![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಇಂದಬೆಟ್ಟು: ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ.
ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡವರು.
ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದು, ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆ ಮಾಡಿಕೊಳ್ಳಲು ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.