ಖ್ಯಾತ ನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು..!

ಕೇರಳ;ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದ್ದು ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ.

ನಿನ್ನೆ ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ ‘ವಿಲಾಯತ್‌ ಬುದ್ಧ’ ಇದರ ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದೆ.

ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯ ಚಿತ್ರೀಕರಣದ ವೇಳೆ ನಟನ ಕಾಲಿಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ‌.

ಶಸ್ತ್ರಕ್ರಿಯೆ ನಂತರ ಅವರಿಗೆ ಎರಡು ಮೂರು ತಿಂಗಳು ವಿಶ್ರಾಂತಿ ಬೇಕಾಗಬಹುದೆಂದು ನಿರೀಕ್ಷಿಸಲಾಗಿದೆ.

ʻವಿಲಾಯತ್‌ ಬುದ್ಧʼ ಚಲನಚಿತ್ರವು ಜಯನ್‌ ನಂಬಿಯಾರ್‌ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Check Also

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು:  ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ …

Leave a Reply

Your email address will not be published. Required fields are marked *

You cannot copy content of this page.