ಪೆರಿಂಜೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಗೇರುಕಟ್ಟೆಯ ಬಾಲಕ ಮೃತ್ಯು

ವೇಣೂರು, ಮೇ. 2: ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ನಿನ್ನೆ ನಡೆದ ಕಾರು ಮತ್ತು ಆಟೋ ರಿಕ್ಷಾ ಅಪಘಾತದಲ್ಲಿ ತೀವ್ರ ತರಹದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕಳಿಯ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಇಸಾಮ್ (11) ಇಹಲೋಕ ತ್ಯಜಿಸಿದ್ದಾನೆ.


ಆಟೋ ರಿಕ್ಷಾ ಮೂಡಬಿದಿರೆ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ಪೆರಿಂಜೆ ಬಂಡಸಾಲೆ ಬಳಿ ವೇಣೂರು ಕಡೆಯಿಂದ ಬಂದ ಕಾರು ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯೊಡೆದು ಜಖಂಗೊಂಡಿತ್ತು. ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳ ಪೈಕಿ ಮೂಡಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಮ್ಮದ್ ಇಸಾಮ್ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ರಿಕ್ಷಾದಲ್ಲಿದ್ದರು ಅಜ್ಜಿಮನೆಯಿಂದ ಗೇರುಕಟ್ಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Check Also

ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ-ಮುಸ್ಲಿಂ ಯುವಕನ ಬರ್ಬರ ಹತ್ಯೆ

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ …

Leave a Reply

Your email address will not be published. Required fields are marked *

You cannot copy content of this page.