತಾನೊಬ್ಬನೇ ಬಂದಿದ್ದ. ಮೆಡಿಕಲ್ ಕಾಲೇಜಿನಲ್ಲಿ 30 ರೂ. ಫೀಸ್ ಕಟ್ಟಿ ಅಪಾಯಿಂಟ್ಮೆಂಟ್ ಪಡೆದಿದ್ದು, ಬಳಿಕ ಟಾಯ್ಲೆಟ್ಗೆ ಹೋಗಿ ಮೊಬೈಲ್ ಇಟ್ಟು ವಿಡಿಯೋ ಆನ್ …
Read More »ಕಾಪು: ಬಾಲಕಿ ಮೃತ್ಯು!
ಕಾಪು: 11 ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ. ಸಂದೇಶ್ ಅವರ 11 ವರ್ಷದ ಪುತ್ರಿ ಧನ್ವಿ ಎಂಬುವವಳು ಮೃತಪಟ್ಟಿದ್ದಾರೆ. ಧನ್ವಿ 4ನೇ ತರಗತಿ ಮುಗಿಸಿ ಪ್ರಸ್ತುತ ಶಾಲೆಗೆ ರಜೆಯಾಗಿರುವುದರಿಂದ ಮನೆಯಲ್ಲಿಯೇ ಇದ್ದಳು. ಮೇ.8ರಂದು ಧನ್ವಿಯು ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿಕೊಂಡಿದ್ದು, ಮೇ. 9ರಂದು ಬೆಳಿಗಿನ ಜಾವ 3:00 ಗಂಟೆಯ ಸುಮಾರಿಗೆ ಧನ್ವಿಯು ನಿದ್ರೆಯಿಂದ ಎದ್ದು ವಾಂತಿ ಮಾಡಲು ಆರಂಭಿಸಿದ್ದಾಳೆ. ಬಳಿಕ ಧನ್ವಿ ಗೆ ನೀರನ್ನು ಕೊಟ್ಟು ಮಲಗಿಸಿದ್ದರೂ ಕೂಡಾ ಆಕೆ ಗಂಟೆಗೊಮ್ಮೆ ಎದ್ದು ವಾಂತಿ ಮಾಡುತ್ತಿದ್ದಳು. …
Read More »