June 14, 2025
3004VNR1 PACCHU

ವೇಣೂರು, ಎ. 30: ದ್ವಿಚಕ್ರ ವಾಹನದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಕಡಬ ತಾಲೂಕಿನ ಸವಣೂರು ಹಿದ್ಯಾಡಿ ನಿವಾಸಿ ಪ್ರಸಾದ್ ಯಾನೆ ಪಚ್ಚು ಬೆಳ್ತಂಗಡಿ ವೃತ್ತ ನಿರೀಕ್ಷಕರ ಪೊಲೀಸರ ತಂಡದ ಬಲೆಗೆ ಬಿದ್ದಿದ್ದಾನೆ.
ಬಜಿರೆ ಗ್ರಾಮದ ಹಂದೇವು ಮೂರು ಮಾರ್ಗದ ಬಳಿ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ., ಹೆಡ್ ಕಾನ್ಸ್‌ಸ್ಟೇಬಲ್‌ಗಳಾದ ಇಬ್ರಾಹಿಂ, ಅಭಿಜಿತ್ ಕುಮಾರ್, ವಿಜಯ ಕುಮಾರ್, ಕಾನ್ಸ್‌ಸ್ಟೇಬಲ್ ಚೌಡಪ್ಪ ಅವರಿದ್ದ ತಂಡ ವಾಹನ ತಪಾಷಣೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಮಾರಾಟ ಮಾಡುವ ಉದ್ದೇಶದಿಂದ 500 ಗ್ರಾಂ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿ ಪ್ರಸಾದ್ ಯಾನೆ ಪಚ್ಚು ಮತ್ತು ಸ್ವತ್ತನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ. 37 ಸಾವಿರ ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ಧ ಪುತ್ತೂರು, ಕಡಬ, ಉಪ್ಪಿನಂಗಡಿ ಸೇರಿದಂತೆ ವಿವಿಧೆಡೆಗಳಲ್ಲಿ 13 ಕೇಸುಗಳಿದ್ದು, ರೌಡಿಶೀಟರ್ ಆಗಿರುವುದಾಗಿ ವಿಚಾರಣೆ ವೇಳೆ ಬಯಲಿಗೆ ಬಂದಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>