ರಾಜಕೀಯ

ಬಿಜೆಪಿ ಮತಪ್ರಚಾರಕ್ಕೆ ಮೇ 7ರಂದು ಅಣ್ಣಾಮಲೈ ಅಳದಂಗಡಿಗೆ

ಅಳದಂಗಡಿ, ಮೇ 5: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮೇ 7ರಂದು ಸಂಜೆ 5 ಗಂಟೆಗೆ ನಡೆಯಲಿರುವ ಪ್ರಚಾರ ಸಭೆಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಕೆ. ಅಣ್ಣಾಮಲೈ ಅವರು ಭಾಗವಹಿಸಲಿದ್ದಾರೆ.

Read More »

ವೇಣೂರು, ಪಡ್ಡಂದಡ್ಕ, ನಾರಾವಿ ಕಾಂಗ್ರೆಸ್ ಪ್ರಚಾರ ಸಭೆ. ಮಂಜುನಾಥನ ಮೇಲೆ ಆಣೆ, ಅಧಿಕಾರಕ್ಕೆ ಬಂದರೆ `ಗ್ಯಾರಂಟಿ’ ಅನುಷ್ಠಾನ: ವಸಂತ ಬಂಗೇರ

ವೇಣೂರು, ಮೇ 3: ಕಾಂಗ್ರೆಸ್ ನೀಡಿರುವ 6 ಗ್ಯಾರಂಟಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಅನುಷ್ಠಾನ ಮಾಡುತ್ತೇವೆ. ಮಂಜುನಾಥನ ಮೇಲೆ, ಏಸು, ಅಲ್ಲಾವುನ ಮೇಲೆ ಆಣೆ ಮಾಡಿ ಹೇಳುತ್ತೇನೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ವಿಧಾನಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ವೇಣೂರು, ಪಡ್ಡಂದಡ್ಕ ಹಾಗೂ ನಾರಾವಿಯಲ್ಲಿ ಜರಗಿದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. 40 ಪರ್ಸೆಂಟ್ ಸರಕಾರದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಆರ್ಥಿಕವಾಗಿ ಎಲ್ಲರನ್ನು ಸದೃಢವನ್ನಾಗಿ ಮಾಡಿತ್ತು. ಆದರೆ ಕಳೆದ ಏಳೆಂಟು …

Read More »

ವೇಣೂರು ಬಾಹುಬಲಿ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶಿವರಾಂ

ವೇಣೂರು, ಮೇ. 2: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಭಗವಾನ್ ಬಾಹುಬಲಿ ಸ್ವಾಮಿ ಸನ್ನಿಧಿಗೆ ಆಗಮಿಸಿ ಬಾಹುಬಲಿ ಮೂರ್ತಿಗೆ ಪ್ರಾರ್ಥನೆ ಸಲ್ಲಿಸಿದರು. ಸ್ಥಳೀಯ ನಾಯಕರು, ಕಾರ್ಯಕರ್ತರು ಜತೆಗಿದ್ದರು.

Read More »

ವೇಣೂರು: ಬಿಜೆಪಿಯಿಂದ ಬಹಿರಂಗ ಚುನಾವಣಾ ಪ್ರಚಾರಸಭೆ ರಾಜ್ಯದ ಮಾದರಿ ಶಾಸಕ ಹರೀಶ್ ಪೂಂಜರನ್ನು ಮತ್ತೊಮ್ಮೆ ಬಹುಮತದಿಂದ ಆರಿಸಿ: ಕೋಟ ಶ್ರೀನಿವಾಸ ಪೂಜಾರಿ

ವೇಣೂರು, ಮೇ 1: ಉತ್ತರ ಕನ್ನಡ, ಉಡುಪಿ, ದ.ಕ. ಜಿಲ್ಲೆಯ 19 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳ್ತಂಗಡಿ ಕ್ಷೇತ್ರದ ಜನತೆ ಮಾತ್ರ ಬದುಕು ಕಟ್ಟಿಕೊಂಡಿರುವುದನ್ನು ನಾನು ಗಮನಿಸಿದ್ದೇನೆ. ಹರೀಶ್ ಪೂಂಜರು ರಾಜ್ಯದ ಮುಖ್ಯಮಂತ್ರಿ, ಸಚಿವರುಗಳನ್ನು ಕಾಡಿ ಬೇಡಿ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಂತರ ಮೊತ್ತದ ಅನುದಾನ ತಂದಿದ್ದಾರೆ. ರಾಜ್ಯದ 224 ಕ್ಷೇತ್ರದಲ್ಲಿ ನಿರ್ಮಾಣ ಆಗದಷ್ಟು ರಸ್ತೆ, ಶಾಲೆ, ಅಂಗನವಾಡಿ, ಆಸ್ಪತ್ರೆಗಳು ಇಲ್ಲಿ ಅಭಿವೃದ್ಧಿಯಾಗಿದ್ದಲ್ಲದೆ ಇಷ್ಟೊಂದು ಮೂಭೂತ ಸೌಲಭ್ಯವನ್ನು ಕಲ್ಪಿಸಿ ಮಾದರಿಯಾಗಿರುವ ಹರೀಶ್ ಪೂಂಜರನ್ನು ಮತ್ತೊಮ್ಮೆ ಬಹುಮತದಿಂದ ಆಯ್ಕೆ ಮಾಡಿ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ …

