ಹಾಸನ: ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ಬಲಿ…!

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ನವೀನ್ (39) ಸ್ಥಳದಲ್ಲೇ ಮೃತಪಟ್ಟಿದ್ದು, ದಯಾನಂದ್, ಪದ್ಮನಾಭ್ ಎಂಬುವರಿಗೆ ಗಂಭೀರ ಗಾಯಾಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಡುವೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಿನ್ನೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯ ಕೋಮಿನ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹೀಗಾಗಿ ಇಂದು ಸಾಗರ ಪಟ್ಟಣ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

Check Also

ಮುಡಾ ಹಗರಣ FIR ದಾಖಲು: A1 ಆರೋಪಿಯಾಗಿ ಸಿಎಂ ಸಿದ್ಧರಾಮಯ್ಯ, A2 ಪತ್ನಿ ಪಾರ್ವತಿ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ …

Leave a Reply

Your email address will not be published. Required fields are marked *

You cannot copy content of this page.