ವಿಶೇಷ ವರದಿ

32 ಹಲ್ಲುಗಳೊಂದಿಗೆ ಜನಿಸಿದ ಅಪರೂಪದ ಮಗು.!

ಸಾಮಾನ್ಯವಾಗಿ ಜನಿಸಿದ ಮಗುವಿಗೆ 9 ತಿಂಗಳು ಅಥವಾ ಕೆಲವರಿಗೆ ಬೆಳವಣಿಗೆ ಮೇಲೆ 10, 11 ಅಥವಾ ಒಂದು ವರ್ಷಗಳ ಬಳಿಕ ಒಂದರಿಂದ ಮೂರು ಹಲ್ಲುಗಳು ಬರುತ್ತದೆ. ಆದರೆ ವಿಚಿತ್ರ ಎಂಬಂತೆ ಇಲ್ಲೊಬ್ಬ ಮಗು 32 ಹಲ್ಲುಗಳೊಂದಿಗೆ ಹೊಟ್ಟಿದ್ದು, ಈ ಮಗುವಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಮಗು ಹುಟ್ಟಿದ ಹಲವು ವರ್ಷಗಳು ಕಳೆದ ಬಳಿಕ ಆ ಮಗುವಿಗೆ ಸಂಪರ್ಣವಾಗಿ ಹಲ್ಲುಗಳು ಬರುತ್ತವೆ. ಆದರೆ ಇಲ್ಲೊಂದು ಮಗು 32 ಹಲ್ಲುಗಳೊಂದಿಗೆ ಜನಿಸಿದ್ದು, ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಅಮೆರಿಕದ ಮಹಿಳೆಯೊಬ್ಬರು ಈ ಹೆಣ್ಣು …

Read More »

ರುಚಿಕರವಾದ ಮಟನ್​ ಬಿರಿಯಾನಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ ಮೆಣಸು 5, ಈರುಳ್ಳಿ 2, ಖಾರದಪುರಿ 3 ಚಮಚ, ಗರಂ ಮಸಾಲಾ 1 ಚಮಚ, ಮೊಸರು 2 ಚಮಚ, ಎಣ್ಣೆ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಮಾಡುವ ವಿಧಾನ : ಪ್ರೆಶರ್​ ಕುಕ್ಕರ್​ನಲ್ಲಿ ಸ್ವಲ್ಪ ಎಣ್ಣೆಯನ್ನ ಹಾಕಿ. ಎಣ್ಣೆ ಬಿಸಿಯಾದ ಬಳಿಕ ಇದಕ್ಕೆ ಲವಂಗ ಹಾಗೂ ಪಲಾವ್​ ಎಲೆಯನ್ನ ಹಾಕಿ. ಇದಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್​, ಹಸಿ ಮೆಣಸಿನಕಾಯಿ ಹಾಗೂ …

Read More »

ರೇಷನ್‌ ಕಾರ್ಡ್‌ ಕಳೆದು ಹೋದರೆ ಚಿಂತೆ ಮಾಡಬೇಡಿ ಹೀಗೆ ಮಾಡಿ

ರೇಷನ್‌ ಕಾರ್ಡ್‌ ಕಳದುಹೋದರೆ ಚಿಂತಿಸಬೇಡಿ. ಸರ್ಕಾರ ನಿಮಗಾಗಿ ಹೊಸ ವ್ಯವಸ್ಥೆಯನ್ನು ಕಲ್ಪಿಸಿದೆ. NFSA ನ ಅಧಿಕೃತ ವೆಬ್‌ಸೈಟ್‌ https: //www.nfsa.gov.in ಗೆ ಭೇಟಿ ನೀಡಿ ಇ-ಕಾರ್ಡ್‌ ಪಡೆದುಕೊಳ್ಳಬಹುದು. ವೆಬ್‌ಸೈಟ್‌ಗೆ ಭೇಟಿ ನೀಡಿ ರೇಷನ್‌ ಕಾರ್ಡ್‌ ವಿವರ ಕ್ಲಿಕ್‌ ಮಾಡಿ, ಮುಂದಿನ ಪುಟದಲ್ಲಿ ನಿಮ್ಮ ರಾಜ್ಯ ಆಯ್ದುಕೊಳ್ಳಿ. ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮವನ್ನು ಆಯ್ಕೆ ಮಾಡಿ. ನೀವು ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ಸರ್ಚ್‌ ಆಯ್ಕೆಯನ್ನು ಕ್ಲಿಕ್‌ ಮಾಡಿ. ಈಗ ನಿಮ್ಮ ಕುಟುಂಬದ ಪಡಿತರ ಚೀಟಿ ವಿವರಗಳು ನಿಮ್ಮ ಮುಂದೆ ಕಾಣಿಸುತ್ತವೆ. ನಿಮ್ಮ ಪಡಿತರ …

