ತಾಜಾ ಸುದ್ದಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. …

Read More »

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡೋ ಕಾಲನಿಯ ತ್ರೇಸಿಯಮ್ಮ (57) ಎಂಬವರ ಮೊಬೈಲ್‌ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ಕರೆ ಮಾಡಿದಾತ ತಾನು ಕೆನರಾ ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ತ್ರೇಸಿಯಮ್ಮ ಅವರ ಬಳಿ ಖಾತೆ ನಂಬರ್, ಕಸ್ಟಮ‌ರ್ ಐಡಿ, ಆಧಾರ್ ನಂಬರ್, ಡೇಟ್ ಆಫ್ ಬರ್ತ್ ಇತ್ಯಾದಿ ವಿವರಗಳನ್ನು ಕೇಳಿದ್ದಾನೆ. ಆ ವ್ಯಕ್ತಿಯ ಮಾತನ್ನು ನಂಬಿದ ಅವರು ಆತ ಕೇಳಿದ ಎಲ್ಲಾ ವಿವರಗಳನ್ನು ನೀಡಿದ್ದಾರೆ. ನಂತರ …

Read More »

ಉಡುಪಿ: ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್‌ ಮೊಕದ್ದಮೆ – ಡಿಸಿ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧ ಪಟ್ಟ ಅಭಿಯಂತರರ ವಿರುದ್ಧವೂ ಕ್ರಿಮಿನಲ್‌ ಕೇಸ್‌ಗಳನ್ನು ಹಾಕುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಉಡುಪಿ ಹೊರವಲಯದ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಜಿಲ್ಲಾ ಪೊಲೀಸ್‌ …

Read More »

ಬೆಳ್ತಂಗಡಿ: ಸವಣಾಲು ದೇವಸ್ಥಾನದ ಅರ್ಚಕ ವಿಜಯ್ ಭಟ್ ಆತ್ಮಹತ್ಯೆ

ಬೆಳ್ತಂಗಡಿ: ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29) ಎಂಬವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಾಗಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಅವರಿಗೆ ಮೂರು ತಿಂಗಳ ಮಗು ಕೂಡ ಇದೆ. ಅವರು ವಾಸವಿದ್ದ ಕೊಠಡಿ ಯಲ್ಲಿ ಒಬ್ಬರೇ ಇದ್ದು, ದೇವಸ್ಥಾನಕ್ಕೆ ಎಂದಿನಂತೆ ಭಕ್ತರು ಪೂಜೆಗಾಗಿ ಬಂದಾಗ ಅರ್ಚಕರು ಬಂದಿರಲಿಲ್ಲ. ಕ್ಷೇತ್ರಕ್ಕೆ ಬಂದ ಭಕ್ತರು ಅರ್ಚಕರನ್ನು ಕರೆಯಲು ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ …

Read More »

ಸುಡು ಬಿಸಿಲು|ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ- ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕಾಸರಗೋಡು ಚೆರ್ಕಳದ ನೆಲ್ಲಿಕಟ್ಟೆ ನಿವಾಸಿ ಎಂದು …

Read More »

ಮಂಗಳೂರು ಏರ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ-ಉಗ್ರರ ಹೆಸರಲ್ಲಿ ಇಮೇಲ್ ರವಾನೆ ; ಭದ್ರತೆ ಹೆಚ್ಚಳ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ …

Read More »

ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತರು ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಮಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ …

Read More »

ಮಂಗಳೂರು : ವಳಚ್ಚಿಲ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ

ಮಂಗಳೂರು: ಕಾಲೇಜಿನಲ್ಲಿ ನಡೆಯುತ್ತಿದ್ದ ಫೆಸ್ಟ್‌ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ ವಳಚ್ಚಿಲ್‌ನಲ್ಲಿರುವ ಕಾಲೇಜಿನಲ್ಲಿ ಈ ಹೊಡೆದಾಟ ನಡೆದಿದೆ. ಕಾಲೇಜಿನಲ್ಲಿ ಫೆಸ್ಟ್‌ ನಡೆಯುತ್ತಿದ್ದ ವೇಳೆ ಸಣ್ಣ ಕಾರಣವೊಂದಕ್ಕೆ ಜ್ಯೂನಿಯರ್ಸ್ ಹಾಗೂ ಸೀನಿಯರ್ಸ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದು ಬಳಿಕ ಹೊಡೆದಾಟಕ್ಕೆ ತಿರುಗಿದ್ದು, ವಿದ್ಯಾರ್ಥಿಗಳು ಕೈ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಎಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದು, ಹೊಡೆದಾಟದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಗಳ ಹೊಡೆದಾಟದ ಸಮಯದಲ್ಲಿ ಯುವಕನೊಬ್ಬ ಇನ್ನೊಂದು ವಿದ್ಯಾರ್ಥಿ ಮೇಲೆ ಬೈಕ್ ಹತ್ತಿಸುವ …

