May 23, 2025
WhatsApp Image 2023-08-28 at 10.01.06 AM

ಪುತ್ತೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ 8 ಮಂದಿ ಆರೋಪಿಗಳ ವಿರುದ್ಧ ಗ್ರಾ,ಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸೀರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ವ್ಯಕ್ತಿ. ಆಗಸ್ಟ್ 22 ರಂದು ಈತ ತನ್ನ ಜೀವನ ಅಂತ್ಯಗೊಳಿಸುವುದಾಗಿ ವೀಡಿಯೋ ಮಾಡಿದ್ದಾನೆ. ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 27 ರಂದು ಮೃತಪಟ್ಟಿದ್ದಾರೆ.

ಈ ಹಿಂದೆ ಬೆಳ್ಳಾರೆಯಲ್ಲಿ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಸೀರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು.

ಇದೀಗ ಮೃತ ಅಬ್ದುಲ್ ನಾಸೀರ್ ಅವರ ತಾಯಿ ಪುತ್ತೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿಗಳಾದ ಅದ್ರಾಮ, ಮೊಯ್ದು, ತಾಜು, ಅಬ್ದುಲ್ಲಾ, ಸಮೀರ್, ನೌಫಾಲ್ ಮತ್ತು ಅತಾವುಲ್ಲಾ ಎಂಬುವವರ ವಿರುದ್ಧ ದೂರು ಆಧರಿಸಿ ಅಬ್ದುಲ್ ನಾಸೀರ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

About The Author

Leave a Reply

Your email address will not be published. Required fields are marked *

<p>You cannot copy content of this page.</p>