Read More »

ರೈಲಿನಲ್ಲಿ ಯುವಕನನ್ನು ಬಾತ್​ರೂಮ್​ ಒಳಗಡೆ ಎಳೆದೊಯ್ದು ಲಾಕ್​ ಮಾಡಿಕೊಂಡ ಮಂಗಳಮುಖಿ!

ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ರೈಲುಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಆದರೆ, ಇಂತಹ ಘಟನೆ ನಗೆಪಾಟಲಿಗೀಡಾದರೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯೂ ಇದೆ. ವಿಡಿಯೋದಲ್ಲಿ ಏನಿದೆ? ವಿಡಿಯೋದಲ್ಲಿ ರೈಲಿನ ಒಳಗೆ ಕೆಲವು ಯುವಕರು ಬಾತ್​ರೂಮ್​ ಬಾಗಿಲಿನ ಬಳಿ ನಿಂತಿದ್ದಾರೆ. ಅಲ್ಲಿ ಓರ್ವ ಮಂಗಳಮುಖಿ ಕೈ ಚಪ್ಪಾಳೆ ತಟ್ಟುತ್ತಾ ಯುವಕರ ಬಳಿಕ …

Read More »

ಮಂಗಳೂರು: ಮಳೆಯ ಕಣ್ಣಾಮುಚ್ಚಾಲೆ ಆಟ,ದೇವರ ಮೊರೆಹೋದ ಕೈ ನಾಯಕರು 

ಕುದ್ರೋಳಿ ಶ್ರೀಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ ಮಂಗಳೂರು, ಜೂ., 09: ಬಿಸಿಲಿನ ಬೇಗೆಯಿಂದ ಬಳಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕಣ್ಣಮುಚ್ಚಾಲೆ ಆಟ ಕಂಡುಬಂದಿದೆ. ಕರಾವಳಿಗೆ ಇನ್ನೂ ಮುಂಗಾರು ಪ್ರವೇಶ ಆಗಿಲ್ಲ. ಮತ್ತೊಂದೆಡೆ ಸುಡುಬಿಸಿಲಿನ ತಾಪಮಾನದಿಂದ ಇಲ್ಲಿನ ಜನರು ತತ್ತರಿಸಿದ್ದಾರೆ. ನದಿ, ತೊರೆಗಳು ಸಂಪೂರ್ಣ ಬತ್ತಿ ಹೋಗಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದ್ದರಿಂದ ಶೀಘ್ರ ಮಳೆ ಸುರಿಯುವಂತೆ ಹಾಗೂ ಲೋಕಕಲ್ಯಾರ್ಥವಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ ನೆರವೇರಿಸಲಾಗಿದೆ. ‌‌ ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಬಿಪರ್‌ಜಾಯ್ ಚಂಡಮಾರುತ: ಜೂ. 11ರಿಂದ ಮೂರು ದಿನ ದ.ಕ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು, ಜೂ. 8: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಬಿಪರ್‌ಜಾಯ್ ಚಂಡಮಾರುತ ಪ್ರಭಾವವು ಕರಾವಳಿ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದ ಮೇಲೂ ಬೀರಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಹಗುರ ಮಳೆ ಕಂಡು ಬರಲಿದೆ. ಜೂನ್ 11ರಿಂದ ಮೂರು ದಿನ ಮಳೆ ಅಬ್ಬರ ಹೆಚ್ಚಿರಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಘೊಷಿಸಲಾಗಿದೆ. ಜೂನ್ 11ರಿಂದ ಮೂರು ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಭಾರಿ ಮಳೆ …

Read More »

