ರಾಜಕೀಯ

ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ: ರಾಹುಲ್ ಗಾಂಧಿಯಿಂದ ಮಹತ್ವದ ಘೋಷಣೆ

ಜೇವರ್ಗಿ, ಏಪ್ರಿಲ್‌ 28: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ 1 ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದರು. ಮಳೆಯ ನಡುವೆಯೇ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ರಾಹುಲ್‌ ಮಾತನಾಡಿದರು. ಅಲ್ಲಿ ಅವರು 50,000 ಸರ್ಕಾರಿ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿಯೂ ಅವರು ಹೇಳಿದರು. ‘ನಾವು ಈ ಪ್ರದೇಶಕ್ಕೆ 5,000 ಕೋಟಿ ರೂ ನೀಡಲಿದ್ದೇವೆ. …

Read More »

ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್‌ ಹಿರೋ ಶಿವರಾಜ್‌ ಕುಮಾರ್‌ ಎಂಟ್ರಿ: ಮಾಹಿತಿ ಕೊಟ್ಟ ಗೀತಾ ಶಿವರಾಜ್‌ ಕುಮಾರ್‌!

ಬೆಂಗಳೂರು,ಏಪ್ರಿಲ್28:‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನನಗೆ ಸಂತೋಷವನ್ನ ಉಂಟು ಮಾಡಿದೆ. ನಟ ಶಿವರಾಜಕುಮಾರ್ ಅವರು ಕೂಡ ಕಾಂಗ್ರೆಸ್ ಪಕ್ಷದ ಕೆಲವು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅವರು ಚಿತ್ರೀಕರಣದಲ್ಲಿರುವುದರಿಂದ ಸಮಯ ಬಿಡುವು ಮಾಡಿಕೊಂಡು ಪ್ರಚಾರ ಮಾಡುತ್ತಾರೆ ಎಂದು ಗೀತಾ ಶಿವರಾಜ್‌ ಕುಮಾರ್‌ ಮಾಹಿತಿ ನೀಡಿದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಸೇರ್ಪಡೆಯ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಐತಿಹಾಸಿಕ ಪಕ್ಷ. ಈ ಪಕ್ಷಕ್ಕೆ ಸೇರುತ್ತಿರುವುದು ಬಹಳ ಸಂತೋಷವಾಗುತ್ತಿದೆ. ನನ್ನನ್ನು ಪಕ್ಷಕ್ಕೆ …

Read More »

ನಾಳೆ ಕರಾವಳಿಯಲ್ಲಿ ಚುನಾವಣಾ ಚಾಣಕ್ಯ ಅಮಿತ್ ಶಾ ದಂಡಯಾತ್ರೆ: ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ

ಉಡುಪಿ, ಏಪ್ರಿಲ್ 28: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿಗೆ ಆಗಮಿಸಲಿದ್ದಾರೆ. ಜಿಲ್ಲೆಯ ಕಾಪು ಕ್ಷೇತ್ರದ ಕಟಪಾಡಿ ಮತ್ತು ಬೈಂದೂರು ಕ್ಷೇತ್ರದ ಸಿದ್ಧಾಪುರದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಚುನಾವಣೆ ನಿಗದಿಯಾಗಿ ಅಭ್ಯರ್ಥಿ ಪಟ್ಟಿ ಅಂತಿಮವಾದ ಬಳಿಕ ಮೊದಲ ಬಾರಿಗೆ ಶಾ ಉಡುಪಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಅಮಿತ್ ಶಾ ಆಗಮನದ ಮೂಲಕ ಮತ್ತಷ್ಟು ಮೈಲೇಜ್ ಪಡೆಯುವ ಆಲೋಚನೆಯಲ್ಲಿದೆ. ಚುನಾವಣಾ ಘೋಷಣೆಯಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾದ ಬಳಿಕ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ …

Read More »

ಫೀಲ್ಡ್‌ಗಿಳಿದ ಮಹಿಳಾಮಣಿಗಳು!ಮೂಡುಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿಪರ ಅಬ್ಬರದ ಪ್ರಚಾರ!

