![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬಳಿ ಸಂಭವಿಸಿದೆ.
ಮೃತಪಟ್ಟ ಯುವಕ ಸುರತ್ಕಲ್ ಸಮೀಪದ ಕುಳಾಯಿ ನಿವಾಸಿ ಉಜ್ವಲ್(26) ಎಂದು ತಿಳಿದು ಬಂದಿದೆ
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.