ತಾಜಾ ಸುದ್ದಿ

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ- ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿಯಿಂದ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Read More »

ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿ- ಮೂರು ವರ್ಷದ ಕಂದಮ್ಮ ಮೃತ್ಯು

ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.ಮುಂಡಾಡಿಯಲ್ಲಿ ಚಂದ್ರಶೇಖ‌ರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ . ಈ ಬಗ್ಗೆ ಬೆಳ್ತಂಗಡಿ …

Read More »

ಉಡುಪಿ: ಲಾಕರ್ ನಲ್ಲಿದ್ದ 3.25 ಲಕ್ಷ ರೂ ಲಪಟಾಯಿಸಿದ ಡೆಲಿವರಿ ಬಾಯ್

ಉಡುಪಿ: ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‌ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More »

ಏ.19ರಿಂದ ಲೋಕಸಭೆ ಚುನಾವಣೆ ಆರಂಭ ; 7 ಹಂತದಲ್ಲಿ ಮತದಾನ, ಜೂ.4ಕ್ಕೆ ಫಲಿತಾಂಶ

ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಅಂದ್ಹಾಗೆ, ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಿದೆ. ಇನ್ನೀದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರದ ನೇತೃತ್ವದ ಪ್ರಸ್ತುತ ಲೋಕಸಭಾ ಅಧಿವೇಶನದ ಅಂತ್ಯವನ್ನು ಸೂಚಿಸುತ್ತದೆ. 17ನೇ ಲೋಕಸಭೆಯ ಅಧಿವೇಶನವು ಜೂನ್ …

Read More »

ಉಡುಪಿ: ಪೆರ್ಡೂರು ಜಾತ್ರೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್19ರವರೆಗೆ ನಡೆಯಲಿದ್ದು, ಮಾರ್ಚ್16ರಂದು ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದಲ್ಲಿ ಮಾರ್ಚ್16ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ನಿಯಮಗಳು 1968ರ ನಿಯಮ 3 ರಡಿ ಪೆರ್ಡೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More »

ದಕ್ಷಿಣ ಕನ್ನಡ: ಉಚಿತ ‘ಮೊಬೈಲ್ ಪೋನ್ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

 ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು …

Read More »

ಮಂಗಳೂರು: ಪ್ರೀತಿಸುವಂತೆ ಪೀಡಿಸಿ ಯುವತಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಕಿರಾತಕ

ಮಂಗಳೂರು: ಪ್ರೀತಿಸುವಂತೆ ಹಿಂದೆ ಬಿದ್ದ ಕಿರಾತಕನೊಬ್ಬ ಯುವತಿಗೆ ಮುಖಮೂತಿ ನೋಡದೆ ಹಲ್ಲೆ ನಡೆಸಿ ಮಾರಣಾಂತಿಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೇರುವಂತೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅತ್ತಾವರ ನಿವಾಸಿ ಸಲ್ಮಾನ್(19) ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದವನು. ಸಲ್ಮಾನ್ ಯುವತಿಗೆ ಕಳೆದೊಂದು ವರ್ಷದಿಂದ ಯುವತಿಗೆ ಕಿರುಕುಳ ನೀಡುತ್ತಿದ್ದ. ಮಾರ್ಚ್ 12ರಂದು ರಾತ್ರಿ ಯುವತಿ ನಮಾಜ್ ಮುಗಿಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ತಡೆದು ನಿಲ್ಲಿಸಿದ ಸಲ್ಮಾನ್ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮೂಗಿಗೆ ಜೋರಾಗಿ ಗುದ್ದಿದ್ದಾನೆ. ಅಲ್ಲದೆ ಬಲವಂತವಾಗಿ ಆಕೆಯನ್ನು ತನ್ನ ಸ್ಕೂಟರ್ ನಲ್ಲಿ ಕುಳಿತುಕೊಳ್ಳಲು …

Read More »

ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ಸಾವು

ಕಾಪು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಪೊಲಿಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಉದ್ಯಾವರ ಪಿತ್ರೋಡಿಯ ರಾಮಾಜು(54) ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಇತರ ಮೀನುಗಾರರೊಂದಿಗೆ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು, ಮೀನಿಗೆ ಹಾಕಿದ ಬಲೆಯನ್ನು ಮೇಲಕ್ಕೆ ಎಳೆಯುತ್ತಿದ್ದ ವೇಳೆ ರಾಮಾಜು ಬಲೆಯೊಂದಿಗೆ ಬೋಟ್‌ನಿಂದ ನೀರಿಗೆ ಬಿದ್ದಿದ್ದಾರೆ. ಇದರಿಂದ ಅಸ್ವಸ್ಥಗೊಂಡ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮೆರಾ, ನಗದು ದರೋಡೆ – ದೂರು

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಪ್ರವೇಶಿಸಿ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸಿಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಆರೋಪಿಯನ್ನು ಪ್ರತೀಕ್ ಕೋಟ್ಯಾನ್ ಎಂದು ಗುರುತಿಸಲಾಗಿದೆ.ಸಂತೆಕಟ್ಟೆಯ ಸುವರ್ಣ ಆಕೇರ್ಡ್‌ನಲ್ಲಿ ಸುದೀಪ್ ಅವರು ತಮ್ಮ ಯೂಟ್ಯೂಬ್‌ ಚಾನಲ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗುರುವಾರ ಸಂಜೆ ಆರೋಪಿ ಪ್ರತೀಕ್ ಕೋಟ್ಯಾನ್ ಕಛೇರಿಗೆ ಸುದೀಪ್ ಅವರು ಸಂತೆಕಟ್ಟೆ ಸುವರ್ಣ ಆಕೇರ್ಡ್ ಸಂಕೀರ್ಣದಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದು, ಗುರುವಾರ ಸಂಜೆ ಆರೋಪಿ ಪ್ರತೀಕ್ ಕೋಟ್ಯಾನ್ ಕಛೇರಿಗೆ ಬಂದು, …

Read More »

ಅಪ್ರಾಪ್ತ ಬಾಲಕನಿಂದ ಬೈಕ್ ಢಿಕ್ಕಿ: ಪಾದಚಾರಿ ವ್ಯಕ್ತಿ ಸಾವು.!

ಕುಂಬಳೆ: ಕುಂಬಳೆ ಪೇಟೆಯಲ್ಲಿ 14 ವಯಸ್ಸಿನ, 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಗುದ್ದಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತರಾಗಿದ್ದಾರೆ. ಮೃತರು ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಎಂದು ತಿಳಿದುಬಂದಿದೆ. ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ಅಬ್ದುಲ್ಲ ಕುಂಞಿ ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಅಬ್ದುಲ್ಲ ಕುಂಞಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದರು. ಮೃತದೇಹವನ್ನು ಕಾಸರಗೋಡು …

Read More »

You cannot copy content of this page.