March 16, 2026
WhatsApp Image 2024-01-05 at 2.26.32 PM

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.