October 22, 2024
WhatsApp Image 2024-04-01 at 10.17.29 AM

ಕೋಟ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಾಸ್ತಾನಿರಿಸಿದ ಶಿರಿಯಾರ ಗ್ರಾಮದ ದೇವ ರೈಸ್‌ ಇಂಡಸ್ಟ್ರೀಸ್‌ಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಿಬಂದಿ ಮತ್ತು ತಹಶೀಲ್ದಾರರು ರವಿವಾರ ದಾಳಿ ನಡೆಸಿ 540 ಕೆ.ಜಿ. ಅಕ್ಕಿ ವಶ ಪಡಿಸಿಕೊಂಡಿದ್ದಾರೆ.

ಉಡುಪಿ ಆಹಾರ ಉಪನಿರೀಕ್ಷಕರಾದ ಜಯಮಾಧವ ಹಾಗೂ ಬ್ರಹ್ಮಾವರ ತಹಶೀಲ್ದಾರ್‌ ಶ್ರೀಕಾಂತ್‌ ಹೆಗ್ಡೆ, ಕೋಟ ಠಾಣೆ ಉಪನಿರೀಕ್ಷಕ ತೇಜಸ್ವಿ ಜತೆಯಾಗಿ ದಾಳಿ ನಡೆಸಿದರು. ದಾಳಿಯ ಸಂದರ್ಭ ಆಹಾರ ನಿರೀಕ್ಷಕರಾದ ಶಿವರಾಜ್‌, ಸುರೇಶ್‌, ಲೀಲಾನಂದ ಹಾಗೂ ಸಿಬಂದಿ ಜತೆಗಿದ್ದರು. ಇಂಡಸ್ಟ್ರೀಸ್‌ ಮಾಲಕ‌ನ ಮೇಲೆ ಪ್ರಕರಣ ದಾಖಲಾಗಿದೆ. ಕೋಟ ಕಂದಾಯ ನಿರೀಕ್ಷಕರಾದ ಮಂಜುನಾಥ ಅವರು ಮೇಲಧಿಕಾರಿಯವರ ಸೂಚನೆಯಂತೆ ರೈಸ್‌ ಇಂಡಸ್ಟ್ರೀಸ್‌ಗೆ ದಾಳಿ ನಡೆಸಿ ಜಿಪಿಎಸ್‌ ಫೊಟೋ ತೆಗೆಯಲು ಮುಂದಾದಾಗ ಸ್ಥಳೀಯರಾದ ಪ್ರಭಾಕರ ಅವರು ಮೊಬೈಲ್‌ ಫೋನನ್ನು ಎಳೆದು ಇಲಾಖಾ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸಿದ್ದಾರೆ ಎಂದು ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.