April 26, 2025
WhatsApp Image 2023-01-05 at 3.29.40 PM

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ.

ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್‌ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ.

ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲಕ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಈತ ಶಿವಮೊಗ್ಗದಲ್ಲಿ ನಡೆದಿದ್ದಂತ ಟ್ರಯಲ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>