ಹಿಂದೂಗಳನ್ನು ನಾಯಿಗಳಿಗೆ ಹೋಲಿಸಿದ್ದ ಮುಸ್ಲಿಂ ಬೋಧಕ ಅಝಾರಿ ಬಂಧನ

ಮುಂಬೈ : ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಮುಂಬೈನಲ್ಲಿ ಇಸ್ಲಾಮಿಕ್‌ ಬೋಧಕ ಮುಫ್ತಿ ಸಲ್ಮಾನ್‌ ಅಝಾರಿ ಎಂಬುವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂಗಳನ್ನು ನಾಯಿಗೆ ಹೋಲಿಸಿದ ಬಳಿಕ ವಿವಾದ ಉಂಟಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಟಿಎಸ್‌ ಅಧಿಕಾರಿಗಳು ಮುಫ್ತಿ ಸಲ್ಮಾನ್‌ ಅಝಾರಿ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ಭಾನುವಾರ ಗುಜರಾತ್‌ ಎಟಿಎಸ್‌ ಅಧಿಕಾರಿಗಳು ಮುಫ್ತಿ ಸಲ್ಮಾನ್‌ ಅಝಾರಿಯನ್ನು ಬಂಧಿಸಿ, ಘಟ್ಕೋಪರ್‌ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುಜರಾತ್‌ನಲ್ಲಿ ಕೆಲ ದಿನಗಳ ಹಿಂದೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಅಝಾರಿ, ದ್ವೇಷಭಾಷಣ ಮಾಡಿದ್ದರು. “ಈಗ ನಾಯಿಗಳ ಕಾಲ ನಡೆಯುತ್ತಿದೆ. ಮುಂದೆ ನಮಗೂ ಒಂದು ಕಾಲ ಬರುತ್ತದೆ” ಎಂಬುದಾಗಿ ಹೇಳಿದ್ದರು ಎಂದು ತಿಳಿದುಬಂದಿದೆ. ಈ ವಿಡಿಯೊ ವೈರಲ್‌ ಆಗುತ್ತಲೇ ಅವರನ್ನು ಬಂಧಿಸಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.