ಉಪ್ಪಿನಂಗಡಿ: ಬೈಕ್, ಕ್ಯಾಂಟರ್ ನಡುವೆ ಡಿಕ್ಕಿ – ಓರ್ವ ಸಾವು

ನೆಲ್ಯಾಡಿ (ಉಪ್ಪಿನಂಗಡಿ): ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ (ನವೆಂಬರ್‌ 1) ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕ ಸುರೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.