ಉತ್ತರಪ್ರದೇಶ; ಗಾಜಿಯಾಬಾದ್ನ ಇಂಜಿನಿಯರಿಂಗ್ ಕಾಲೇಜೊಂದರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಸ್ವಾಗತಿಸಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತುಗೊಳಿಸಲಾಗಿದೆ.
ಅ.20ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯೊಬ್ಬ ವೇದಿಕೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾನೆ. ಅಲ್ಲೇ ಇದ್ದ ಇಬ್ಬರು ಪ್ರಾಧ್ಯಾಪಕಿಯರು ಅದಕ್ಕೆ ತಡೆಯೊಡ್ಡಿದ್ದಾರೆ.
ಮಮತಾ ಗೌತಮ್ ಎಂಬ ಶಿಕ್ಷಕಿ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ. ಜೈ ಶ್ರೀರಾಮ್ ಘೋಷಣೆಗಳು ಏಕೆ? ಇಲ್ಲಿ ಅದಕ್ಕೆ ಅವಕಾಶವಿಲ್ಲ. ನೀವು ಇಲ್ಲಿ ಘೋಷಣೆಗಳನ್ನು ಕೂಗಲು ಬಂದಿಲ್ಲ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ.ವೇದಿಕೆಯಿಂದ ಇಳಿದು ಹೋಗು ಎಂದು ಶಿಕ್ಷಕಿ ಹೇಳಿದ್ದಾರೆ.
ಪ್ರಾಧ್ಯಾಪಕಿಯರ ವಿರುದ್ಧ ಕೆಲವು ಸಂಘಟನೆಗಳು ಕಾಲೇಜಿನ ಬಳಿ ಪ್ರತಿಭಟನೆ ನಡೆಸಿದ್ದವು. ಕಾಲೇಜಿನ ಆಡಳಿತ ಮಂಡಳಿಯು ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ಶಿಫಾರಸಿನಂತೆ ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ.
ವಿಶ್ವವಿದ್ಯಾಲಯದ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಸಂಪೂರ್ಣ ತನಿಖೆಯ ನಂತರ, ಇಬ್ಬರು ಪ್ರಾಧ್ಯಾಪಕರಾದ ಪ್ರೊಫೆಸರ್ ಮಮತಾ ಗೌತಮ್ ಮತ್ತು ಡಾ. ಶ್ವೇತಾ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶ; ಗಾಜಿಯಾಬಾದ್ನ ಇಂಜಿನಿಯರಿಂಗ್ ಕಾಲೇಜೊಂದರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಸ್ವಾಗತಿಸಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತುಗೊಳಿಸಲಾಗಿದೆ.
ಅ.20ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯೊಬ್ಬ ವೇದಿಕೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾನೆ. ಅಲ್ಲೇ ಇದ್ದ ಇಬ್ಬರು ಪ್ರಾಧ್ಯಾಪಕಿಯರು ಅದಕ್ಕೆ ತಡೆಯೊಡ್ಡಿದ್ದಾರೆ.
ಮಮತಾ ಗೌತಮ್ ಎಂಬ ಶಿಕ್ಷಕಿ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ. ಜೈ ಶ್ರೀರಾಮ್ ಘೋಷಣೆಗಳು ಏಕೆ? ಇಲ್ಲಿ ಅದಕ್ಕೆ ಅವಕಾಶವಿಲ್ಲ. ನೀವು ಇಲ್ಲಿ ಘೋಷಣೆಗಳನ್ನು ಕೂಗಲು ಬಂದಿಲ್ಲ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ.ವೇದಿಕೆಯಿಂದ ಇಳಿದು ಹೋಗು ಎಂದು ಶಿಕ್ಷಕಿ ಹೇಳಿದ್ದಾರೆ.
ಪ್ರಾಧ್ಯಾಪಕಿಯರ ವಿರುದ್ಧ ಕೆಲವು ಸಂಘಟನೆಗಳು ಕಾಲೇಜಿನ ಬಳಿ ಪ್ರತಿಭಟನೆ ನಡೆಸಿದ್ದವು. ಕಾಲೇಜಿನ ಆಡಳಿತ ಮಂಡಳಿಯು ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ಶಿಫಾರಸಿನಂತೆ ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ.
ವಿಶ್ವವಿದ್ಯಾಲಯದ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಸಂಪೂರ್ಣ ತನಿಖೆಯ ನಂತರ, ಇಬ್ಬರು ಪ್ರಾಧ್ಯಾಪಕರಾದ ಪ್ರೊಫೆಸರ್ ಮಮತಾ ಗೌತಮ್ ಮತ್ತು ಡಾ. ಶ್ವೇತಾ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.