ತಾಜಾ ಸುದ್ದಿ

ಉಡುಪಿ: ಮಟ್ಕಾ ಜುಗಾರಿ – ಮೂರು ಪ್ರತ್ಯೇಕ ಪ್ರಕರಣ- ಮೂವರ ಬಂಧನ

ಉಡುಪಿ: ನಗರದ ವಿವಿಧ ಕಡೆಗಳಲ್ಲಿ ಮಟ್ಕಾ ಜುಗಾರಿಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಬಾಗಿಲಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ ವೀರೇಶ್‌(34)ನನ್ನು ವಶಕ್ಕೆ ಪಡೆದು 1540 ರೂ., ಕಡಿಯಾಳಿ ಸಾರ್ವಜನಿಕ ಸ್ಥಳದಲ್ಲಿ ದಿವಾಕರ್‌(41)ನನ್ನು ವಶಕ್ಕೆ ಪಡೆದು 665 ರೂ., ಪುತ್ತೂರು ಗ್ರಾಮದಲ್ಲಿ ರಮೇಶ್‌ (52)ನನ್ನು ವಶಕ್ಕೆ ಪಡೆದು 770 ರೂ. ಸ್ವಾಧೀನಪಡಿಸಿಕೊಳ್ಳಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Read More »

ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಹರೇಕಳ- ಪಾವೂರು ಕಡವಿನ ಬಳಿ ನಡೆದಿರುವುದಾಗಿ ವರದಿಯಾಗಿದೆ‌‌. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಧ್ಯಾಹ್ನದ ಬಳಿಕ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ‌. ಶುಕ್ರವಾರ ಸಂಜೆ ಈಕೆ ರಿಕ್ಷಾವೊಂದರಲ್ಲಿ ಅಡ್ಯಾರ್-ಹರೇಕಳ ಸೇತುವೆ ದಾಟಿ ಹರೇಕಳ-ಪಾವೂರು ಕಡವಿನ ಬಳಿ ಜಂಕ್ಷನ್‌ನಲ್ಲಿ ಇಳಿದಿದ್ದರು ಎನ್ನಲಾಗಿದೆ. ನಂತರ‌ …

Read More »

ಮಲ್ಪೆ: ಆಟೋರಿಕ್ಷಾ ಚಾಲಕ ನಾಪತ್ತೆ..!

ಮಲ್ಪೆ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು. ಕಾಣೆಯಾದ ವ್ಯಕ್ತಿಯ ಎತ್ತರ 5.5 ಅಡಿ ಎತ್ತರ, ಗೋದಿ …

Read More »

ಬಂಟ್ವಾಳ : ಚುನಾವಣಾ ಕರ್ತವ್ಯದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ನಾಪತ್ತೆ – ಪತ್ನಿಯಿಂದ ದೂರು ದಾಖಲು

ಬಂಟ್ವಾಳ : ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿಯೊಬ್ಬರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಮಾಡಿ ಗ್ರಾಮ ಕೊಲ್ಪೆದಬೈಲು ನಿವಾಸಿ, ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ(52) ನಾಪತ್ತೆಯಾದವರು. ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದರು‌. ಮಾ.27 ರಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದರು‌‌. ಆದರೆ, ಕರ್ತವ್ಯಕ್ಕೂ ಹಾಜರಾಗದೆ ಮನೆಗೂ ಮರಳದೆ ನಾಪತ್ತೆಯಾಗಿದ್ದಾರೆ.‌ ಫೋನ್ ಸ್ವಿಚ್‌ ಆಫ್ ಆಗಿದೆ ಎಂದು ಅವರ ಪತ್ನಿ ಪುಂಜಾಲಕಟ್ಟೆ …

Read More »

ಕಡಬ: ಮಲಗಿದ್ದಲೇ ವ್ಯಕ್ತಿ ಸಾವು

ಕಡಬ: ಮನೆಯಲ್ಲಿ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ರೆಜಿ ವರ್ಗೀಸ್(39) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ಮಂಗಳೂರು: ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ…

ಮಂಗಳೂರು: ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವಿವಾಹಿತರಾಗಿರೋ 42 ವರ್ಷ ಪ್ರಾಯದ ಬ್ರಿಜೇಶ್ ಚೌಟ ನಾಮಪತ್ರದ ಅಫಿದವಿತ್ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ. ಎಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾಂಕೇತಿಕ ನಾಮಪತ್ರದಲ್ಲಿ ಆಸ್ತಿ ವಿವರ ಘೋಷಿಸಿರುವ ಚೌಟ ಅವರು, ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಆಗಿದ್ದು ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ. ಇದೆ. ಚೌಟಾಗೆ …

Read More »

ಮಂಗಳೂರು: ದ್ವಿಚಕ್ರ ವಾಹನ ಕಳ್ಳನೋರ್ವನ ಬಂಧನ…!!