ವೇಣೂರು, ಎ. 28: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ಮೂಡುಕೋಡಿಯಲ್ಲಿ ಮಹಿಳಾಮಣಿಗಳು ಮಿಂಚಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮೂಡುಕೋಡಿ ಸುಂದರ ಹೆಗ್ಡೆಯವರ ನೇತೃತ್ವದಲ್ಲಿ ಮೂಡುಕೋಡಿ 57ರಲ್ಲಿ ಬಿಜೆಪಿಪರ ಪ್ರಚಾರ ಕಾರ್ಯ ನಡೆಸುತ್ತಿರುವ ಕಾರ್ಯರ್ತರಲ್ಲಿ ಮಹಿಳಾಮಣಿಗಳೂ ಸೇರಿದ್ದು, ಬಿರುಸಿನ ಪ್ರಚಾರಕಾರ್ಯದಲ್ಲಿ ನಿರತರಾಗಿದ್ದಾರೆ.

Read More »

ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ !

ಬೆಂಗಳೂರು, ಎ. 27: ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರಿ, ಪ್ರಸಿದ್ಧ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ (ಎ.28) ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.ಗೀತಾ ಶಿವರಾಜ್‌ಕುಮಾರ್ ಅವರ ಸಹೋದರರಾದ ಕುಮಾರ ಬಂಗಾರಪ್ಪ (ಬಿಜೆಪಿ) ಮತ್ತು ಮಧು ಬಂಗಾರಪ್ಪ (ಕಾಂಗ್ರೆಸ್) ಸೊರಬ ಕ್ಷೇತ್ರದಲ್ಲಿ ಪರಸ್ಪರ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಗೀತಾ ಅವರು ಮಧು ಬಂಗಾರಪ್ಪ ಪರ ಸಕ್ರೀಯವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.೨೦೧೪ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದ ಗೀತಾ ಶಿವರಾಜ್ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ …

Read More »

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇಂದು ಮಂಗಳೂರಿನಲ್ಲಿ ಐದನೇ ಭರವಸೆ ಘೋಷಿಸಿದ ಕಾಂಗ್ರೆಸ್! ಮಂಗಳೂರು, ಏಪ್ರಿಲ್‌ 27: ಮಂಗಳೂರು ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್‌ನ ಐದನೇ ಭರವಸೆಯನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಘೋಷಿಸಿದ್ದು, ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣದ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಲ್ಲಿ ಈ ಯೋಜನೆ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮ ನಾಲ್ಕು ಭರವಸೆಗಳನ್ನು ಸರ್ಕಾರ ಬಂದ ಮೊದಲ ದಿನದಲ್ಲೇ ಅನುಷ್ಠಾನ ಮಾಡುತ್ತೇವೆ. ಪ್ರಧಾನಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ. ಕರ್ನಾಟಕದಲ್ಲಿ ನಾವು ಘೋಷಿಸಿದ …

Read More »

ಹಿಂದುತ್ವದ ಪ್ರಯೋಗ ಶಾಲೆಯಲ್ಲಿ ಹಿಂದೂ ಮುಖಂಡರಿಂದಲೇ ಬಿಜೆಪಿ ಗಢಗಢ…!

ಹಿಂದಿನ ಸರಕಾರ ಅಧಿಕಾರದಲ್ಲಿದ್ದಾಗ ಕರಾವಳಿಯ ಎರಡು ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಹಿಂದುತ್ವದ ಪ್ರಯೋಗ ಶಾಲೆ ಎಂದೂ ಕರೆಯಲು ಆರಂಭವಾಯಿತು. ಕಾರಣ, ಸಾಲುಸಾಲು ಅಹಿತಕರ ಘಟನೆಗಳು, ದ್ವೇಷ ಭಾಷಣ, ಕೋಮು ಸೂಕ್ಷ್ಮ ಘಟನೆಗಳು. ಚುನಾವಣೆಯಲ್ಲಿ ಅವಳಿ ಜಿಲ್ಲೆಗಳ ಹದಿಮೂರು ಕ್ಷೇತ್ರಗಳಲ್ಲಿ ಹನ್ನೆರಡು ಕ್ಷೇತ್ರವನ್ನು ಬಿಜೆಪಿ ಗೆಲ್ಲುವ ಮೂಲಕ, ಕಾಂಗ್ರೆಸ್ಸಿಗೆ ಭರ್ಜರಿ ಠಕ್ಕರ್ ನೀಡಿತ್ತು. ಹಿಂದುತ್ವದ ವಿಚಾರವನ್ನೇ ಮುಂದಿಟ್ಟುಕೊಂಡು ಹೋಗಿದ್ದ ಬಿಜೆಪಿಗೆ ಮತದಾರ ಭರ್ಜರಿಯಾಗಿಯೇ ಆಶೀರ್ವದಿಸಿ ಕಳುಹಿಸಿದ್ದ. ಮುಂಬರುವ ಚುನಾವಣೆಯಲ್ಲೂ ಈ ಎರಡು ಜಿಲ್ಲೆಗಳಲ್ಲಿ ಬಿಜೆಪಿಗೆ ಅದೇ ಅನುಕೂಲಕರ ಪರಿಸ್ಥಿತಿಯಿದೆಯಾ ಎಂದಾಗ ಇಲ್ಲ …

