ತಾಜಾ ಸುದ್ದಿ

ಬಂಟ್ವಾಳ: ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ- ನಾಲ್ವರು ಗಂಭೀರ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಪುತ್ತೂರು ‌ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಎದುರುಗಡೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು  ಇದ್ದು ಘಟನೆಯಲ್ಲಿ ಮೂರು ಮಹಿಳೆಯರು ಸೇರಿ ಆರು ಮಂದಿಗೆ ಗಾಯಗಳಾಗಿದೆ.  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಮಂಗಳೂರು ಖಾಸಗಿ …

Read More »

ಉಡುಪಿ: ಅಯೋಧ್ಯೆ ರಾಮಮಂದಿರ ಸನ್ನಿಧಾನದಲ್ಲಿ ಆರ್‌ ಎಸ್‌ಎಸ್‌ ಕಾರ್ಯಕರ್ತ ಹೃದಯಾಘಾತದಿಂದ ನಿಧನ

ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ (65) ಅವರು ಅಯೋಧ್ಯೆಯಲ್ಲಿ ಬಾಲ ರಾಮನ ದರ್ಶನ ಪಡೆದ ಬಳಿಕ ಇಹಲೋಕ ತ್ಯಜಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸಕ್ತ ಸಕ್ಷಮ ಜಿಲ್ಲಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯೋಧ್ಯೆಯ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಸಂದರ್ಭದಲ್ಲಿ ನಡೆದ ಸ್ಥಳೀಯ ಶ್ರೀ ರಾಮೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಶ್ರೀ ರಾಮ ಜನ್ಮ ಭೂಮಿ ಹೋರಾಟದ ಚಿತ್ರಣವನ್ನು ನೀಡಿದ್ದ …

Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ತಂಡ: ಐವರ ಬಂಧನ

ಬೆಳ್ತಂಗಡಿ: ಶಿವರಾತ್ರಿ ಹೆಸರಿನಲ್ಲಿ ಯುವಕರ ತಂಡವೊಂದು ಸಾರ್ವಜನಿಕ ರಸ್ತೆಯಲ್ಲಿ ಗಾಜು ಪುಡಿ ಮಾಡಿ ಪುಂಡಾಟಿಕೆ ಮೆರೆದಿದ್ದು, ಅದನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಕೈ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಐವರನ್ನು ವೇಣೂರು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಶಿವರಾತ್ರಿ ಹೆಸರಿನಲ್ಲಿ ಯುವಕರ ತಂಡವೊಂದು ಸಾರ್ವಜನಿಕ ರಸ್ತೆಯಲ್ಲಿ ಗಾಜು ಪುಡಿ ಮಾಡಿ ಪುಂಡಾಟಿಕೆ ಮೆರೆದಿದ್ದು, ಅದನ್ನು ತಡೆದ ಪೊಲೀಸರ ಮೇಲೆಯೇ ಕೈ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಐವರನ್ನು ವೇಣೂರು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಥಳೀಯರಾದ ಮಹೇಶ್‌ (28), …

Read More »

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಭೇಟಿ

ಮಂಗಳೂರು : ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಭೇಟಿ‌ ನೀಡಿದ ಸ್ಯಾಂಡಲ್ ವುಡ್ ನಟ ದರ್ಶನ್ ಕೊರಗಜ್ಜ ದೈವದ ದರ್ಶನ ಪಡೆದರು. ಈ ವೇಳೆ ಕುತ್ತಾರು ಕೊರಗಜ್ಜನ ಕ್ಷೇತ್ರದ ವತಿಯಿಂದ ನಟ ದರ್ಶನ್ ಗೆ ಗೌರವ ಸಲ್ಲಿಕೆ ನಡೆಯಿತು. ಬಳಿಕ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ನಾನು ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಈ ಹಿಂದೆ ನಾನು ಮಂಗಳೂರಿಗೆ ಬಹಳ ಸಲ ಬಂದಿದ್ದೆ. ಆದರೆ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಆದ್ದರಿಂದ ಈ ಕ್ಷೇತ್ರವನ್ನೊಮ್ಮೆ ನೋಡಿಕೊಂಡು ಹೋಗೋಣ ಎಂದು ಬಂದಿದ್ದೇನೆ. ಸಂಸದೆ …

Read More »

ಧರ್ಮಸ್ಥಳ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಮನೆಯ ಕೊಟ್ಟಿಗೆಯಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Read More »

ಭಕ್ತರೇ ಗಮನಿಸಿ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಈ ದಿನಗಳಲ್ಲಿ ಆಗೇಲು ಸೇವೆ ಇರುವುದಿಲ್ಲ.

ಬಂಟ್ವಾಳ :ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ತಾಲೂಕು, ದ. ಕ ಇಲ್ಲಿ ಮಾರ್ಚ್ 10ರಂದು ಆದಿತ್ಯವಾರ ಅಮಾವಾಸ್ಯೆ ಇರುವುದರಿಂದ ಶ್ರೀ ಕ್ಷೇತ್ರದಲ್ಲಿ ಆಗೇಲು ಸೇವೆ ಇರುವುದಿಲ್ಲ. ಹಾಗೂ ಮಾರ್ಚ್ 22, 24, 26 2024 ರಂದು ಸಜೀಪ ಮಾಗಣೆ ಪಡ್ಡೆರಮಾಡ ಜಾತ್ರೆಯ ಪ್ರಯುಕ್ತ ಕ್ಷೇತ್ರದಲ್ಲಿ “ಆಗೇಲು ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Read More »

PUC ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು:ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಗಾಗಿ ರಾಜ್ಯ ಸರ್ಕಾರವು ಆದಿಶೋಧನೆಯನ್ನು ಪ್ರಕಟಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹು ದಾಗಿದೆ. ಅದರಂತೆ ಈ ಹುದ್ದೆಗಳಿಗೆ ನಿಗದಿಪಡಿಸಿರುವ ದಿನಾಂಕ ಹಾಗೂ ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀವ ನೀವು ತಿಳಿದುಕೊಳ್ಳಬಹುದು.   ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಯ ಹೆಸರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯಾಗಿದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಶೈಕ್ಷಣಿಕವಿದ್ಯಾರ್ಹತೆ : ಯಾವುದೇ ಮಾನ್ಯತೆ …

Read More »

ಕಾಪು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಕಾಪು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಹೆದ್ದಾರಿಯ ಇನ್ನೊಂದು ಬದಿಯ ರಸ್ತೆಗೆ ಹಾರಿದೆ. ಅಲ್ಲಿಂದ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ. ಈ ಸಂದರ್ಭ ರಸ್ತೆಯಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಸಂಭಾವ್ಯ ಹೆಚ್ಚಿನ ಅನಾಹುತ ತಪ್ಪಿದೆ.

Read More »

ರಾಮಮಂದಿರ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಪತ್ರ..!

ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆಯೊಡ್ಡಲಾಗಿದೆ. ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿದ್ದು, ಆತಂಕ ಸೃಷ್ಟಿಯಾಗಿದೆ. ಮಾ.20,21 ರೊಳಗೆ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂದು ರಾಮಮಂದಿರದಲ್ಲಿ ಬೆದರಿಕೆ ಪತ್ರ ಇಟ್ಟು ಹೋಗಲಾಗಿದೆ. ಈ ಹಿನ್ನೆಲೆ ರಾಮಮಂದಿರದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

Read More »

ಮಂಗಳೂರು: ಮೆಡಿಕಲ್‌ ರೆಪ್‌ ಯುವಕ ಆತ್ಮಹತ್ಯೆ..!

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

You cannot copy content of this page.