Read More »

ಇಂದು ಸಂಜೆ ವೇಣೂರಿನಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಭೆಸಿಂಪಲ್‌ಸ್ಟಾರ್ ಕೋಟಿ ಶ್ರೀನಿವಾಸ ಪೂಜಾರಿ ವೇಣೂರಿಗೆ

ವೇಣೂರು, ಮೇ 1: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ 6 ಗಂಟೆಗೆ ವೇಣೂರು ಮುಖ್ಯಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಬಹಿರಂಗ ಪ್ರಚಾರ ಸಭೆ ನಡೆಸಲಿದ್ದು, ಸಿಂಪಲ್‌ಸ್ಟಾರ್ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ.ಇದಕ್ಕೂ ಮೊದಲು ಪಡಂಗಡಿಯಲ್ಲಿ ಬಹಿರಂಗ ಸಭೆ ನಡೆಯಲಿದ್ದು, 7 ಗಂಟೆಗೆ ನಾರಾವಿಯಲ್ಲಿ ಪ್ರಚಾರ ಸಭೆ ಜರಗಲಿದೆ.

Read More »

ಗುಂಡೂರಿಯಲ್ಲೂ ಬಿಜೆಪಿ ಕಾಯಕರ್ತರಿಂದ ಬಿರುಸಿನ ಪ್ರಚಾರ

ಬಿಜೆಪಿ ಪ್ರಣಾಳಿಕೆಯನ್ನು ಜನಮನಕ್ಕೆ ಮುಟ್ಟಿಸುತ್ತಿರುವ ಕಾರ್ಯಕರ್ತರುಆರಂಬೋಡಿ, ಮೇ 1: ಆರಂಬೋಡಿ ಗ್ರಾ.ಪಂ. ವ್ಯಾಪ್ತಿಯ ಗುಂಡೂರಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಯುವಪಡೆ ಭರ್ಜರಿ ಮತಬೇಟೆ ನಡೆಸುತ್ತಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹರೀಶ್ ಪೂಂಜರವರ ಪರ ನಾರಾವಿ ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ನಿತೀಶ್ ಗುಂಡೂರಿ ಹಾಗೂ ಹಾಗೂ ಇಲ್ಲಿನ ಗ್ರಾ.ಪಂ. ಸದಸ್ಯರ ನೇತೃತ್ವದಲ್ಲಿ ಕಾರ್ಯಕರ್ತರು ಮನೆಮನೆ ತೆರಳಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಬಿಜೆಪಿ ಹೊರಡಿಸಿದ ಪ್ರಣಾಳಿಕೆಗಳನ್ನು ಜನಮನಕ್ಕೆ ಮುಟ್ಟಿಸಿದ್ದಲ್ಲದೆ ತಾಲೂಕಿನಲ್ಲಿ ಕಳೆದೈದು ವರ್ಷಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ತಿಳಿಯಪಡಿಸಿದರು.

Read More »

ತಾಲೂಕಿನ 241 ಬೂತ್‌ಗಳಲ್ಲಿ ಬಿಜೆಪಿ ಇಂದು ಮಹಾ ಮತಪ್ರಚಾರ! ವೇಣೂರು ಹೋಬಳಿಯಲ್ಲೂ ಸಾಥ್ ನೀಡಿದ ಕಾರ್ಯಕರ್ತರು

ಬೆಳ್ತಂಗಡಿ, ಎ. 30: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಭಾನುವಾರ ತಾಲೂಕಿನ ಎಲ್ಲಾ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮನೆ ಮನೆ ಪ್ರಚಾರ ಅಭಿಯಾನ ನಡೆಸಿದರು.ರಾಜ್ಯ ಬಿಜೆಪಿ ಸೂಚನೆಯಂತೆ ಭಾನುವಾರ ಎಲ್ಲ ಮುಖಂಡರು ಅವರ ಬೂತ್ ಗಳಲ್ಲೇ ಪ್ರಚಾರ ನಡೆಸಬೇಕು ಎಂಬ ಸೂಚನೆಯಂತೆ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಗರ್ಡಾಡಿ ಗ್ರಾಮದ ಬೂತ್ ಸಂಖ್ಯೆ ೧೨೪ ರಲ್ಲಿ ಪ್ರಚಾರ ಕಾರ್ಯ ಕೈಗೊಂಡರು. ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ …

