ಬಜಪೆ: ಫಲ್ಗುಣಿ ನದಿಯಲ್ಲಿ ಇಬ್ಬರು ನೀರುಪಾಲು – ಓರ್ವನ ಮೃತದೇಹ ಪತ್ತೆ

ಬಜಪೆ: ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ಹೋದ ನಾಲ್ವರಲ್ಲಿ ಇಬ್ಬರು ನಾಪತ್ತೆಯಾದ ಘಟನೆ ಭಾನುವಾರದಂದು ಸಂಜೆ ನಡೆದಿದೆ. ಮುಳುಗು ತಜ್ಙರು, ಅಗ್ನಿಶಾಮಕ ದಳ ಹಾಗೂ ಬಜಪೆ ಪೊಲೀಸರಿಂದ ಸತತವಾಗಿ ನಿನ್ನೆಸಂಜೆ ತನಕ ಶೋಧ ಕಾರ್ಯಾಚರಣೆ ಮಾಡಿದ್ದರು. ಆದರೆ ನಾಪತ್ತೆಯಾದ ಇಬ್ಬರೂ ಕೂಡ ಪತ್ತೆಯಾಗಲಿಲ್ಲ, ಇಂದು ಕೂಡ ಬೆಳಿಗ್ಗಿನಿಂದಲೇ ಕಾರ್ಯಾಚರಣೆ ನಡೆದಿದ್ದು, ನಾಪತ್ತೆಯಾದ ಅನೀಶ್(19) ಯುವಕನ ಮೃತದೇಹ ಪತ್ತೆಯಾಗಿದೆ. ಸುಮಿತ್ ಎಂಬ ಯುವಕನ ಪತ್ತೆಗಾಗಿ ಕಾರ್ಯಾಚರಣೆ ಬಿರುಸುಗೊಂಡಿದೆ. ಇಂದು ಸಂಜೆಯ ತನಕವೂ ಕಾರ್ಯಾಚರಣೆ ನಡೆದಿದ್ದು, ಸುಮಿತ್‌ನ ದೇಹ ಮಾತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.