ಉಳ್ಳಾಲದಲ್ಲಿ ವೀರ ರಾಣಿ ಅಬ್ಬಕ್ಕ ಥೀಮ್ ಪಾರ್ಕ್ ಸ್ಥಾಪನೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮಂಗಳೂರು : ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರರಾಣಿ ಅಬ್ಬಕ್ಕ ಅವರ ಬಗ್ಗೆ ಜಾಗೃತಿ ಮೂಡಿಸಲು ಉಳ್ಳಾಲದಲ್ಲಿ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಳ್ಳಾಲದ ಮಹಾತ್ಮ ಗಾಂಧಿ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ವೀರ ರಾಣಿ ಅಬ್ಬಕ್ಕ ಉತ್ಸವದಲ್ಲಿ ಮಾತನಾಡಿದ ಅವರು, ಅಬ್ಬಕ್ಕ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತ 10 ಎಕರೆ ಜಾಗವನ್ನು ಮೀಸಲಿಟ್ಟಿದೆ. ಅಬ್ಬಕ್ಕ ಭವನವೊಂದೇ ಸಾಕಾಗುವುದಿಲ್ಲ. ಉಳ್ಳಾಲಕ್ಕೆ ಭೇಟಿ ನೀಡುವವರಲ್ಲಿ ಅಬ್ಬಕ್ಕನ ಬಗ್ಗೆ ಜಾಗೃತಿ ಮೂಡಿಸಲು ಥೀಮ್ ಪಾರ್ಕ್ ನ ಅವಶ್ಯಕತೆಯಿದೆ. ಉಳ್ಳಾಲಕ್ಕೆ ಭೇಟಿ ನೀಡುವವರು ಅಬ್ಬಕ್ಕನ ಬಗ್ಗೆ ಸ್ಪೂರ್ತಿದಾಯಕ ಕಥೆಯೊಂದಿಗೆ ತಮ್ಮ ಮನೆಗೆ ಮರಳಬೇಕು. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆಯುತ್ತೇನೆ’ ಎಂದರು.

ರಾಣಿ ಅಬ್ಬಕ್ಕ ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯುತ್ತೇನೆ. ರಾಣಿ ಅಬ್ಬಕ್ಕ ಉಳ್ಳಾಲಕ್ಕೆ ಮಾತ್ರ ಸೀಮಿತವಾದ ಮಹಿಳಾ ಯೋಧೆಯಾಗಿರಲಿಲ್ಲ. ಅವರು ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದಾರೆ. ಆದಾಗ್ಯೂ, ಪೋರ್ಚುಗೀಸರ ವಿರುದ್ಧ ರಾಣಿ ಅಬ್ಬಕ್ಕ ನಡೆಸಿದ ಧೈರ್ಯಶಾಲಿ ಹೋರಾಟಗಳ ಬಗ್ಗೆ ಅನೇಕ ಮಕ್ಕಳಿಗೆ ತಿಳಿದಿಲ್ಲ’ ಎಂದು ಅವರು ಹೇಳಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರ ರಾಣಿ ಅಬ್ಬಕ್ಕ ಅವರ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ, ನಾಗರಿಕ ವಿಮಾನಯಾನ ಸಚಿವರು, ಡಿಜಿಸಿಎಗೆ ಪತ್ರ ಬರೆಯುವುದಾಗಿ ಕರಂದ್ಲಾಜೆ ತಿಳಿಸಿದರು.

Check Also

ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ …

Leave a Reply

Your email address will not be published. Required fields are marked *

You cannot copy content of this page.