ತಾಜಾ ಸುದ್ದಿ

ಮೈಮೇಲೆ ಬಿದ್ದ ಕೇಬಲ್ ವೈರ್‌- ನರ್ಸ್ ಬಲಿ..!!

 ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ವೊಬ್ಬರನ್ನ ಕೇಬಲ್ ವೈರ್  ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್(36) ಮೃತ ದುರ್ದೈವಿ. ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್‌ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ …

Read More »

ಮಂಗಳೂರು: ಮತದಾನ ಜಾಗೃತಿ ಜಾಥಾ

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಮಂಗಳೂರು ಇದರ ಸಹಯೋಗದಲ್ಲಿ ಕಂದಾವರ ಮತ್ತು ಗುರುಪುರ ಗ್ರಾಮ ಪಂಚಾಯತ್ ಜಂಟಿಯಾಗಿ ದಿನಾಂಕ 22-03-2024ರಂದು ಮತದಾನ ಜಾಗೃತಿ ಜಾಥಾ ಆಯೋಜಿಸಿತು. ಈ ವೇಳೆ ಕಂದಾವರ ಗ್ರಾಮ ಪಂಚಾಯತ್ ನಿಂದ ಕೈಕಂಬ ಜಂಕ್ಷನ್ ವರೆಗೆ ಜಾಥ ನಡೆದಿದ್ದು, ಜಾಥಾದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು, ಸಹಾಯಕ ನಿರ್ದೇಶಕರು (ಗ್ರಾ.ಉ), ಎರಡು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ಚುನಾವಣೆ ವಿಭಾಗದ ತಾಲೂಕು …

Read More »

ಮಂಗಳೂರು : ಹುಡುಗಿ ವಿಚಾರದಲ್ಲಿ ಗಲಾಟೆ : ಹಿಗ್ಗಾ ಮುಗ್ಗಾ ಥಳಿತ- ವಿಡಿಯೋ ವೈರಲ್

ಮಂಗಳೂರು:  ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಹರಿಯುವಂತೆ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಟ್ಟೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ …

Read More »

ಉಡುಪಿ: ಓಂತಿಬೆಟ್ಟು ಸಮೀಪ ಸರಣಿ ಅಪಘಾತ- ಹಲವರಿಗೆ ಗಾಯ

ಉಡುಪಿ: ಹಿರಿಯಡ್ಕ ಸಮೀಪದ ಓಂತಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ನಡೆದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ಹಿರಿಯಡ್ಕದಿಂದ ಆತ್ರಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡಿದಿತ್ತು. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ತನ್ನ ವಾಹನದಲ್ಲಿ ಸಿಲುಕಿಕೊಂಡಿದ್ದ. ಸ್ಥಳೀಯರು ಅತನನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಾತ್ರವಲ್ಲ, ಬಸ್ ಪ್ರಯಾಣಿಕರಿಗೂ …

Read More »

ರೀಲ್ಸ್ ರಾಣಿ ಸೋನು ಶ್ರೀನಿವಾಸ್‌ ಗೌಡ ಅರೆಸ್ಟ್

ಸೋನು ಶ್ರೀನಿವಾಸ್‌ ಗೌಡ ಸೇವಂತಿ ಎನ್ನುವ ಬಡ ಹುಡುಗಿಯನ್ನು ದತ್ತು ತೆಗೆದುಕೊಂಡಿರುವ ವಿಚಾರ ಗೊತ್ತೇ ಇದೆ. ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ವಿಚಾರವಾಗಿ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಉತ್ತರ ಕರ್ನಾಟಕದ 8 ವರ್ಷದ ಮಗುವನ್ನ ಸೋನು ದತ್ತು ತೆಗೆದುಕೊಂಡಿದ್ದು, ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ಸೋನುಗೌಡ ವಿಡಿಯೊದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರು. ಈಗ ಪೊಲೀಸರು ಸೋನು ಗೌಡ ಅವರನ್ನು ಬಂಧಿಸಿದ್ದಾರೆ. ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Read More »