Read More »

ಕಾರ್ಕಳದಲ್ಲಿ ತ್ರಿಕೋನ ಸ್ಪರ್ಧೆ: ಬಿಜೆಪಿಗೆ ಬಂಡಾಯದ ಬಿಸಿ, ಕಾಂಗ್ರೆಸ್‌ ಗೆಲುವಿನ ಕನಸು ಮತ್ತಷ್ಟು ಹಸಿ

ಉಡುಪಿ, ಏಪ್ರಿಲ್‌ 30: ಬಿಜೆಪಿ ಭದ್ರಕೋಟೆ ಕರಾವಳಿಯಲ್ಲಿ ಈ ಹಿಂದಿನ ಚುನಾವಣೆಗಳಲ್ಲಿ ಹಿಂದುತ್ವವೇ ಬಿಜೆಪಿಗೆ ಶಕ್ತಿಯಾಗಿತ್ತು. ಆದರೆ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಿಂದೂ ಮುಖಂಡರೇ ಬಿಜೆಪಿಗೆ ಬಿಸಿ ತುಪ್ಪವಾಗಿದ್ದಾರೆ. ಕಳೆದ ಬಾರಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ 13 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಟಿಕೆಟ್‌ ಹಂಚಿಕೆಯಲ್ಲಿನ ಅಸಮಧಾನ ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಮುಟ್ಟಿಸಿದೆ. ಈ ಬಾರಿ ಬಿಜೆಪಿ 13 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದೆ. ಜೊತೆಗೆ ಎರಡು …

Read More »

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ; ಹೊಸ ಗ್ಯಾರಂಟಿ ಘೋಷಿಸಿದ ಪ್ರಿಯಾಂಕಾ!

ಬೆಳಗಾವಿ, ಏಪ್ರಿಲ್ 30: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳು, ಅಧಿಕಾರಕ್ಕೇರಲು ಮತ್ತು ಮತಗಳನ್ನು ಸೆಳೆಯಲು ಮತದಾರರಿಗೆ ಇನ್ನಿಲ್ಲದ ಆಶ್ವಾಸನೆಗಳನ್ನು ಘೋಷಿಸುತ್ತಿವೆ. ಇದೇ ವೇಳೆ ರಾಜ್ಯ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ರಾಷ್ಟ್ರೀಯ ನಾಯಕರು ಆಗಮಿಸಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಪ್ರಚಾರದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ …

Read More »

ಮೂಡುಕೋಡಿ: ಪ್ರಚಾರಕಾರ್ಯದಲ್ಲಿ ನಿರತರಾದ ಕಮಲ ಪಡೆ

ವೇಣೂರು, ಎ. 30: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ಮೂಡುಕೋಡಿಯಲ್ಲಿ ಕಮಲ ಪಡೆಯ ಅಬ್ಬರದ ಪ್ರಚಾರಕಾರ್ಯ ಮುಂದುವರಿದಿದೆ. ಇಂದೂ ಕೂಡಾ ಕಾರ್ಯಕರ್ತರು ಜತೆಯಾಗಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದರು. ಸುಂದರ ಹೆಗ್ಡೆ, ಹರೀಶ್ ಪಿ.ಎಸ್. ಹಾಗೂ ಉಮೇಶ್ ನಡ್ತಿಕಲ್ಲು ಅವರ ಸಾರಥ್ಯದಲ್ಲಿ ಮನೆಮನೆಗೆ ಭೇಟಿ ನೀಡಿದ ಕಮಲ ಪಡೆ ಹರೀಶ್ ಪೂಂಜರು ಅನುಷ್ಠಾನಗೊಳಿಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡುತ್ತಿರುವುದು ಕಂಡು ಬಂತು. ಅಲ್ಲದೆ ಹಲವು ಯೋಜನೆಗಳ ಬಗ್ಗೆ ಅನುಷ್ಠಾನಿಸುವ ಭರವಸೆಯನ್ನು ಕಾರ್ಯಕರ್ತರು ಜನರಿಗೆ ತಿಳಿಸುತ್ತಿದ್ದಾರೆ.

Read More »

You cannot copy content of this page.