Read More »

ಮಂಗಳೂರಿನಲ್ಲಿ ಇಂದು ಸಂಜೆ ರಾಹುಲ್ ಗಾಂಧಿ ಪ್ರಚಾರದ ಕಳೆ: ರಾಗಾ ರೋಡ್ ಶೋಗೆ ಭರ್ಜರಿ ಸಿದ್ಧತೆ

ರಾಜ್ಯ ಚುನಾವಣಾ ರಣಕಣ ರಂಗೇರುತ್ತಿದ್ದಂತೆ ಕೇಂದ್ರ ನಾಯಕರ ವಾಹನಗಳ ಸದ್ದು ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಬಾರಿ ಗೆಲುವು ಸಾಧಿಸಲು ತೊಡೆತಟ್ಟಿ ನಿಂತಿರುವ ಕಾಂಗ್ರೆಸ್ ಕೇಂದ್ರ ನಾಯಕರನ್ನು ರಾಜ್ಯಕ್ಕೆ ಕರೆಸಿದೆ. ಬುಧವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯದಲ್ಲಿ ಪ್ರಚಾರ ಮಾಡಿದರು. ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ಉಡುಪಿಯ ಕಾಪುವಿನ ಮೀನುಗಾರರೊಂದಿಗೆ ಮಧ್ಯಾಹ್ನ 3.50ಕ್ಕೆ ಸಂವಾದ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಇಂದು ಸಂಜೆ 5.30ಕ್ಕೆ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ನಗರದ ಕಲೆಕ್ಟರ್ಸ್ ಗೇಟ್ ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು …

Read More »

ನಾಳೆ ಅಳದಂಗಡಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರವಾಸ

ಅಳದಂಗಡಿ, ಎ. 26: ಅಳದಂಗಡಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 27ರಂದು ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 7 ಗಂಟೆಗೆ ಕುಕ್ಕೇಡಿಯಿಂದ ಆರಂಭವಾಗಿ ನಿಟ್ಟಡೆ, ಗರ್ಡಾಡಿ, ಪಡಂಗಡಿ, ನಾಲ್ಕೂರು, ಬಳೆಂಜ, ತೆಂಕಕಾರಂದೂರು, ಮುಂಡೂರು, ಬಡಗಕಾರಂದೂರು, ಪಿಲ್ಯ, ಕುದ್ಯಾಡಿ, ನಾವರ, ಸುಲ್ಕೇರಿಮೊಗ್ರು, ಸುಲ್ಕೇರಿ ಭಾಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

Read More »

ಬಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರ ಭರ್ಜರಿ ಮತಭೇಟೆ!

ವೇಣೂರು, ಎ. 25: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಜಿರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಮತಭೇಟೆ ನಡೆಸಿದರು.ಬೆಳಗ್ಗೆಯಿಂದಲೇ ಫೀಲ್ಡ್‌ಗಿಳಿದ ಕಾರ್ಯಕರ್ತರು ಮನೆಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸಿದ್ದಲ್ಲದೆ ಶಾಸಕರ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಕಾರ್ಯಪ್ರವೃತ್ತರಾಗಿದ್ದರು.

Read More »

You cannot copy content of this page.