ದಕ್ಷಿಣ ಕನ್ನಡ

ಸುಳ್ಯ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಇನ್ನೂ ಪತ್ತೆಯಾಗದ 7 ಮಂದಿ!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (30) ಕೊಲೆಯಾಗಿ ಇಂದಿಗೆ (ಜು. 26) ಎರಡು ವರ್ಷವಾಯಿತು. ಪ್ರಕರಣದಲ್ಲಿ 26 ಮಂದಿಯ ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದ್ದು, 19 ಮಂದಿಯ ಬಂಧನ ವಾಗಿದೆ. ಉಳಿದ 7 ಮಂದಿ ಆರೋಪಿಗಳಿಗಾಗಿ ಎನ್‌ಐಎ ಹುಡುಕಾಟ ನಡೆಸುತ್ತಲೇ ಇದೆ. ಪ್ರಕರಣ ತಾರ್ಕಿಕ ಅಂತ್ಯ ಇನ್ನೂ ಕಂಡಿಲ್ಲ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಫ್ರೆಶ್‌ ಚಿಕನ್‌ ಫಾರ್ಮ್ ನಡೆಸಿಕೊಂಡು ಬಂದಿದ್ದ ಪ್ರವೀಣ್‌ 2022ರ ಜು. 26ರ ರಾತ್ರಿ ಸುಮಾರು …

Read More »

ದ.ಕ ಜಿಲ್ಲಾದ್ಯಂತ ಇಂದು (ಜುಲೈ 20) ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:ಧಾರಾಕಾರ ಮಳೆ ಹಿನ್ನಲೆ ಇಂದು (ಜುಲೈ 20) ಶನಿವಾರ ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಇದ್ದ ಕಾರಣ ಜಿಲ್ಲೆಯ ಐದುತಾಲೂಕಿನಲ್ಲಿ ಶುಕ್ರವಾರ ರಜೆ ಘೋಷಿಸಲಾಗಿತ್ತು.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಜನರು …

Read More »

ಬೆಳ್ತಂಗಡಿ: ಚಾರ್ಮಾಡಿ ಬಳಿ ಲಾರಿಯಲ್ಲಿ ಭಾರತ್ ಬ್ರಾಂಡ್‌ ಅಕ್ಕಿ ಮಾರಾಟ – ಸ್ಥಳೀಯರಿಂದ ತಡೆ

ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಎಸ್.ಆರ್. ಬಾರ್ ಬಳಿ ಭಾರತ್ ಬ್ರಾಂಡ್‌ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ ಒಂದನ್ನು ಸ್ಥಳೀಯರು ತಡೆ ಹಿಡಿದಿದ್ದಾರೆ. ಪಿ.ಕೆ.ಮಳಗಿ ಆಟ್ರೊ ಟೆಕ್ ಎಂಬ ಬೋರ್ಡ್ ಹೊಂದಿರುವ ಕೆಎ27 ಸಿ6204 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಭಾರತ್ ಅಕ್ಕಿ ಮೂಟೆಗಳಿದ್ದು, ಕೆ.ಜಿ.ಗೆ 29 ರೂ.ನಂತೆ ಮಾರಾಟ ಮಾಡಲಾಗುತ್ತಿದ್ದು, ಇದನ್ನು ನೋಡಿ ಅನುಮಾನಗೊಂಡು ಸ್ಥಳೀಯರು ವಾಹನವನ್ನುತಡೆದಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿಸಾನಿಕಂ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಬೆಳ್ತಂಗಡಿ ಠಾಣೆಗೆ ಕೊಂಡೊಯ್ಯುವಂತೆ ತಹಶೀಲ್ದಾ‌ರ್ ಸೂಚಿಸಿದ್ದಾರೆ. ಈ ವೇಳೆ …

Read More »

ಸುಬ್ರಹ್ಮಣ್ಯ:  ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ:  ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ  ತಡ ರಾತ್ರಿ ಪತ್ತೆಯಾದ ಆನೆಯ ಮೃತದೇಹ ಪತ್ತೆಯಾಗಿದ್ದು,  ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ  ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.

Read More »

ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್.ರಾಹುಲ್ ಭಾಗಿ

ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ಹಾಗೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿ ದೈವದ ಕೃಪೆಗೆ ಪಾತ್ರರಾದರು. ಬಾಲಿವುಡ್ ನಟಿ ಕತ್ರಿನಾ ಕೈಫ್, ಅವರ ಪತಿ ನಟ ವಿಕ್ಕಿ ಕೌಶಲ್, ಕ್ರಿಕೆಟಿಗ ಕೆ.ಎಲ್ .ರಾಹುಲ್, ಅವರ ಪತ್ನಿ ನಟಿ ಆಥಿಯಾ ಶೆಟ್ಟಿ, ನಟ ಅಹನ್ ಶೆಟ್ಟಿ ಸೇರಿದಂತೆ ಮ್ಯಾಟ್ರಿಕ್ಸ್ ಎಂಟರ್​ಟೈನ್​ಮೆಂಟ್​ನ ರೇಷ್ಮಾ ಶೆಟ್ಟಿ ಹಾಗೂ ವಿ.ಎಂ.ಕಾಮತ್ ಸೇರಿದಂತೆ ಒಟ್ಟು 9 ಮಂದಿಯ ಹೆಸರನ್ನು ಎರಡು ತಿಂಗಳ ಹಿಂದೆಯೇ ಕುತ್ತಾರು ಕ್ಷೇತ್ರದ …

