ಸುಳ್ಯ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು

ಸುಳ್ಯ : ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ. ಮೃತರನ್ನು ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಮೀರ್‌ (27) ಎಂದು ಗುರುತಿಸಲಾಗಿದೆ.

ಸಮೀರ್‌ ಸುಳ್ಯದಲ್ಲಿ ರೂಮ್‌ ಮಾಡಿಕೊಂಡು ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಜೆ ಹಿನ್ನೆಲೆಯಲ್ಲಿ ಮೂವರು ಯುವಕರು ಬೆಳಗ್ಗೆ ಬಟ್ಟೆ ಒಗೆಯಲು ಪಯಸ್ವಿನಿ ನದಿಗೆ ಇಳಿದಿದ್ದರು. ಸಮೀರ್‌ ಬಟ್ಟೆ ತೊಳೆದು ಸ್ನಾನಕ್ಕೆ ಇಳಿದಿದ್ದು, ಉಳಿದ ಇಬ್ಬರು ಬಟ್ಟೆ ಒಗೆಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸಮೀರ್‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ದಳದ ತಂಡ ಕಾರ್ಯಚರಣೆ ನಡೆಸಿ ಮೃತಹೇಹ ಮೇಲಕ್ಕೆತ್ತಿದರು. ಸುಳ್ಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Check Also

ಬಂಟ್ವಾಳ: ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ನಾಪತ್ತೆ! ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ|

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ …

Leave a Reply

Your email address will not be published. Required fields are marked *

You cannot copy content of this page.