ಮೂರು ದಶಕಗಳ ಬಳಿಕ ಕಟೀಲು ಕ್ಷೇತ್ರದಲ್ಲಿ ಭೀಕರ ಜಲಕ್ಷಾಮ: ಸಂಪೂರ್ಣ ಬತ್ತಿದ ನಂದಿನಿ ನದಿ

ಮಂಗಳೂರು, ಜೂ. 08: ಮುಂಗಾರು ತಡವಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಜನಸಾಮಾನ್ಯರು ಹೊಟೇಲ್, ವಾಣಿಜ್ಯ ಉದ್ಯಮಗಳಿಗೆ ನೀರಿನ ಅಭಾವ ತೊಂದರೆಯನ್ನುಂಟು ಮಾಡಿದ್ದು, ಇದೀಗ ದೇವರಿಗೂ ನೀರಿನ ಅಭಾವದ ಬಿಸಿ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜನರ ಶ್ರದ್ಧಾ ಭಕ್ತಿಯ ಆರಾಧ್ಯ ಕೇಂದ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೀಕರ ಜಲಕ್ಷಾಮ ತಲೆದೂರಿದೆ. ಮೂವತ್ತೊಂದು ವರ್ಷದ ಬಳಿಕ ಕಟೀಲು ಕ್ಷೇತ್ರ ತೀವ್ರದ ಜಲಕ್ಷಾಮ ಕಂಡಿದ್ದು, ಕ್ಷೇತ್ರದ ಪರಮ ಪವಿತ್ರ ನಂದಿನಿ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ನದಿ ಬತ್ತಿ ಇತರ ಜಲಮೂಲಗಳಲ್ಲೂ ನೀರಿನ ಪ್ರಮಾಣ …

Read More »

ಕೊನೆಗೂ ಇಂದು ಕೇರಳ ಪ್ರವೇಶಿಸಿದ ಮಾನ್ಸೂನ್ ಕರಾವಳಿಗೆ ಇನ್ನಾದರೂ ಕೃಪೆ ತೋರುತ್ತಾನ ವರುಣ?

ವೇಣೂರು: ಬೆಂಗಳೂರು ಸೇರಿದಂತೆ ರಾಜ್ಯದ ಅಲ್ಲಲ್ಲಿ ಭಾರೀ ಮಳೆಯಾಗುತ್ತಿರುವ ಹಲವು ದಿನಗಳಿಂದ ಕೇಳುತ್ತಿದ್ದೇವೆ. ಇದೀಗ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಭಾರೀ ಮಳೆಯಾಗಿದೆ. ವಿಪರ್ಯಾಸವೆಂದರೆ ತಾಲೂಕಿನ ಕೆಲವು ಭಾಗದಲ್ಲಿ ಇನ್ನೂ ಹೇಳಿಕೊಳ್ಳುವಂತಹ ಮಳೆ ಸುರಿದೇ ಇಲ್ಲ. ಕುಡಿಯುವ ನೀರಿಗಾಗಿ ಹಾಹಾಕಾರ ಅಷ್ಟಿಷ್ಟಲ್ಲ. ತಾಲೂಕಿನ ಶಿರ್ಲಾಲುವಿನಲ್ಲಿ ನಿನ್ನೆ ಭಾರೀ ಮಳೆ ಸುರಿದು ನದಿಗಳಲ್ಲಿ ಈಗಲೂ ನೀರು ಹರಿಯುತ್ತಿದೆ. ಆದರೆ ವೇಣೂರಿಗೆ ಒಂದೆರಡು ಸಣ್ಣ ಮಳೆ ಬಿಟ್ಟರೆ ಈ ಬಾರಿ ಮಳೆಯೇ ಬಿದ್ದಿಲ್ಲ. ಇಲ್ಲಿಯ ಫಲ್ಗುಣಿ ನದಿಯಲ್ಲಿ ಒಂದು ಹನಿಯೂ ನೀರಿಲ್ಲ. ಬೊಗ್ಗುರಕುಂಡಿ …

Read More »

ಉಡುಗೋರೆ ಹಣದೊಂದಿಗೆ ಹೆಚ್ಚುವರಿ ರೂ. 1 ನೀಡುವುದೇಕೆ ಗೊತ್ತಾ..?!

