ಮೂಡುಬಿದಿರೆ : ಕಾಲೇಜು ತರಗತಿಗೆ ಅಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಚುಚ್ಚಿ ಹಲ್ಲೆ – ಆರೋಪಿ ಅರೆಸ್ಟ್

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ ಬಂಧಿತ ಆರೋಪಿ. ಆರೋಪಿ ಮತ್ತು ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿ ಮಂಜುನಾಥ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು. ಅದರಂತೆ ಸೋಮವಾರ ಕಾಲೇಜಿಗೆ ಬಂದಿದ್ದ ಆತ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಆರೋಪಿ ಮಂಜುನಾಥನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇನ್‌ಸ್ಪೆಕ್ಟ‌ರ್ ಸಂದೇಶ್‌ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.