ಕರಾವಳಿಯ ಇನ್ನಷ್ಟು ಪ್ರತಿಷ್ಠಿತ ಕಾಲೇಜುಗಳಲ್ಲಿ ಗಾಂಜಾ ಘಾಟು

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿ ಬಯಲಾಗುತ್ತಿದೆ. ಬುಧವಾರ ಬಂಧನವಾದ 10 ಜನರಿಗೆ ಹೆಚ್ಚುವರಿಯಾಗಿ ಇನ್ನೂ ಮೂವರನ್ನು ಬಂಧಿಸಲಾಗಿದೆ.

ಇದೀಗ ಮಂಗಳೂರಿನ ಇತರ ಕಾಲೇಜುಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದು, ಕಾರ್ಯಾಚರಣೆ ನಡೆಸಿ ಕರಾವಳಿ ಕಾಲೇಜಿನ ಇಬ್ಬರನ್ನು ಬಂಧಿಸಿದ್ದಾರೆ.

 

ಮಂಗಳೂರಿನ ಕೆ ಎಂಸಿ ಕಾಲೇಜಿನಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಈ ನಡುವೆ ಡಾ ಹರ್ಷಕುಮಾರ್ ವಿ ಎಸ್ ಎಂಬ ಇನ್ನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ ಕೆಎಂಸಿ ಮೆಡಿಕಲ್ ಕಾಲೇಜಿನಲ್ಲಿ ಪೆಥಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ವ್ಯಾಸಂಗ ಮಾಡುತ್ತಿದ್ದಾನೆ. ಮಂಗಳೂರು ಕರಾವಳಿ ಕಾಲೇಜಿನ ಕೊಚ್ಚಿನ್ ಮೂಲದ ಅಡೋನ್ ದೇವ್ ಎಂಬಾತನನ್ನು ಬಂಧಿಸಲಾಗಿದೆ. ಈತನ ಜೊತೆ ಇನ್ನೊಬ್ಬನನ್ನು ಕೂಡ ಸೆರೆಹಿಡಿಯಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 13 ಕ್ಕೇರಿದೆ ಎನ್ನಲಾಗಿದೆ.
ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್ (24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ (22), ಡಾ.ಹೀರಾ ಬಸಿನ್ (23) ಹಾಗೂ ವೈದ್ಯ ಡಾ.ಸಮೀರ್ (32), ಮಣಿಮಾರನ್ ಮುತ್ತು (28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34) ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23) ಇವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬಂಧಿತರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ವಿದ್ಯಾರ್ಥಿನಿಯರು ಮಾದಕ ನಶೆಯ ಚಟಕ್ಕೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್ ಟುಗೆದರ್ ಸಂಬಂಧವನ್ನು ಹೊಂದಿದ್ದರು ಎಂಬುದು ತಿಳಿದು ಬಂದಿದೆ.

ಇವರಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದು, ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು ಯುವಕ-ಯುವತಿಯರು ಲಿವಿಂಗ್ ಟುಗೆದರ್ ಎಂದು ಒಟ್ಟಿಗೆ ಇರುತ್ತಾರೆ. ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುತ್ತಾರೆ ಎಂಬ ಅಚ್ಚರಿ ಮಾಹಿತಿ ಬಯಲಾಗಿದೆ.
ಮಂಗಳೂರಿನ ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಲಿವಿಂಗ್ ಟುಗೆದರ್ ಎಂಬ ಹೆಸರಿನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ವಾಸ ಮಾಡುತ್ತಿದ್ದು, ಗಾಂಜಾ ನಶೆಯಲ್ಲಿ ತೇಲಾಡಿ..ತಮ್ಮ ಸ್ನೇಹಿತರನ್ನು ಕೂಡ ಇದಕ್ಕೆ ಸೆಳೆಯುತ್ತಿದ್ರು ಎಂಬ ವಿಚಾರ ತನಿಖೆ ವೇಳೆ ಹೊರಬಿದ್ದಿದೆ.

ಇತ್ತೀಚೆಗೆ ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ ಎಂಬಾತನನ್ನುಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈ ಸ್ಪೋಟಕ ಸತ್ಯ ಬಯಲಾಗಿದೆ. ಬಂಧಿತರಿಂದ 2 ಕೆ.ಜಿ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳನ್ನೇ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿಗಳು ಮತ್ತು ವೈದ್ಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದರು.

Check Also

ಬೆಳ್ತಂಗಡಿ: ಅಂಬಡಬೆಟ್ಟು ಸೇತುವೆ ಶಿಥಿಲ – ಘನವಾಹನ ಸಂಚಾರ ನಿಷೇಧ..!

ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮದ ನಿಡಿಗಲ್ ಮೂಲಕ ನಡ ಗ್ರಾಪಂ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಪಂ ವ್ಯಾಪ್ತಿಯ …

Leave a Reply

Your email address will not be published. Required fields are marked *

You cannot copy content of this page.