ವೇಣೂರು, 5: ಯಾವುದೇ ಕಾರ್ಯಕ್ರಮವಿರಲಿ ವಸ್ತು ರೂಪದ, ಕಾಯಕದ ಸಹಕಾರ ಬೇಡುವ ಕಾಲವೊಂದಿತ್ತು. ಆದರೆ ಬರಬರುತ್ತಾ ಮನುಷ್ಯ ಸ್ವಾವಲಂಬಿಯಾಗಿದ್ದಾನೆ. ತಾನೇ ತಯಾರು ಮಾಡಿ ಇನ್ನೊಬ್ಬರ ಸಹಾಯವನ್ನು ಕಡಿಮೆ ಅಪೇಕ್ಷಿಸಿದಂತೆ ವಸ್ತು ಮತ್ತು ಕಾಯಕ ರೂಪದ ಸಹಕಾರಗಳು ವಿರಳವಾದವು. ಆಗ ಪ್ರಾರಂಭವಾದದ್ದೇ ಈ ಕವರ್ ಎನ್ನುವ ಧನರೂಪದ ಉಡುಗೋರೆ! ಕವರಿನ ಒಳಗಡೆ ನೂರು ರೂಪಾಯಿಯಾದರೂ ಸರಿ ಐನೂರು ರೂಪಾಯಿಯಾದರೂ ಸರಿ ಕೊಡುವವನ ಶಕ್ತಿಯನುಸಾರ ಮುಜುಗರವಿಲ್ಲದೆ ಕೊಡಬಹುದು. ಹಾಗೂ ಇನ್ನೊಬ್ಬರಿಗೆ ಅದರೊಳಗಿನ ಮೊತ್ತ ಗೊತ್ತಾಗದ ಕಾರಣ ಉಡುಗೋರೆಯ ಗಾತ್ರದಿಂದ ಪ್ರತಿಷ್ಠೆಯನ್ನು ಅಳೆದು ಉಪಚರಿಸುವ ಸಂಪ್ರದಾಯ ಇತಿಶ್ರೀ ಹೇಳಬಹುದಾದಂತಹ …

Read More »

ಮಹಿಮಾಸಾಗರ್ ಮುನಿಮಹಾರಾಜರ ಮಹಿಮೆಯಿಂದಲೇ ನಾವು ಬದುಕುಳಿದೆವು!

ವೇಣೂರು, ಮೇ 5: ಭಾರತ ದೇಶ ಇದುವರೆಗೆ ನೋಡಿರದಂತಹ ರೈಲು ದುರಂತವೊಂದನ್ನು ಕಂಡಿದೆ. ಒಡಿಶಾ ಬಾಲಾಸೂರ್ ಬಳಿ ತ್ರಿವಳಿ ರೈಲು ದುರಂತ ನಡೆದಿದ್ದು, ದೇಶವೇ ಬೆಚ್ಚಿಬಿದ್ದಿದೆ. ತ್ರಿವಳಿ ರೈಲು ಅಪಘಾತದಲ್ಲಿ ೨೭೫ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಮಿಕ್ಕಿ ಜನ ಗಾಯಗೊಂಡಿದ್ದಾರೆ.ದ.ಕ., ಉಡುಪಿ, ಸಂಸೆ, ಕಳಸ, ಹೊರನಾಡು ಸುತ್ತಮುತ್ತದ ಜೈನಬಂಧುಗಳು ಮಹಿಮಾಸಾಗರ ಮುನಿ ಮಹಾರಾಜರ ಸಂಕಲ್ಪದಂತೆ ೧೦೮ ಜನ ಜಾರ್ಖಂಡ್ ರಾಜ್ಯದಲ್ಲಿರುವ ಶಿಖರ್ಜಿ ಪವಿತ್ರ ಸ್ಥಳಕ್ಕೆ ತೀರ್ಥಯಾತ್ರೆಗೆ ಹೊರಟಿದ್ದರು. ಅದರಲ್ಲಿ ವೇಣೂರಿನ ಆಶಾಲತಾ ಜೈನ್, ಮಮತಾ ಜೈನ್ ಹಾಗೂ ದೀಪಾಶ್ರೀ ಜೈನ್ ಕತ್ತೋಡಿ ಅವರು …

Read More »

You cannot copy content of this page.