![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಂಗಳೂರು : ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ.
7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.