Read More »

ಬ್ರಹ್ಮಾವರ: ನಾಟಿವೈದ್ಯ ಹಂದಾಡಿ ಗೋವಿಂದ ಪೂಜಾರಿ ನಿಧನ

ಬ್ರಹ್ಮಾವರ:ಹಿರಿಯ ನಾಟಿವೈದ್ಯ, ಕೃಷಿಕ ಹಂದಾಡಿ ಗೋವಿಂದ ಪೂಜಾರಿ (82) ಅಸೌಖ್ಯದಿಂದ ಮೇ 3ರಂದು ಹಂದಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿಿ, ಪುತ್ರ, ಇಬ್ಬರು ಪುತ್ರಿಿಯರನ್ನು ಅಗಲಿದ್ದಾಾರೆ. ಹಿರಿಯ ಕೃಷಿಕರಾದ ಗೋವಿಂದ ಪೂಜಾರಿಯವರು ಸ್ತ್ರೀ ಸಂಬಂಧಿತ ಅನಾರೋಗ್ಯ ಸಮಸ್ಯೆೆಗಳಿಗೆ ಔಷಧಿ ಕೊಡುತ್ತಿಿದ್ದರು. ಜಾನುವಾರುಗಳ ಕಾಲುಬಾಯಿ, ಕೆಚ್ಚಲುಬಾವಿನಂತಹ ಕಾಯಿಲೆಗಳು ಮತ್ತು ಗರ್ಭಧಾರಣೆ ಇತ್ಯಾಾದಿಗಳಿಗೆ ಸಂಬಂಧಿಸಿ ನಾಟಿ ಔಷಧಿ ಕೊಡುತ್ತಿಿದ್ದರು. ವಿವಿಧ ಕೃಷಿ ಪ್ರಯೋಗಗಳನ್ನು ನಡೆಸಿ ಇತರ ಕೃಷಿಕರಿಗೆ ಮಾರ್ಗದರ್ಶಿಯಾಗಿದ್ದರು. ಪಂಚಾಯಿತಿದಾರರಾಗಿಯೂ ಕಾರ್ಯನಿರ್ವಹಿಸಿದ್ದರು.

Read More »

ಮಣಿಪಾಲ: ಬ್ಯಾಂಕಿನವರ ಹೆಸರಿನಲ್ಲಿ ಯುವತಿ ಕರೆ | ಕ್ರೆಡಿಟ್ ಕಾರ್ಡ್‌ನಿಂದ ಸಾವಿರಾರು ರೂ. ವಂಚನೆ

ಮಣಿಪಾಲ: ಬ್ಯಾಂಕಿನವರ ಹೆಸರಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್‌ನಿಂದ ಸಾವಿರಾರು ರೂ. ಹಣ ಜಮೆ ಮಾಡುವ ಮೂಲಕ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಶಶಿಧರ(46) ಎಂಬವರಿಗೆ ಮೇ 1ರಂದು ಬ್ಯಾಂಕಿನವರು ಎಂದು ಹೇಳಿ ಅಪರಿಚಿತ ಯುವತಿ ಕರೆ ಮಾಡಿದ್ದು, ನಿಮ್ಮ ಕ್ರೆಡಿಟ್ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಮೋಸದಿಂದ ಕ್ರೆಡಿಟ್ ಕಾರ್ಡ್ ನಂಬರ್‌ ಹಾಗೂ ಸಿವಿವಿ ನಂಬ‌ರ್ ಪಡೆದುಕೊಂಡಿದ್ದಳು. ಬಳಿಕ ಓಟಿಪಿಯನ್ನು ಪಡೆದುಕೊಂಡು ಕ್ರೆಡಿಟ್ ಕಾರ್ಡ್‌ನಿಂದ 74,216ರೂ. ಹಣವನ್ನು ಜಮೆ ಮಾಡಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.

Read More »

You cannot copy content of this page.