ಉಡುಪಿ: ಅಪರೂಪದ ನಾಥಪಂತಕ್ಕೆ ಸೇರಿದ ಕಾಲ ಭೈರವ ದೇವಾಲಯದ ಕುರುಹು ಪತ್ತೆ

ಉಡುಪಿ ಜಿಲ್ಲೆಯ ಪರ್ಕಳ ಪೇಟೆಯಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವಾಗ ಕೆರೆಯಲ್ಲಿ ತ್ರಿಶೂಲ ಲಾಂಛನದ ಅಪರೂಪದ ಕಲ್ಲೊಂದು ಪತ್ತೆಯಾಗಿದ್ದು ಇದು ನಾಥಪಂತಕ್ಕೆ ಸೇರಿದ ಕುರುಹು ಆಗಿದ್ದು ಈ ಸ್ಥಳದಲ್ಲಿ ಹಿಂದೆ ಕಾಲ ಭೈರವ ದೇವಾಲಯ ವಿರುವ ಶಂಕೆ ವ್ಯಕ್ತವಾಗಿದೆ. ಯಾವುದೋ ಭೈರವ ದೇವಾಲಯದ ಗರ್ಭಗುಡಿಯ ತೀರ್ಥ ಹೊರಹೋಗುವುದಕ್ಕೆ ಉಪಯೋಗ ಮಾಡುವ ಗೋಮುಖ ಕಲ್ಲು ಕೂಡ ಈ ಕೆರೆಯಲ್ಲಿ ಹೂಳೆತ್ತುವಾಗ ಸಿಕ್ಕಿದ್ದು ಇದಕ್ಕೆ ಮತ್ಷ್ಟು ಪುಷ್ಟಿ ನೀಡಿದೆ. ಪುರಾತತ್ವ ಸಂಶೋಧಕರಾದ ಪ್ರೊ. ಟಿ ಮುರುಗೇಶಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಅವರು ಮಾಹಿತಿ …

Read More »

ಕಾಂಗ್ರೆಸ್ ಸೇರುವುದಿಲ್ಲ ; ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ: ಡಿವಿ ಸದಾನಂದಗೌಡ ಶಪಥ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಎನ್​ಡಿಎಗೆ ಜೆಡಿಎಸ್ …

Read More »

ಕುಂದಾಪುರ: ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಆತ್ಮಹತ್ಯೆ

ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್‌ (52) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್‌ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ …

Read More »

ಉಳ್ಳಾಲ: ಅಕ್ರಮ ಮರಳು ಸಾಗಾಟ -ನಾಲ್ಕು ನಾಡ ದೋಣಿಗಳು ವಶಕ್ಕೆ

ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್‌ ಆಲಿ ಅವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು.ಈ ಮರಳನ್ನು …

Read More »

ವಡಬಾಂಡ ಶ್ರೀ ಬಲರಾಮ ದೇವಸ್ಥಾನ: ರುದ್ರಯಾಗದ ಪೂರ್ಣಾಹುತಿ ಸಂದರ್ಭದಲ್ಲಿ ಮೂಡಿ ಬಂದ ಶಿವಲಿಂಗದ ಆಕೃತಿ

ವಡಬಾಂಡ ಶ್ರೀ ಬಲರಾಮ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಸುಬ್ರಮಣ್ಯ ತಂತ್ರಿಗಳ ನೇತೃತ್ವದಲ್ಲಿ, ಚೆನ್ನಕೇಶವ ಭಟ್ ಪೌರೋಹಿತ್ಯದಲ್ಲಿ ರುದ್ರಯಾಗದ ಪೂರ್ಣಾಹುತಿ ಸಂದರ್ಭದಲ್ಲಿ ಮೂಡಿ ಬಂದ ಶಿವಲಿಂಗದ ಆಕೃತಿ ಭಕ್ತ ಜನರಲ್ಲಿ ಅಚ್ಚರಿ ಉಂಟು ಮಾಡಿದೆ.

Read More »

You cannot copy content of this page.