ಮಂಗಳೂರು: ನಗರದ ಬಜಪೆ ಸಮೀಪ ದ್ವಿಚಕ್ರ ವಾಹನ ಕಳ್ಳನೋರ್ವನನ್ನು ಬಜಪೆ ಠಾಣೆಯ ಎಎಸ್‌ಐ ರಾಮ ಪೂಜಾರಿ ಮತ್ತು ಸಿಬಂದಿ ಸ್ವಾಮಿಲಪದವು ಎನ್ನುವಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ ‌ ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕುಂದಾಪುರ ಸಾಸ್ತಾನದ ಗೋಳಿಬೆಟ್ಟುಮನೆಯ ಪ್ರಹ್ಲಾದ್‌ (30) ಎಂದು ತಿಳಿಯಲಾಗಿದೆ ‌ ಮುಂಜಾನೆ ವಾಹನ ತಪಾಸಣೆ ಮಾಡುತ್ತಿರುವಾಗ ಸ್ಕೂಟರ್‌ ಅನ್ನು ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸದೆ ಇದ್ದು, ಆಗ ಆತನನ್ನು ಹಿಡಿದು ವಿಚಾರಿಸಿದಾಗ ಸ್ಕೂಟರ್‌ ಅನ್ನು ಬಂಟ್ವಾಳದ ಮೆಲ್ಕಾರ್‌ ಎಂಬಲ್ಲಿಂದ ಕಳವು ಮಾಡಿದಾಗಿ ತಿಳಿಸಿದ್ದ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ ಹಿಂದೆ …

Read More »

ಲೋಕಸಭೆಗೆ ದ.ಕ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ರವರ ಆಸ್ತಿ ವಿವರ ಇಲ್ಲಿದೆ ನೋಡಿ..!

ಮಂಗಳೂರು : ಬ್ರಿಜೇಶ್‌ ಚೌಟ ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ.ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ. ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ. ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್​ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ …

Read More »

ಮಂಗಳೂರು: ಅಕ್ರಮ ಕಸಾಯಿಖಾನೆಗೆ ದಾಳಿ – 180 ಕೆ.ಜಿ. ದನದ ಮಾಂಸ ಸಹಿತ ಮೂವರ ಬಂಧನ

ಮಂಗಳೂರು: ನಗರದ ಹೊರ ವಲಯದ ವಳಚ್ಚಿಲ್ ಖಾದರ್ ಮಹಮ್ಮದ್ ಗೌಸ್ ಎಂಬಾತನ ಮನೆಯ ಶೆಡ್‌ನಲ್ಲಿ ಗುರುವಾರ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವುದನ್ನು ಗ್ರಾಮಾಂತರ ಪೊಲೀಸರು ಪತ್ತೆ ಮಾಡಿ, 180 ಕೆ.ಜಿ. ದನದ ಮಾಂಸ ಸಹಿತ ಮೂವರನ್ನು ಬಂಧಿಸಿದ್ದಾರೆ. ವಳಚ್ಚಿಲ್ ಖಾದರ್ ಮಹಮ್ಮದ್ ಯಾನೆ ಮೋನು (52), ಮಾರಿಪಳ್ಳ ಮಸೀದಿ ಬಳಿಯ ಇಸ್ಮಾಯಿಲ್ (27), ಅಡ್ಯಾರ್ ಪದವು ಮಸೀದಿ ಬಳಿಯ ಮೊಹಮ್ಮದ್ ಶವೀರ್ (18) ಬಂಧಿತರು.ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಆದೇಶದಂತೆ ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಶಿವಕುಮಾರ್, ಪಿಎಸ್‌ಐ ಅರುಣ್ ಕುಮಾರ್, …

Read More »

ಸುರತ್ಕಲ್: ಎನ್‌ಐಟಿಕೆ ನೀರು ಪೋಲು ಮಾಡಿ ಹೋಳಿ ಆಚರಣೆ – ವ್ಯಾಪಕ ಆಕ್ರೋಶ

ಸುರತ್ಕಲ್: ಎನ್‌ಐಟಿಕೆಯಲ್ಲಿ ಬಣ್ಣದ ಹಬ್ಬ ಹೋಳಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಗಿದೆ. ಹೋಳಿ ಹಬ್ಬ ಆಚರಣೆಗೆ ಯಾವುದೇ ಅಪಸ್ವರ ಇಲ್ಲ. ಆದರೆ ದುಡ್ಡುಕೊಟ್ಟು ಹೊರಗಡೆಯಿಂದ ನೀರು ಖರೀದಿಸಿ ನೀರನ್ನು ಪೋಲು ಮಾಡಿ ಹೋಳಿ ಅಚರಿಸಿರುವ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಎನ್‌ಐಟಿಕೆ ಕೇಂದ್ರ ಸರಕಾರದ ಅಧೀನದಲ್ಲಿರುವ ರಾಷ್ಟ್ರದ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜುಗಳಲ್ಲೊಂದು. ಎನ್‌ಐಟಿಕೆ ನಡೆಯುತ್ತಿರುವುದು ಸರಕಾರದ ದುಡ್ಡಿನಿಂದ. ಇಂತಹ ಒಂದು ಪ್ರತಿಷ್ಠಿತ ಸಂಸ್ಥೆ ನೈಸರ್ಗಿಕ ಸಂಪತ್ತು ನೀರನ್ನು ಹೋಳಿ ಆಚರಣೆಗಾಗಿ ಬಳಸಿ ಪೋಲು ಮಾಡಿರುವುದು ಟೀಕೆಗೆ ಗ್ರಾಸವಾಗಿದೆ. ಒಂದೆಡೆ ನೀರಿಲ್ಲ, ಇನ್ನೊಂದೆಡೆ ದುಡ್ಡು ನೀಡಿ ಹೊರಗಡೆಯಿಂದ …

Read More »

You cannot copy content of this page.