ಉಪ್ಪಿನಂಗಡಿ:ನಕಲಿ ಚಿನ್ನಾಭರಣ ಅಡಮಾನವಿರಿಸಿ ಸಾಲ ಪಡೆದು ವಂಚನೆ – ದೂರು

ಉಪ್ಪಿನಂಗಡಿ: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಮಹಿಳಾ ಸಹಕಾರಿ ಸಂಘದಿಂದ ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯಾ ಸಿ.ಎಚ್. ಎಂಬವರು ಈ ಬಗ್ಗೆ ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಎಂಬವರು ಸಂಘಕ್ಕೆ ಬಂದಿದ್ದು, ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.