Read More »

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ‌ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ‌ …

Read More »

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು..! ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ ನಡೆದಿದೆ. ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಅವರ ಮನೆ ಮಂದಿ ಕೆಲಸಕ್ಕೆ ಹೋಗಿದ್ದರು ಈ ವೇಳೆ ಕಳ್ಳರು ಒಳ ನುಗ್ಗಿ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿದುಬಂದಿದೆ. ಕಳ್ಳರು ಮುಂಬಾಗಿಲ ಬೀಗ ಮುರಿದಿರುವುದನ್ನು ಕಂಡ ವನಿತಾ ಅವರ ಅಕ್ಕ ಸುಜಾತ ಅವರು, ಕರೆ ಮಾಡಿ ಈ …

Read More »

ಮಂಗಳೂರು: ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಉಸ್ತಾದ್‌- ಸಾರ್ವಜನಿಕರಿಂದ ಗೂಸಾ

ಮಂಗಳೂರು :  ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್‌ ಗೆ  ಮಹಿಳೆಯರು ಗೂಸಾ ನೀಡಿ  ತದಕಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಉಸ್ತಾದ್  ಪ್ರಯಾಣ ಮಾಡುತ್ತಿದ್ದ. ಈ ವೇಳೆ  ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ್ದಾನೆ . ಮೈ ಕೈಗೆಲ್ಲ ಕೈ ಹಾಕಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾರಂಭಿದ್ದಾನೆ. ಇದನ್ನು ಪಕ್ದಲ್ಲಿದ್ದ ಸಹ ಪ್ರಯಾಣಿಕರು ಗಮನಿಸಿ ಬಾಲಕಿಯ ತಾಯಿಗೆ ಹೇಳಿದ್ದಾರೆ. ಇದರಿಂದ  ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಉಸ್ತಾದ್‌ …

Read More »

ಸುಳ್ಯ: ಕುಡುಕರನ್ನು ಓಡಿಸಲು‌ ತಾವೇ ಕುಡಿದು ಬಂದ ಹೊಯ್ಸಳ ಪೊಲೀಸರು..! ವಿಡಿಯೋ ವೈರಲ್

ಸುಳ್ಯ: ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೊಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.ಸದ್ಯ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಅಗುತ್ತಿದೆ. ಬುಧವಾರ ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಕುಡಿದು ಮಲಗಿದ್ದವರಿಂದ ತೊಂದರೆ ಆಗುತ್ತಿದೆ ಎಂದು ಮಹಿಳೆಯೊಬ್ಬರು ಪೊಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಗೆ ಕರೆಮಾಡಿ ದೂರು ಹೇಳಿದ್ದರು. ಬಸ್ ನಿಲ್ದಾಣದಲ್ಲಿದ್ದ ಆ ಕುಡುಕರು ಅಲ್ಲಿ ಬಾಟಲಿ ಒಡೆದು ಬಾಟಲಿ ಚೂರುಗಳನ್ನು ಚೆಲ್ಲಿದ್ದರಿಂದ ಸಾರ್ವಜನಿಕರಿಗೆ …

Read More »

ಚಡ್ಡಿಗ್ಯಾಂಗ್ ಅರೆಸ್ಟ್ ಪ್ರಕರಣ: ಉರ್ವಾ ಇನ್ಸ್ ಪೆಕ್ಟರ್ ಭಾರತಿ ಮತ್ತು ತಂಡಕ್ಕೆ 50 ಸಾವಿರ ಬಹುಮಾನ..!

ಮಂಗಳೂರು: ಮಂಗಳೂರಿನಲ್ಲಿ ದರೋಡೆ ನಡೆಸಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದ ಚಡ್ಡಿಗ್ಯಾಂಗ್ ಸದಸ್ಯರು ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಈ ವೇಳೆ ಉರ್ವಾ ಪೊಲೀಸ್ ಇನ್ಸ್ ಪೆಕ್ಟರ್ ಭಾರತಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ದರೋಡೆ ನಡೆಸಿದ್ದ ಚಡ್ಡಿ ಗ್ಯಾಂಗಿನ ಸದಸ್ಯರನ್ನು ಕ್ಷಿಪ್ರವಾಗಿ ಅರೆಸ್ಟ್ ಮಾಡಲಾಗಿದ್ದು, ಅವರು ದರೋಡೆ ಕೃತ್ಯಕ್ಕೆ ಬಳಸಿದ್ದ ರಾಡ್ ಅನ್ನು ವಶಕ್ಕೆ ಪಡೆಯುವ ಸಲುವಾಗಿ ಆರೋಪಿಗಳನ್ನು ಮುಲ್ಕಿ ಬಳಿಯ ಪಡು …

Read More »

You cannot copy content of this page.