ಉಡುಪಿ: ನಾಲ್ವರ ಹತ್ಯೆ ಪ್ರಕರಣ – ‘ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ’: ಎಸ್. ಪಿ ಮಾಹಿತಿ

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು.

ಇನ್ನು ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Check Also

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಸಾವು

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಜೈಲು …

Leave a Reply

Your email address will not be published. Required fields are marked *

You cannot copy content of this page.